ಒಂದು ಬೈಕ್ ಬೆನ್ನತ್ತಿದ್ದ ಪೊಲೀಸರಿಗೆ ದೊರೆತಿದ್ದು ಬರೋಬ್ಬರಿ 16 ಬೈಕ್,ಒಂದು ಕಾರು ಜೊತೆಗೆ ಶ್ರೀಗಂಧವೂ ಪತ್ತೆಯಾಗಿದೆ. ಬೈಕ್ ವೊಂದರ ಕಳ್ಳತನ ಪ್ರಕರಣದ ಬೆನ್ನತ್ತಿದ ಶಿರಾಳಕೊಪ್ಪ ಪೊಲೀಸರಿಗೆ ಕಳ್ಳರು ಕೊಟ್ಟರು ಬಿಗ್ ಶಾಕ್.
ಶಿರಾಳಕೊಪ್ಪ ಪಟ್ಟಣದ ಬಸ್ ನಿಲ್ದಾಣದ ಹತ್ತಿರ ನಿಲ್ಲಿಸಿದ್ದ ಕೆ.ಎ-17 ಇ.ಎ-4008 ನೋಂದಣಿ ಸಂಖ್ಯೆಯ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ ಕಳುವು ಆಗಿರುವ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಪ್ರಾರಂಭಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು.
ಈ ಸಂಬಂಧ ಪಿಎಸ್ಐ ಶಿರಾಳಕೊಪ್ಪ ಮತ್ತು ಸಿಬ್ಬಂಧಿಗಳ ತಂಡವು ಪ್ರಕರಣದ ತನಿಖೆ ಕೈಗೊಂಡು ಇಂದು ಆರೋಪಿಗಳಾದ 1) ಸಂಡ ಗ್ರಾಮದ ಸೈಯ್ಯದ್ ಇಸ್ರಾರ್, 26 ವರ್ಷ, 2)ಪುನೇದನಹಳ್ಳಿಯ ರಾಕೇಶ್, 24 ವರ್ಷ ಹಾಗೂ 3)ಶಿರಾಳಕೊಪ್ಪ ಟೌನ್ ನಿನ ಗೋಪಾಲ, 28 ವರ್ಷ,ಇವರುಗಳನ್ನು ದಸ್ತಗಿರಿ ಮಾಡಿ ತನಿಖೆ ನಡೆಸಿದಾಗ ಬೃಹತ್ ಕಳ್ಳರ ಜಾಲ ಪತ್ತೆಯಾಗಿದೆ.
ಆರೋಪಿರಿಂದ ಕಳ್ಳತನ ಮಾಡಿದ ಅಂದಾಜು ಮೌಲ್ಯ 11,00,000/- ರೂ ಗಳ ಒಟ್ಟು 16 ಬೈಕ್ ಗಳು ಮತ್ತು ಇಟ್ಟಿಗೆ ಹಳ್ಳಿ ಅರಣ್ಯ ಉಪ ವಲಯ ವ್ಯಾಪ್ತಿಯಲ್ಲಿ ದಾಖಲಾದ 02 ಶ್ರೀ ಗಂಧದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಅಂದಾಜು ಮೌಲ್ಯ 18,632 ರೂ ಗಳ 5 ಕೆಜಿ 480 ಗ್ರಾಂ ತೂಕದ ಶ್ರೀಗಂಧದ ತುಂಡು ಮತ್ತು ಚಕ್ಕೆಗಳು ಹಾಗೂ ಈ ಕೃತ್ಯಕ್ಕೆ ಬಳಸಿದ ಚವರ್ ಲೆಟ್ ಕಾರು ಅಮಾನತ್ತು ಪಡಿಸಿಕೊಳ್ಳಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್