ಬಂಕ್ ಬಾಲು ಹತ್ಯೆಗೆ ಪ್ರತೀಕಾರವಾಗಿ ಹಂದಿ ಅಣ್ಣಿ ಹತ್ಯೆ :ಪೊಲೀಸ್ ವಿಚಾರಣೆ ವೇಳೆ ಬಾಯ್ಬಿಟ್ಟ ಆರೋಪಿಗಳು

ಜುಲೈ14 ರಂದು ಶಿವಮೊಗ್ಗದ ವಿನೋಬನಗರ ಪೊಲೀಸ್ ಚೌಕಿಯ ವೃತ್ತದಲ್ಲಿ ಕುಖ್ಯಾತ ಪಾತಕಿ ಹಂದಿ ಅಣ್ಣಿ ಅಲಿಯಾಸ್ ಅಣ್ಣಪ್ಪ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

ನಡುರಸ್ತೆಯಲ್ಲಿ ಅಣ್ಣಿಯನ್ನು ಹತ್ಯೆ ಮಾಡಿದ ಆರೋಪಿಗಳ ಶೋಧಕ್ಕೆ ಶಿವಮೊಗ್ಗ ಪೊಲೀಸರು 4 ತಂಡ ಕಟ್ಟಿಕೊಂಡು ಆಖಾಡಕ್ಕೆ ಇಳಿದಿದ್ದರು. ದುಷ್ಕರ್ಮಿಗಳ ಜಾಡು ಹಿಡಿದು ಶಿವಮೊಗ್ಗ ಪೊಲೀಸ್ರು ಬೆಂಗಳೂರು, ಕೊಡಗು, ಕಾರವಾರ ಸೇರಿದಂತೆ ಹಲವೇಡೆ ಶೋಧ ಸಹ ನಡೆಸುವ ವೇಳೆಯೇ 8 ಜನ ಕೊಲೆ ಆರೋಪಿಗಳು ಕಳೆದ ಸೋಮವಾರ ರಾತ್ರಿ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಶರಣಾಗಿದ್ದರು.

ಬಳಿಕ ಅಲ್ಲಿನ ಪೊಲೀಸರಿಂದ 8 ಆರೋಪಿಗಳನ್ನು ವಶಕ್ಕೆ ಪಡೆದ ಶಿವಮೊಗ್ಗ ಪೊಲೀಸರು, ಇಲ್ಲಿಗೆ ಕರೆತಂದಿದ್ದರಲ್ಲದೇ ಸ್ವಲ್ಪ ವಿಚಾರಣೆ ಸಹ ನಡೆಸಿದ್ದಾರೆ ಎನ್ನಲಾಗಿದೆ. ಬಳಿಕ ಕೊಲೆ ಆರೋಪಿಗಳಾದ ಕಾಡಾ ಕಾರ್ತಿಕ್ ಅಲಿಯಾಸ್ ಕಾರ್ತಿಕ್, ನಿತಿನ್ ಅಲಿಯಾಸ್ ಭಜರಂಗಿ ಭಾಯ್, ಫಾರುಕ್, ಮಧು, ಆಂಜನೇಯ, ಚಂದನ್, ಮದನ್ ರಾಯ್ , ಮಧುಸೂದನ್ ರನ್ನು ಶಿವಮೊಗ್ಗದ 5ನೇ ಜೆಎಂಎಫ್ ಸಿ ಕೋರ್ಟ್ ಗೆ ಹಾಜರು ಪಡಿಸಿದ್ದರಲ್ಲದೇ, ಹೆಚ್ಚಿನ ವಿಚಾರಣೆಗೆ ಅವಕಾಶ ನೀಡುವಂತೆ ಕಾಲಾವಕಾಶ ಕೋರಿದ್ದರು.
ಅದರಂತೆ ನ್ಯಾಯಾಲಯ 8 ದಿನಗಳ ಕಾಲ ಶಿವಮೊಗ್ಗ ಪೊಲೀಸರ ವಶಕ್ಕೆ ನೀಡಿದ್ದು, ಕೃತ್ಯಕ್ಕೆ ಬಳಸಿದ ಮೊಬೈಲ್, ವಾಹನ, ಮಾರಕಾಸ್ತ್ರಗಳ ರಿಕವರಿ ಜೊತೆ ಆರೋಪಿಗಳ ವಿಚಾರಣೆ ಆರಂಭಿಸಲಾಗಿತ್ತು.

ಹಂದಿ ಅಣ್ಣಿ ಹಾಗೂ ಕಾಡಾ ಕಾರ್ತಿಕ್ ನಡುವಿನ ವೈಷಮ್ಯ :

ಇನ್ನೂ ಶಿವಮೊಗ್ಗ ಪೊಲೀಸರ ಆರಂಭಿಕ ವಿಚಾರಣೆಯಲ್ಲೇ ಕೊಲೆ ಆರೋಪಿಗಳು ಹಂದಿ ಅಣ್ಣಿಯ ಭೀಕರ ಹತ್ಯೆಯ ಹಿಂದಿನ ಕಾರಣವನ್ನು ಬಾಯ್ಬಿಟ್ಟಿದ್ದು, ಹಂದಿ ಅಣ್ಣಿ ಹಾಗೂ ಕಾಡಾ ಕಾರ್ತಿಕ ನಡುವಿನ ವೈಶಮ್ಯವೇ ಕೊಲೆಗೆ ಕಾರಣ ಎಂಬ ಸತ್ಯ ವಿಚಾರಣೆ ವೇಳೆ ಹೊರಬಿದ್ದಿದೆ.

