ನಾಲ್ವರು ಕೂಡ ಪಶ್ಚಿಮ ಬಂಗಾಳದ ಮೂಲದವರಾಗಿದ್ದು ತೀರ್ಥಹಳ್ಳಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಖಚಿತ ಮಾಹಿತಿ ಮೇರೆಗೆ ತೀರ್ಥಹಳ್ಳಿಯ ಡಿವೈಎಸ್ಪಿ ಇವರ ನೇತೃತ್ವದಲ್ಲಿ ಮಾರುವೇಷದಲ್ಲಿ ಹೋಗಿ ಆರೋಪಿಗಳನ್ನು ಬಂಧಿಸಿದ್ದು ಒಂದೂವರೆ ಕೆಜಿ ಗಾಂಜಾ ಕೂಡ ವಶಕ್ಕೆ ಪಡೆಯಲಾಗಿದೆ.
> ಕಾರ್ಯಾಚರಣೆಯಲ್ಲಿ ಸಿಪಿಐ ಅಶ್ವಥ್, ಪಿಎಸ್ಐ ಸಂತೋಷ್ ಕುಮಾರ್, ಸಿಬ್ಬಂದಿಗಳಾದ ಪುನೀತ್, ಪ್ರವೀಣ್ ಕುಮಾರ್, ದೀಪಕ್, ಅವಿನಾಶ್, ಪ್ರದೀಪ್, ಸುರೇಶ ನಾಯ್ಕ್, ವೀರೇಂದ್ರ, ರವಿ, ಅವಿನಾಶ್ ವಿಜಯ್ ಮುಂತಾದವರು ಪಾಲ್ಗೊಂಡಿದ್ದರು.



