ಬಡವರ ಕಣ್ಣೀರು ತಾಲೂಕ್ ಆಡಳಿತಕ್ಕೆ ಕಾಣಿಸುತ್ತಿಲ್ಲವೇ .???? : ಆರ್ ಎಂ ಮಂಜುನಾಥ್ ಗೌಡ

ತೀರ್ಥಹಳ್ಳಿ : ತಾಲೂಕಿನ ತಹಶೀಲ್ದಾರರು ಬಿಬಿಎಂಪಿ ಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದವರು ಈಗ ಹಳ್ಳಿಗೆ ಬಂದಿದ್ದಾರೆ, ಮಳೆಗಾಲದಲ್ಲಿ ಇಲ್ಲಿನ ಜನರ ಸಮಸ್ಯೆಗಳ ಬಗ್ಗೆ ಅರಿವು ಅವರಿಗೆ ಹೆಚ್ಚು ತಿಳಿದಂತೆ ಇಲ್ಲ.ಕೊನೆ ಪಕ್ಷ ಬೇರೆಯವರ ಬಳಿ ಕೇಳಿ ತಿಳಿದುಕೊಂಡು ಬಡವರ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ರಾಜ್ಯ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯ ಸಂಚಾಲಕರಾದ ಆರ್ ಎಂ ಮಂಜುನಾಥ್ ಗೌಡ ತಾಲೂಕು ಆಡಳಿತದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.


ಅವರು ಇಂದು ಬೆಟ್ಟಮಕ್ಕಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆಗುಂಬೆ ಹೋಬಳಿಯ ಮೇಗರವಳ್ಳಿಯ ಸುತ್ತ ಮುತ್ತ ಮಳೆಯಿಂದ ಬಾರಿ ಹಾನಿಯಾಗಿದ್ದು ಅದರಲ್ಲಿ ಮಂಜಪ್ಪ ನಾಯಕ್ ಎಂಬುವರ ಮನೆ ಸೇರಿ ಹಲವರು ಮನೆ, ಕೊಟ್ಟಿಗೆ ಎಲ್ಲವು ಹಾನಿಯಾಗಿದೆ. ಆದರೆ ಇಲ್ಲಿಯವರೆಗೆ ತಹಸೀಲ್ದಾರ್ ಆಗಲಿ ಅಥವಾ ಯಾವುದೇ ಅಧಿಕಾರಿಗಳಾಗಲಿ ಭೇಟಿ ನೀಡಿಲ್ಲ. ಸರ್ಕಾರ ಹತ್ತು ಸಾವಿರದಿಂದ ಆರು ಲಕ್ಷ ದವರೆಗೂ ಮನೆ ಕುಸಿದು ಮನೆ ಕಳೆದುಕೊಂಡವರಿಗೆ ಕೊಡಬೇಕು ಎಂದು ತಿಳಿಸಿದೆ ಆದರೆ ಇಲ್ಲಿನ ತಾಲೂಕು ಆಡಳಿತ ಮಾನವೀಯತೆಯನ್ನು ಮರೆತಂತೆ ಕಾಣಿಸುತ್ತಿದೆ ಎಂದರು.

ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿ, ತಹಸೀಲ್ದಾರ್ ಗ್ರಾಮವಾಸ್ತವ್ಯ ಮಾಡಬೇಕು ಎಂದು ತಿಳಿಸುತ್ತಾರೆ ಆದರೆ ಇವರು ಮಾಡುತ್ತಿರುವುದೇನು ಎಂದು ಆಕ್ರೋಶ ವ್ಯಕ್ತಪಡಿಸಿದರು.  ನಾಲೂರು, ಬಿದರಗೋಡು ಮಳೆ ಹಾನಿಯಾಗಿದೆ. ಅಲ್ಲಿ ವಿದ್ಯುತ್ ಸಂಪರ್ಕ ಇಲ್ಲ. ಅದು ಕೂಡ ನಕ್ಸಲೇಟ್ ಜಾಗ, ಯಾವ ಅಧಿಕಾರಿಗಳು ಅಲ್ಲಿಗೆ ಹೋಗಿಲ್ಲ. ಅದು ಬೇಸರದ ಸಂಗತಿ ಒಂದು ವೇಳೆ ಸರ್ಕಾರದ ಬಳಿ ಹಣವಿಲ್ಲದಿದ್ದರೆ ನಾವು ಭಿಕ್ಷೆ ಭೇಡಿಯಾದರು ಕೊಡುತ್ತೇವೆ ಎಂದು ತಿಳಿಸಿದರು.

ಈ ತಿಂಗಳ ಅಂತ್ಯಕ್ಕೆ ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ನಾವು ತಾಲೂಕು ಕಚೇರಿಯಲ್ಲೇ ಮಲಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜು 28 ಕ್ಕೆ ಪಾದಯಾತ್ರೆ

ಸ್ವಾತಂತ್ರ್ಯ ಬಂದು 75 ವರ್ಷಗಳಾಗಿವೆ. ಈ ಸಂದರ್ಭದಲ್ಲಿ
ಸ್ವಾತಂತ್ರ್ಯಕ್ಕಾಗಿ ದುಡಿದ ಕಾಂಗ್ರೆಸ್ ಪಕ್ಷವನ್ನು ನೆನಪಿಸಿಕೊಳ್ಳುವುದು ಅಗತ್ಯವಾಗಿದೆ. ಈ ಅಮೃತ ಮಹೋತ್ಸವದ ನೆನಪಿನ ಅಂಗವಾಗಿ
ಜು. 28 ರಂದು ತೀರ್ಥಹಳ್ಳಿ ತಾಲೂಕಿನಿಂದ ಪಾದಯಾತ್ರೆ ಆರಂಭವಾಗಲಿದೆ. ಅಂದು ಬೆಳಗ್ಗೆ 8 ಗಂಟೆಗೆ ಮಾಜಿ ಮುಖ್ಯಮಂತ್ರಿ ದಿ. ಕಡಿದಾಳ್ ಮಂಜಪ್ಪನವರ ಸಮಾಧಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಗುವುದು. ಸುಮಾರು 14 ಕಿ.ಮೀ. ದೂರವಿರುವ ತೀರ್ಥಹಳ್ಳಿಗೆ ಪಾದಯಾತ್ರೆ ಮೂಲಕ ಬಂದು ತಾಲೂಕು ಕಚೇರಿ ಎದುರು ಸಭೆ ನಡೆಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಡಾ. ಸುಂದರೇಶ್,ಜಿಲ್ಲಾ ಕಾರ್ಯದರ್ಶಿ ಅಮೀರ್ ಹಂಜಾ, ಹಾರೊಗೊಳಿಗೆ ಪದ್ಮನಾಭ್, ಪ ಪಂ. ಅಧ್ಯಕ್ಷೆ ಶಬನಮ್, ಜಿಲ್ಲಾ ಕಾಂಗ್ರೆಸ್ ಮುಖಂಡರು ಬಿ ಎಸ್ ಎಲ್ಲಪ್ಪ, ಪರಮೇಶ್ವರ್, ಆಸೀಫ್ ಬಾಷಾಸಾಬ್, ಮಧುಕರ್, ರಾಘವೇಂದ್ರ ಶೆಟ್ಟಿ, ಸುಶೀಲ ಶೆಟ್ಟಿ, ಬಿ ಗಣಪತಿ, ಮಂಜುಳ ನಾಗೇಂದ್ರ, ನಾಗರಾಜ್ ಪೂಜಾರಿ ಸೇರಿ ಹಲವರು ಉಪಸ್ಥಿತರಿದ್ದರು.


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago