ತುಂಗಾ ನದಿಗೆ ಬಾಗಿನ ಅರ್ಪಿಸಿದ ಗೃಹಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ : ಮಲೆನಾಡಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು ತೀರ್ಥಹಳ್ಳಿಯ ಪವಿತ್ರ ತುಂಗಾ ನದಿಯ ನೀರು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿದ್ದು ಗುರುವಾರ ಸಂಜೆ ರಾಜ್ಯ ಸರ್ಕಾರದ ಗೃಹಸಚಿವರು, ತೀರ್ಥಹಳ್ಳಿ ಕ್ಷೇತ್ರದ ಶಾಸಕರು ಆಗಿರುವ ಆರಗ ಜ್ಞಾನೇಂದ್ರ ಅವರು ತುಂಗಾ ನದಿಗೆ  ಬಾಗಿನ ಅರ್ಪಿಸಿದರು.


ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ಮಳೆ ಎಷ್ಟು ಬೇಕಾದರೂ ಬರಲಿ, ನದಿ ಉಕ್ಕಿ ಹರಿಯಲಿ ಅದು ಸಮೃದ್ಧಿಯ ಸಂಕೇತ ಆದರೆ ಎಲ್ಲೂ ಕೂಡ ಹನಿಯಾಗದ ರೀತಿಯಲ್ಲಿ ಕಾಪಾಡು ಎಂದು ರಾಮೇಶ್ವರನಲ್ಲಿ ಬೇಡಿ ಬಾಗಿನ ಅರ್ಪಿಸಿದ್ದೇವೆ ಎಂದು ತಿಳಿಸಿದರು. ತೀರ್ಥಹಳ್ಳಿ ಕ್ಷೇತ್ರದಲ್ಲಿ ಹಲವಾರು ಮನೆಗಳು ಬಿದ್ದು ಹೋಗಿವೆ. ಅದಕ್ಕೆ ಸರ್ಕಾರ ಪ್ರತಿ ಮನೆಗೆ ಹತ್ತು ಸಾವಿರ ರೂ ಆರಂಭದ ಹಣವಾಗಿ ನೀಡುತ್ತಿದೆ. ನಂತರ ಅದರ ಸಂಪೂರ್ಣ ಮಾಹಿತಿ ತಿಳಿದು 5 ಲಕ್ಷದ ವರೆಗೆ ದುರಸ್ಥಿಗೆ ಮತ್ತು ಹೊಸ ಮನೆ ಕಟ್ಟಲು ನೀಡುತ್ತದೆ ಎಂದು ತಿಳಿಸಿದರು.

ಮೊದಲಿನ ಸರ್ಕಾರ ಇದ್ದಾಗ ಜಿಲ್ಲಾಧಿಕಾರಿ ಹತ್ತಿರ ಮಾತ್ರ ಹಣ ಇರುತ್ತಿತ್ತು ಆದರೆ ನಮ್ಮ ಸರ್ಕಾರ ಬಂದ ನಂತರ ತಹಸೀಲ್ದಾರ್ ಹತ್ತಿರವು ಹಣ ಇರುತ್ತದೆ. ತಕ್ಷಣದ ಪರಿಹಾರಕ್ಕೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಈ ವ್ಯವಸ್ಥೆ ತಂದಿದ್ದೆವೆ ಎಂದು ತಿಳಿಸಿದರು.

ಆಗುಂಬೆ ಘಾಟಿ ಬಗ್ಗೆ ಮಾತನಾಡಿ ಸಧ್ಯಕ್ಕೆ ಸಣ್ಣ ಪುಟ್ಟ ವಾಹನಗಳ ಓಡಾಟಕ್ಕೆ ಅನುಮತಿ ನೀಡಲಾಗಿದೆ. ಸ್ವಲ್ಪ ದಿನದಲ್ಲಿ ಬಸ್ ಓಡಾಡಲು ಅವಕಾಶ ಮಾಡಿಕೊಡಲಾಗುವುದು ಎಂದರು

