ಒಂದೇ ವೇದಿಕೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದ ಘಟಾನುಘಟಿಗಳಾದ ಆರಗ-ಕಿಮ್ಮನೆ-ಆರ್ ಎಂಎಂ & ರಾಜಾರಾಂ : ಎಲ್ಲಿಗೊತ್ತಾ?? ಈ ಸುದ್ದಿ ನೋಡಿ

ತೀರ್ಥಹಳ್ಳಿ : ಮಲೆನಾಡಿನ ಸುಂದರ ಊರು, ರಾಷ್ಟ್ರಕವಿ ಕುವೆಂಪು ಅವರ ತವರೂರು, ಪ್ರಜ್ಞಾವಂತರ ಕ್ಷೇತ್ರವೆಂದೇ ಬಿಂಬಿತವಾದ ಕ್ಷೇತ್ರವೇ ತೀರ್ಥಹಳ್ಳಿ. ಅದರಲ್ಲೂ ರಾಜಕಾರಣದಲ್ಲಿ ತನ್ನದೇ ಚಾಪು ಮೂಡಿಸಿರುವ ಕ್ಷೇತ್ರವೆಂದರೆ ಅದು ತೀರ್ಥಹಳ್ಳಿ. ಒಂದೇ ಪಕ್ಷದ ರಾಜಕಾರಣಿಗಳನ್ನೇ ಒಂದು ವೇದಿಕೆ ಮೇಲೆ ಒಟ್ಟುಗೂಡಿಸುವುದು ಕಷ್ಟ. ಅಂತಹದರಲ್ಲಿ ಮೂರು ಪಕ್ಷದ ನಾಯಕರನ್ನು ಒಂದು ಗೂಡಿಸುವದು ಕೇಳಬೇಕಾ ? ಅದೊಂದು ರೀತಿ ದೊಡ್ಡ ಸಾಧನೆಯೇ ಸರಿ. ಆದರೆ ಮೂರು ಪಕ್ಷದ ನಾಲ್ವರು ನಾಯಕರನ್ನು ಒಂದೇ ವೇದಿಕೆ ಮೇಲೆ ಕೂರಿಸಿದ ಸಾಧನೆ ಮಾಡಿದ್ದೂ ತೀರ್ಥಹಳ್ಳಿಯ ಪತ್ರಕರ್ತರು.

ಹೌದು, ಕಾರ್ಯನಿರತ ಪತ್ರಕರ್ತರ ಸಂಘದಿಂದ ನೆಡೆದ ಪತ್ರಿಕಾ ದಿನಾಚರಣೆಯ ಪ್ರಯುಕ್ತ ತೀರ್ಥಹಳ್ಳಿ ಕ್ಷೇತ್ರದ ಎಲ್ಲಾ ಪಕ್ಷದ ರಾಜಕಾರಣಿಗಳನ್ನು ಆಹ್ವಾನಿಸಲಾಗಿತ್ತು. ಇದರಲ್ಲಿ ಎಲ್ಲರೂ ಬರುತ್ತಾರಾ ಎಂಬ ಪ್ರೆಶ್ನೆ ಪತ್ರಕರ್ತರಿಗೂ ಮೂಡಿತ್ತು. ಕಾರಣ ರಾಜಕೀಯವೆಂಬುದೇ ಹಾಗೆ. ಆದರೆ ತೀರ್ಥಹಳ್ಳಿಯ ರಾಜಕೀಯದಲ್ಲಿ ಹಾಗಾಗಲಿಲ್ಲ.

ಬಿಜೆಪಿ ಪಕ್ಷದ ರಾಜ್ಯದ ಗೃಹಸಚಿವರು, ತೀರ್ಥಹಳ್ಳಿ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವಿನ ಸರದಾರರು ಆಗಿರುವ ಆರಗ ಜ್ಞಾನೇಂದ್ರ ಒಂದೆಡೆಯಾದರೆ ಕಾಂಗ್ರೆಸ್ ಪಕ್ಷದಿಂದ ಸದಾ ಹಸನ್ಮುಖಿಯಾಗಿರುವ, ಮಾಜಿ ಶಿಕ್ಷಣ ಸಚಿವರಾಗಿದ್ದ ಕಿಮ್ಮನೆ ರತ್ನಾಕರ್  ಮತ್ತು ಅಪೆಕ್ಸ್ ಬ್ಯಾಂಕ್ ನ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಆಗಿರುವ ಆರ್ ಎಂ ಮಂಜುನಾಥ ಗೌಡರು ಒಂದೆಡೆಯಾದರೆ, ಈಗಿನ ರಾಜಕೀಯದಲ್ಲಿ ಹೊಸ ಭರವಸೆ ಬೇಕೆಂದು ರಾಜಕೀಯಕ್ಕೆ ಎಂಟ್ರಿ ಕೊಟ್ಟಿರುವ ಜೆಡಿಎಸ್ ನ ಯಡೂರ್ ರಾಜಾರಾಂ ಒಂದೆಡೆ,  ಹೀಗೆ ನಾಲ್ವರು ರಾಜಕೀಯ ಮುಖಂಡರನ್ನು ಒಂದೇ ವೇದಿಕೆ ಮೇಲೆ ತಂದ ಕೀರ್ತಿ ತೀರ್ಥಹಳ್ಳಿ ಪತ್ರಕರ್ತರದ್ದು.

ರಾಜಕೀಯದಲ್ಲಿ ಅದೇನೇ ಇರಲಿ ಬಿಡಿ, ಈ ನಾಲ್ವರನ್ನು ಒಂದೇ ವೇದಿಕೆ ಮೇಲೆ ಕಂಡ ಜನರು ಮಾತ್ರ ದಿಲ್ ಖುಷ್ ಆಗಿದ್ದಂತೂ ನಿಜ. ಈ ಕ್ಷೇತ್ರದ ರಾಜಕಾರಣಿಗಳು ಯಾವಾಗಲು ಹೀಗೆ ಇರಲಿ ಎಂದು ಹಾರೈಸಿದ್ದು ನಿಜ.

ವರದಿ : ಅಕ್ಷಯ್ ಕುಮಾರ್
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

10 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

16 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

2 days ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

2 days ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

2 days ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

2 days ago