ಬಂಕ್ ಬಾಲು ಹತ್ಯೆಗೆ ಪ್ರತೀಕಾರ ತೀರಿಸುವ ಪ್ರಮಾಣ:

2018ರಲ್ಲಿ ಶಿವಮೊಗ್ಗದ ಹರಿಗೆ ಸಮೀಪದ ಹಾತಿನಗರ ಬಳಿ ರೌಡಿ ಶೀಟರ್ ಬಂಕ್  ಬಾಲುವನ್ನು ಕೊಲೆ ಮಾಡಲಾಗಿತ್ತು. ಬಾಲು ಕೊಲೆಯಾಗುವ ಸಂದರ್ಭದಲ್ಲಿ ಕಾಡಾ ಕಾರ್ತಿಕ್ ಸಹ ಜೊತೆಗೆ ಇದ್ದನು. ಅಂದೇ ತನ್ನ ಸ್ನೇಹಿತರೊಂದಿಗೆ ಹತ್ಯೆಗೆ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಪ್ರಮಾಣ ಸಹ ಮಾಡಿದ್ದ. ಅಂದಿನಿಂದ ಪ್ರತಿಕಾರಕ್ಕೆ ಕಾಯುತ್ತಿದ್ದ ಬಾಲು ಸಹಚರರಾದ ಕಾರ್ತಿಕ್, ಫಾರುಕ್, ನಿತಿನ್ ಹಾಗೂ ಮಧು ಸಮಯ ಸಾಧಿಸಿ, ಹಂದಿ ಅಣ್ಣಿ ಯನ್ನು ಹತ್ಯೆ ಮಾಡಿದ್ದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ.

ಕಾಡಾ ಕಾರ್ತಿಕ್ ಗೆ ತಂಗಿಯ ಮದುವೆಗೂ ಶಿವಮೊಗ್ಗಕ್ಕೆ ಬರಲು ಅವಕಾಶ ನೀಡದ ಹಂದಿ ಅಣ್ಣಿ:

ಜೊತೆಗೆ ಬಂಕ್ ಬಾಲು ಕೊಲೆ ನಂತರದಲ್ಲಿ ಕಾರ್ತಿಕ್ ಹಾಗೂ ಹಂದಿ ಅಣ್ಣಿ ನಡುವೆ ವೈಶಮ್ಯ ಹೆಚ್ಚಾಗಿತ್ತು. ಶಿವಮೊಗ್ಗಕ್ಕೆ ಬಂದರೇ ನಿನ್ನನ್ನು ಬಿಡಲ್ಲ ಎಂದು ಕಾಡಾ ಕಾರ್ತಿಕ್ ಗೆ ಅಣ್ಣಿ ವಾರ್ನಿಂಗ್ ಮಾಡಿದ್ದ. ಅಂದಿನಿಂದ ಬೆಂಗಳೂರಿನ ಸುತ್ತಮುತ್ತ ಕೆಲಸ ಮಾಡಿಕೊಂಡು ಜೀವನ ಮಾಡುತ್ತಿದ್ದ, ಕಾರ್ತಿಕ್ ತಂಗಿಯ ಮದುವೆ ಸಮಯದಲ್ಲೂ ಶಿವಮೊಗ್ಗಕ್ಕೆ ಬರಲೂ ಹಂದಿ ಅಣ್ಣಿ ಬಿಟ್ಟಿರಲಿಲ್ಲ. ಇದೇ ಸಿಟ್ಟಿಗೆ ಹಂದಿ ಅಣ್ಣಿಯನ್ನು ಕೊಲೆ ಮಾಡಿರುವುದಾಗಿ ಆರೋಪಿಗಳು ಬಾಯಿ ಬಿಟ್ಟಿದ್ದಾರೆ

.

ಹಂದಿ ಅಣ್ಣಿ ಕೊಲೆ ಮಾಡಿದ ಹಂತಕರು ಹತ್ಯೆ ಮಾಡಲು ಬಳಸಿದ್ದ ಆಯುಧ ಮತ್ತು ಹತ್ಯೆಯ ನಂತರ ತಾವು ಓಡಾಡಿದ ಊರುಗಳನ್ನೂ ನ್ಯಾಯಾಲಯದ ಮುಂದೆ ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ. ಹೊನ್ನಾಳಿ ರಸ್ತೆಯ ಮೂಲಕ ಹರಿಹರ ಹರಿಹರದಿಂದ ಹುಬ್ಬಳ್ಳಿ,ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬಂದು ಚಿಕ್ಕಮಗಳೂರಿನಲ್ಲಿ ಸರೆಂಡರ್ ಆಗಿರುವುದಾಗಿ ತಿಳಿದು ಬಂದಿದೆ.  ತಾವು ಹೊನ್ನಾಳಿಗೆ ಹೋಗುವಾಗ ಮಾರ್ಗ ಮಧ್ಯದಲ್ಲಿ ಕೆರೆ ಒಂದಕ್ಕೆ ಆಯುಧಗಳನ್ನ ಬಿಸಾಕಿರುವುದಾಗಿ ತಿಳಿದುಬಂದಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

15 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

15 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

16 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

21 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

22 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

2 days ago