ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಗ ಅಸಮರ್ಥ ನಾಯಕರು ಎಂದು ಸಿದ್ದರಾಮಯ್ಯ ಅವರು ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಅವರು ನೀಡುವ ಸರ್ಟಿಫಿಕೇಟ್ ನನಗೆ ಅಗತ್ಯವಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಎಷ್ಟು ಮಂದಿ ಕೊಲೆಯಾಗಿತ್ತು..? ಅಂದು ಇಡೀ ಪೊಲೀಸ್ ಇಲಾಖೆಯನ್ನು ಕೆಂಪಯ್ಯ ಹಿಡಿತಕ್ಕೆ ನೀಡಲಾಗಿತ್ತು. ಪೊಲೀಸರು ಬೀದಿಗಿಳಿದು ಹೋರಾಟ ನಡೆಸಲು ಮುಂದಾಗಿದ್ದರು. ಹೀಗಿರುವಾಗ ಸಿದ್ದರಾಮಯ್ಯ ನನ್ನನ್ನು ಅಸಮರ್ಥ ಎನ್ನುತ್ತಾರೆ. ಸಿದ್ದರಾಮಯ್ಯ ಅವರು ಅಸಮರ್ಥರಾಗಿದ್ದರಿಂದಲೇ ಅವರ ಕ್ಷೇತ್ರದಲ್ಲಿ ಅವರೇ ಸೋತಿದ್ದು ಎಂದರು.
ಬೆಂಗಳೂರಿನ ನನ್ನ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು ಎಂದು ಹೇಳಿಕೊಂಡ ಕೆಲವರು ಪ್ರತಿಭಟನೆ ಮಾಡಿದ್ದಾರೆ. ಆ ಬಗ್ಗೆ ಗಮನ ಹರಿಸುವಂತೆ ನಾನು ಪೊಲೀಸರರಿಗೆ ಹೇಳಿದ್ದೇನೆ. ಅವರು ಎಬಿವಿಪಿ ಕಾರ್ಯಕರ್ತರೇ ಆಗಿದ್ದರೆ, ನಾನು ಅವರಿಗೆ ಮನವಿ ಮಾಡಿಕೊಳ್ಳುತ್ತೇನೆ. ಸರ್ಕಾರ ನಿಮ್ಮ ಭಾವನೆಯನ್ನು ಅರ್ಥ ಮಾಡಿಕೊಳ್ಳುತ್ತದೆ. ನಾವು ಸಾಕಷ್ಟು ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ. ಯೋಗಿ ಮಾದರಿಯೇ ಬೇರೆ ನಮ್ಮ ಪರಿಸ್ಥಿತಿಯೇ ಬೇರೆ.. ನಮಗೆ ನಮ್ಮದೇ ಆದ ಕಾರಣ ಇದೆ.
ಶಾಂತಿ ಸಭೆ ನಡೆಯುತ್ತಿದೆ. ಪೊಲೀಸರು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಎಂದರು.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…