ಕಸ್ತೂರಿ ರಂಗನ್ ವರದಿಯನ್ನು ಜಾರಿಯಾಗಲು ಬಿಡುವುದಿಲ್ಲ – ದೆಹಲಿಗೆ ಮಲೆನಾಡ ಶಾಸಕರ ನಿಯೋಗ : ಹರತಾಳು ಹಾಲಪ್ಪ

ಮಲೆನಾಡಿನ ಜನಜೀವನಕ್ಕೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಸೋಮವಾರ ನವದೆಹಲಿಯಲ್ಲಿ ಮಲೆನಾಡು ಭಾಗದ ಸಂಸದರು ಮತ್ತು ಶಾಸಕರು ಅರಣ್ಯ ಮತ್ತು ಪರಿಸರ ಖಾತೆ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತಿದ್ದೇವೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು.

ಸಾಗರ ನಗರಸಭೆ ಆವರಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಕೈಬಿಡಲು ರಾಜ್ಯ ಸರ್ಕಾರ ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿದೆ. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ, ಈ ವರದಿಯನ್ನು ಕೈಬಿಡಬೇಕು. ಇಲ್ಲವಾದಲ್ಲಿ ಮಲೆನಾಡು ಭಾಗದಲ್ಲಿ ರಕ್ತಕ್ರಾಂತಿಯಾಗುತ್ತದೆ ಎಂದು ಮನವಿ ಸಲ್ಲಿಸಲಾಗಿತ್ತು. ಆಗ ವರದಿಯನ್ನು ಹಿಂದಕ್ಕೆ ಪಡೆದಿದ್ದರು. ಇದೀಗ ಮತ್ತೆ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ವಿಷಯವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು.

ಕಸ್ತೂರಿರಂಗನ್ ವರದಿ ಬಗ್ಗೆ ನಿಮಗೆಷ್ಟು ಗೊತ್ತು..????ವರದಿ ಅನುಷ್ಟಾನಗೊಂಡರೆ ಶಿವಮೊಗ್ಗ ಜಿಲ್ಲೆಯ ಯಾವ್ಯಾವ ಹಳ್ಳಿಗಳು ನಶಿಸಿಹೋಗುತ್ತವೆ ಗೊತ್ತಾ???? ಈ ಬಗ್ಗೆ ಕಂಪ್ಲೀಟ್ ಸ್ಟೋರಿ ಇಲ್ಲಿ ಓದಿ….

ಜು. 18 ಕ್ಕೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಈ ಸಂಬಂಧ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿಗಳಾಗಿರುವ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಮಲೆನಾಡಿನ ಎಲ್ಲ ಶಾಸಕರು ಪಾಲ್ಗೊಂಡು ವರದಿಯನ್ನು ಸಾರಸಗಟಾಗಿ ತಿರಸ್ಕರಿಸುವ ನಿರ್ಣಯ ಕೈಗೊಳ್ಳಲಾಗಿತ್ತು. ಇದೀಗ ಕೇಂದ್ರದ ಅರಣ್ಯ ಮಂತ್ರಾಲಯ ಮತ್ತೊಂದು ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟದಲ್ಲಿ ವರದಿಯನ್ನು ಕೈಬಿಡುವಂತೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಮತ್ತು ವರದಿಯನ್ನು ಯಥಾವತ್ತಾಗಿ ಕೈಬಿಡಲು ಒತ್ತಾಯಿಸಲು ಸಂಸದ ಬಿ.ವೈ.ರಾಘವೇಂದ್ರ, ಶೋಭಾ ಕರಂದ್ಲಾಜೆ, ಆರಗ ಜ್ಞಾನೇಂದ್ರ, ಸ್ಪೀಕರ್ ಕಾಗೇರಿ ಸೇರಿದಂತೆ ಮಲೆನಾಡಿನ ಎಲ್ಲ ಶಾಸಕರು ದೆಹಲಿಗೆ ನಿಯೋಗದ ಮೂಲಕ ಹೋಗುತ್ತಿದ್ದೇವೆ. ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಹ ನಿಯೋಗದಲ್ಲಿ ಪಾಲ್ಗೊಳ್ಳಲು ಮನವಿ ಮಾಡಲಾಗಿದೆ ಎಂದರು.

ತಾಲೂಕಿನಲ್ಲಿ 125 ಕ್ಕೂ ಹೆಚ್ಚು ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪಟ್ಟಿಗೆ ಸೇರಿಸಲಾಗಿದೆ. ಕಸ್ತೂರಿ ರಂಗನ್ ಬಗ್ಗೆ ನಮಗೆ ಗೌರವವಿದೆ. ಆದರೆ ವರದಿ ತಯಾರಿಸುವಾಗ ಸ್ಥಳಕ್ಕೆ ಭೇಟಿ ಕೊಡಲಿಲ್ಲ. ಸೆಟ್‌ಲೈಟ್ ಮೂಲಕ ಎಲ್ಲೆಲ್ಲಿ ಹಸಿರು ಕಾಣುತ್ತದೆಯೋ ಅದನ್ನು ಪಟ್ಟಿಗೆ ಸೇರಿಸಲಾಗಿದೆ. ಸೆಟ್‌ಲೈಟ್‌ನಲ್ಲಿ ನೋಡಿದರೆ ಅಡಿಕೆ ತೋಟ, ರಬ್ಬರ್ ಪ್ಲಾಂಟೇಶನ್ ಎಲ್ಲವೂ ಹಸಿರಾಗಿ ಕಾಣುತ್ತದೆ. ಇದರ ಆಧಾರದ ಮೇಲೆ ಮಲೆನಾಡು ಭಾಗಗಳನ್ನು ಸೇರಿಸಿದ್ದು ಅವೈಜ್ಞಾನಿಕ ಕ್ರಮವಾಗಿದೆ. ಇದನ್ನು ಮನವರಿಕೆ ಮಾಡಲು ನವದೆಹಲಿಗೆ ಹೋಗಲಾಗುತ್ತಿದೆ ಎಂದು ಹೇಳಿದರು.

ರಿಪ್ಪನ್‌ಪೇಟೆ ಸಮೀಪ ಭೀಕರ ಕಾರು ಅಪಘಾತ : ಇಬ್ಬರ ಸ್ಥಿತಿ ಗಂಭೀರ

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

5 hours ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

6 hours ago

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ – ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ ಪರಿಹಾರ

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…

18 hours ago

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…

22 hours ago

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ – ಇಬ್ಬರ ಬಂಧನ

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…

1 day ago

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…

1 day ago