ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ : ಸಂಚಾರ ಸಂಪೂರ್ಣ ಬಂದ್

ಆಗುಂಬೆ ಘಾಟಿಯಲ್ಲಿ ವ್ಯಾಪಕ ಮಳೆಯಾಗಿರುವ ಹಿನ್ನಲೆಯಲ್ಲಿ ತಿರುವಿನಲ್ಲಿ ಮಣ್ಣುಕುಸಿದಿದ್ದು, ರಸ್ತೆಗೆ ಅಡ್ಡಲಾಗಿ ಭಾರೀ ಗಾತ್ರದ ಮರಬಿದ್ದಿದೆ. ಪರಿಣಾಮ ಸಂಚಾರ ಸಂಪೂರ್ಣ ಬಂದ್ ಆಗಿದೆ. 



ಈ ಮಾರ್ಗದಲ್ಲಿ ಹೋದವರು ಸಂಚಾರ ಬಂದ್ ಆಗಿರುವ ಹಿನ್ನಲೆಯಲ್ಲಿ ವಾಪಾಸ್ ಆಗುತಿದ್ದಾರೆ. ಆಗುಂಬೆ ಘಾಟಿ ಕೆಳಗೆ ಸೋಮೇಶ್ವರ ಚೆಕ್​​ಪೋಸ್ಟ್​ ಬಳಿಯಲ್ಲಿಯೇ ವಾಹನಗಳನ್ನು ತಡೆಯಲಾಗುತ್ತಿದೆ. 

ಮೇಲ್ಬಾಗ ಆಗುಂಬೆ ಘಾಟಿ ಚೆಕ್​ಪೋಸ್ಟ್​ ಬಳಿಯೇ ವಾಹನಗಳನ್ನು ವಾಪಸ್​ ಕಳುಹಿಸಲಾಗುತ್ತಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

ವೀಡಿಯೋ ಇಲ್ಲಿ ವೀಕ್ಷಿಸಿ👇


Leave a Reply

Your email address will not be published. Required fields are marked *