ಶಿವಮೊಗ್ಗದಲ್ಲಿ ನೆಡೆದ ರೌಡಿ ಶೀಟರ್ ಹತ್ಯೆ ಬಗ್ಗೆ ಮಾತನಾಡಿ ಸದ್ಯದಲ್ಲೇ ಅವರನ್ನು ಬಂಧಿಸುವ ಕೆಲಸ ಆಗುತ್ತದೆ. ಪೊಲೀಸರಿಗೆ ಅದರ ಬಗ್ಗೆ ಈಗಾಗಲೇ ಮಾಹಿತಿ ಇದೆ ಅದೊಂದು ಗುಂಪು ಅದನ್ನು ಸಂಪೂರ್ಣ ತಡೆಗಟ್ಟಬೇಕಿದೆ. ಶಿವಮೊಗ್ಗ ರೌಡಿಗಳ ಸೆಂಟರ್ ಆಗಿದೆ. ಕೊತ್ವಾಲ ರಾಮಚಂದ್ರನಿಂದ ಪರಂಪರೆ ಬೆಳೆದುಕೊಂಡು ಬಂದಿದೆ. ಅದನ್ನು ಹೇಗಾದರೂ ಮಾಡಿ ಇಲ್ಲಿಗೆ ಮಂಗಳ ಹಾಡಬೇಕು ಎಂದು ಈಗಾಗಲೇ ಪೊಲೀಸರಿಗೆ ಸೂಚಿಸಿದ್ದೇನೆ ಎಂದರು.

ಇನ್ನು ಪಿಎಸ್ಐ ನೇಮಕಾತಿ ಪ್ರಕರಣದಲ್ಲಿ ಬಂಧನವಾದ ಗಣಪತಿ ಭಟ್ ಬಗ್ಗೆ ಮಾತನಾಡಿ ಉತ್ತರ ಕನ್ನಡದಲ್ಲಿ ಗಜಾನನ ಭಟ್, ಗಣಪತಿ ಭಟ್ ಈ ರೀತಿಯ ಹೆಸರು ಮಾಮೂಲಿ. ನನ್ನ ಜೊತೆ ಇದ್ದಿದ್ದು ಗಣಪತಿ ಭಟ್ ಹೌದು ಆದರೆ ಅವರು ಶಿರಸಿ ಇವರು ಕುಮುಟಾ ಗಣಪತಿ ಭಟ್ ಅಷ್ಟೇ. ನಮ್ಮ ವಿರೋಧಿಗಳು ಅಂತೂ ಸಿಕ್ಕಿ ಹಾಕಿಕೊಂಡ ಅಂತ ನನ್ನ ಬಗ್ಗೆ ಅಂದುಕೊಂಡಿದ್ರು, ಬಹಳ ಸಂತೋಷ ಪಟ್ಟಿದ್ರು ಆದರೆ ಅದು ಹಾಗಾಗಲಿಲ್ಲ. ನನ್ನ ಜೊತೆ ಇರುವವರು ಹೇಗಿದ್ದಾರೋ ಹಾಗೆ ಇದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ, ತಹಸೀಲ್ದಾರ್ ಅಮೃತ್ ಅತ್ರೇಶ್, ಪಟ್ಟಣ ಪಂಚಾಯತ್ ಅಧ್ಯಕ್ಷೆ ಶಬನಮ್, ಬಾಳೆಬೈಲು ರಾಘವೇಂದ್ರ, ಸೊಪ್ಪುಗುಡ್ಡೆ ರಾಘವೇಂದ್ರ ಸೇರಿ ಹಲವರು ಉಪಸ್ಥಿತರಿದ್ದರು.

ಸಂಪೂರ್ಣ ವಿಡಿಯೋ ಇಲ್ಲಿದೆ ವೀಕ್ಷಿಸಿ



ವರದಿ : ಅಕ್ಷಯ್ ಕುಮಾರ್
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

7 hours ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

9 hours ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

9 hours ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

9 hours ago

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

19 hours ago

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

1 day ago