ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ನಡುವೆ ಒತ್ತಡದ ಬದುಕಿನಲ್ಲಿ ಜ್ಞಾನದ ಬೆಳಕಿನ ದೀವಿಗೆ ನೀಡಿದ ಗುರು ಸ್ಮರಣೆ ಅತಿ ಅಗತ್ಯ ಎಂದು ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಹೇಳಿದರು.
ಇಂದು ರಾಜ್ಯದ ಆರ್ಯ ಈಡಿಗರ ಪವಿತ್ರ ಯಾತ್ರಾ ಸ್ಥಳವಾದ ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾ ಸಂಸ್ಥಾನದಲ್ಲಿ ಗುರು ಪೂರ್ಣಿಮೆಯ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು ಇಂದಿನ ಜನರಿಗೆ ಶಿಕ್ಷಣ ಹಾಗೂ ಸಂಸ್ಕಾರದ ಅಗತ್ಯವಿದೆ.ಸಂಪತ್ತು ಹಾಗೂ ಭೌತಿಕ ಆಸ್ತಿ ಇದ್ದರೂ ಯಾರು ಸಹ ನೆಮ್ಮದಿಯಿಂದ ಬಾಳುತ್ತಿಲ್ಲ,ಸಮಾಧಾನ ಎಂಬುದು ಅಂತರಂಗದ ಸಂಪತ್ತಾಗಿದ್ದು ನಮ್ಮ ಹಿರಿಯರು ತಿಳಿಸಿರುವ ಜ್ಞಾನದ ಬೆಳಕು ಮಾತ್ರ ನಮ್ಮ ಅಜ್ಞಾನದ ಕತ್ತಲೆ ನಿವಾರಿಸಿ ಬೆಳಕಿನ ದಾರಿ ತೋರಿಸಿ ಜೀವನದಲ್ಲಿ ಶಾಂತಿ ನೆಮ್ಮದಿ ನೀಡುತ್ತದೆ ಆದುದರಿಂದ ನಾವೆಲ್ಲರೂ ವ್ಯಾಸ ಪೂರ್ಣಿಮೆಯಂದು ಗುರುವಿನ ಸ್ಮರಣೆ ಮಾಡುವ ಮೂಲಕ ಅವರು ತಿಳಿಸಿರುವ ಸದ್ವಿಚಾರದ ಹಾದಿಯಲ್ಲಿ ಸಾಗೋಣ ಎಂದರು.
ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಹೊಸನಗರ ತಾಲೂಕು ಆರ್ಯ ಈಡಿಗ ಸಂಘ ಅಧ್ಯಕ್ಷ ಬಿ.ಪಿ ರಾಮಚಂದ್ರ. ರಿಪ್ಪನ್ ಪೇಟೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶ್ವೇತಾ ಬಂಡಿ, ತೀರ್ಥಹಳ್ಳಿ ಲಯನ್ಸ್ ಕ್ಲಬ್ ಅಧ್ಯಕ್ಷ,ಪಾಂಡುರಂಗಪ್ಪ, ನಾಗವೇಣಿ ಚಂದ್ರಶೇಖರ್, ವಿಶಾಲ್ ಕುಮಾರ್, ಲೋಕೇಶ್, ಗಂಗಾಧರ ಹಾರಂಬಳ್ಳಿ, ಶಿವು ಹೊದಲ. ಇನ್ನಿತರರಿದ್ದರು.
ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ. ದ್ವಿತೀಯ ಪಿಯುಸಿ ಅಂತಿಮ ಪದವಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಗೌರವಿಸಿ ಸನ್ಮಾನಿಸಲಾಯಿತು.
ಸನ್ಮಾನಿತರ ಪೋಟೋಗಳನ್ನು ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್