ಕೆಂಚನಾಳದಲ್ಲಿ ರೈಲ್ವೆ ಹಳಿ ಮೇಲೆ ಉರುಳಿಬಿದ್ದ ಬೃಹದಾಕಾರದ ಮರ : ರೈಲ್ವೆ ಸಂಚಾರ ಅಸ್ತವ್ಯಸ್ತ

ರಿಪ್ಪನ್‌ಪೇಟೆ : ಕೆಂಚನಾಳ ರೈಲ್ವೆ ನಿಲ್ದಾಣದ ಮುಂಭಾಗದ ರೈಲು ಹಳಿಯ ಮೇಲೆ ಮರವೊಂದು ಉರುಳಿಬಿದ್ದ ಘಟನೆ ರವಿವಾರ ಬೆಳಗಿನ ಜಾವ ನಡೆದಿದೆ.


ಕೆಂಚನಾಳ ರೈಲ್ವೆ ನಿಲ್ದಾಣದ ಎದುರುಗಡೆ ಇರುವ ಸುಮಾರು ನೂರು ವರ್ಷಕ್ಕೂ ಹಳೆಯ ಮರಕ್ಕೆ ನೆಲಕ್ಕುರುಳಿದೆ.ಇದರಿಂದ ತಾಳಗುಪ್ಪ-ಬೆಂಗಳೂರು ರೈಲು ಎರಡು ಗಂಟೆ ತಡವಾಗಿ ಸಂಚರಿಸಿತು.

ತಾಳಗುಪ್ಪ-ಬೆಂಗಳೂರು ರೈಲು ಸಾಗರ ರೈಲ್ವೆ ನಿಲ್ದಾಣಕ್ಕೆ 06.30ಕ್ಕೆ ಆಗಮಿಸಬೇಕಾಗಿತ್ತು ಆದರೆ ಎರಡು ಗಂಟೆ ತಡವಾಗಿ ಅಂದರೆ 8:30ಕ್ಕೆ ಆಗಮಿಸಿದೆ. ಹಾಗೂ ಸಾಗರದಿಂದ-ಮೈಸೂರಿಗೆ ಹೋಗುವ ರೈಲು ಅರ್ಧ ಗಂಟೆ ತಡವಾಗಿ ಸಂಚರಿಸಿದೆ.


ಘಟನೆಯ ಬಗ್ಗೆ ಮಾಹಿತಿ ಪಡೆಯುತ್ತಲೇ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಮಾರ್ಗದಲ್ಲಿ ಕಾರ್ಯಾಚರಣೆ ನಡೆಸಿ ರೈಲ್ವೆ ಹಳಿ ಮೇಲಿದ್ದ ಮರಗಳನ್ನು ತೆರವುಗೊಳಿಸಿದರು. ಇದೀಗ ಈ ಮಾರ್ಗ ರೈಲುಗಳ ಸಂಚಾರಕ್ಕೆ ಮುಕ್ತಗೊಂಡಿದೆ.


Leave a Reply

Your email address will not be published. Required fields are marked *