ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸಾವಪುರ ಗ್ರಾಮದ ಸರ್ವೆ ನಂ 26 ರ ಹಳ್ಳದಕಟ್ಟೆ ಕೆರೆಯ ಕೋಡಿ ನೀರನ್ನು ಖಾಸಗಿ ಪ್ರಭಾವಿ ವ್ಯಕ್ತಿಗಳು ಒತ್ತುವರಿ ಮಾಡುವ ಉದ್ದೇಶದಿಂದ ಸರ್ಕಾರಿ ರಸ್ತೆಯ ಮೇಲೆ ಜೆಸಿಬಿ ಮೂಲಕ ಕಾಲುವೆ ತೋಡಿ ನೀರನ್ನು ಹರಿಯಬಿಟ್ಟಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದೆ.
ಬಸಾವಪುರ ಗ್ರಾಮದ ಗುಂಡೂರು ಮೂಲೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸರ್ಕಾರಿ ರಸ್ತೆಯ ಮೇಲೆ ಖಾಸಗಿ ಪ್ರಭಾವಿ ವ್ಯಕ್ತಿಗಳು ಹಳ್ಳದಕಟ್ಟೆ ಕೆರೆಯ ಕೋಡಿ ನೀರನ್ನು ರಸ್ತೆಯ ಮೇಲೆ ಕಾಲುವೆ ತೋಡಿ ಹರಿಯ ಬಿಟ್ಟಿರುವ ಪರಿಣಾಮ ಸರ್ಕಾರಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿ ರಸ್ತೆಯ ಪಕ್ಕದ ಎಡಬಲದಲ್ಲಿರುವ ಜಮೀನುಗಳಿಗೆ ನೀರು ನುಗ್ಗಿ ಹಾನಿಗೊಳಗಾಗಿದೆ. ಕುಣಬಿ ಮತ್ತು ಮಡಿವಾಳ ಜನಾಂಗದ ಸ್ಮಶಾನಕ್ಕೆ ಹೋಗುವ ಮಾರ್ಗವು ಇದಾಗಿದ್ದು ಇದೀಗ ರಸ್ತೆ ಸಂಪರ್ಕ ಕಡಿತಗೊಂಡಂತಾಗಿದೆ.
ಸರಕಾರಿ ರಸ್ತೆಯನ್ನು ಅಗೆದು ಸ್ವಾರ್ಥಕ್ಕಾಗಿ ಚರಂಡಿ ಮಾಡಿರುವ ಕ್ರಮವನ್ನು ಖಂಡಿಸಿ ಜೆಸಿಬಿ ತಡೆದು ಬಸಾವಪುರ ಗ್ರಾಮಸ್ಥರುಗಳು ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿಯೇ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಬಗ್ಗೆ ಅರಸಾಳು ಗ್ರಾಮ ಪಂಚಾಯತ್ ಪಿಡಿಒ ರವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಸ್ಥಳದಲ್ಲಿಯೇ ಗ್ರಾಮಸ್ಥರು ಪ್ರತಿಭಟನೆಗೆ ಕುಳಿತಿದ್ದಾರೆ.
ಖಾಸಗಿ ಪ್ರಭಾವಿ ವ್ಯಕ್ತಿಗಳು ಸರಕಾರಿ ರಸ್ತೆಯನ್ನು ದುರುಪಯೋಗ ಪಡಿಸಿಕೊಂಡಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬಂದು ಕೂಡಲೇ ಸಂಬಂಧಪಟ್ಟ ಖಾಸಗಿ ವ್ಯಕ್ತಿಗಳು ಹಾಗೂ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದ್ದಾರೆ.
ಈ ಸಂಧರ್ಭದಲ್ಲಿ ಅರಸಾಳು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಟಿ ಕೆ ಗಣಪತಿ ಮತ್ತು ಗ್ರಾಮಸ್ಥರಾದ ಪ್ರಶಾಂತ್, ಶ್ರೀನಿವಾಸ್, ಸುರೇಶ್, ರಮೇಶ್, ನಾಗರತ್ನ ರಾಘವೇಂದ್ರ ಹಾಗೂ ಇನ್ನಿತರರಿದ್ದರು.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್