ಸರ್ಕಾರದ ಆಡಳಿತ ವ್ಯವಸ್ಥೆಯ ವಿರುದ್ಧ ಕಿಡಿಕಾರಿರುವ ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಹಿಂದುತ್ವದ ಹೆಸರಲ್ಲೇ ಅಧಿಕಾರಕ್ಕೆ ಬಂದ ರಾಜ್ಯ ಹಾಗೂ ಕೇಂದ್ರ ಬಿಜೆಪಿಯ ನಾಯಕರೇ ನೀವು ಅಧಿಕಾರಕ್ಕೆ ಬಂದ ನಂತರ ದೇಶದ, ರಾಜ್ಯದ ಜನತೆ ಮನೆಯಿಂದ ಹೊರಗೆ ಬರಲು ಭಯಭೀತರಾಗುವ ವಾತಾವರಣ ನಿರ್ಮಾಣವಾಗಿದೆ. ನೀವು ಅಧಿಕಾರಕ್ಕೆ ಬಂದಾಗಿನಿಂದ ಈಗಾಗಲೇ ಅತಿ ಹೆಚ್ಚು ಹಿಂದೂ ಯುವಕರು, ಕಾರ್ಯಕರ್ತರು ದುರ್ಮರಣಕ್ಕೆ ತುತ್ತಾಗಿದ್ದಾರೆ. ಇನ್ನೂ ಎಷ್ಟು ಜನರನ್ನು ಬಲಿ ಕೊಡುವವರಿದ್ದೀರಿ? ನಿಮ್ಮ ಪಕ್ಷಕ್ಕಾಗಿ ದುಡಿದು ಹತ್ಯೆಯಾದ ಪ್ರವೀಣ್ ಅವರ ಅಂತಿಮಯಾತ್ರೆಗೆ ಹೋಗಿದ್ದಿರಾ? ಇನ್ನೊಬ್ಬರ ಶವದ ಮೇಲೆ ಸೌಧ ಕಟ್ಟಲು ನಾಚಿಕೆ ಆಗಲ್ವೆ? ಎಂದು ಪ್ರಶ್ನಿಸಿದರು.
ನಿನ್ನೆ ಒಬ್ಬ ಸಂಸದರು ಹೇಳುತ್ತಾರೆ ಕಾಂಗ್ರೆಸ್ ಪಕ್ಷದವರು ಅಧಿಕಾರದಲ್ಲಿದ್ದರೆ ನಾವು ಕಲ್ಲುತೂರಾಡಬಹುದಾಗಿತ್ತು. ಇದು ನಿಮ್ಮ ಪಕ್ಷದ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ. ಕಾಂಗ್ರೆಸ್ ಪಕ್ಷದ ಆಡಳಿತದ ಅವಧಿಯಲ್ಲಿ ಹೀಗೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಚ್ಚುವ ಪ್ರವೃತ್ತಿ ನಿಮ್ಮದಾಗಿದೆ. ಈಗ ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ನಮ್ಮ ಸರ್ಕಾರವೇ ಇರುವುದು ನಾವು ಈ ಬಗ್ಗೆ ಸ್ವಲ್ಪ ಸಂಭಾಳಿಸಿಕೊಂಡು ಹೋಗೋಣ ಎನ್ನುವ ಮಾತನ್ನು ಹೇಳುತ್ತಿದ್ದೀರಿ ಇದು ಖಂಡನೀಯವಾಗಿದೆ.
ಎಲ್ಲರ ಜೀವವು ಜೀವವೇ ನಿಮ್ಮ ರಾಜಕೀಯಕ್ಕಾಗಿ ಬಡವರ ಪ್ರಾಣ ಹಾಗೂ ಮಾನವನ್ನು ಕಳೆಯಬೇಡಿ ಎಂದು ಚೇತನ್ ದಾಸ್ ಹೊಸಮನೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…