ರಿಪ್ಪನ್ಪೇಟೆ : ಬೆಳ್ಳೂರು-ಬುಕ್ಕಿವರೆ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಸರ್ಕಾರಿ ಬಸ್ ಸೌಲಭ್ಯವು ಪ್ರಾರಂಭವಾಗಿದ್ದು ಎಲ್ಲರ ಮೊಗದಲ್ಲಿ ಮಂದಹಾಸ ತಂದಿದೆ.
ಶರಾವತಿ, ಚಕ್ರಾ, ವರಾಹಿ, ಮಾಣಿ, ಮಡೆನೂರು ಡ್ಯಾಂ ನಿರ್ಮಾಣಕ್ಕಾಗಿ ಮನೆ ಮಠಗಳನ್ನು ಕಳೆದುಕೊಂಡು ನಿರಾಶ್ರಿತರಾಗಿರುವ ಮುಳುಗಡೆ ಸಂತ್ರಸ್ತ ಕುಟುಂಬದವರೇ ಹೆಚ್ಚು ವಾಸಿಸುತ್ತಿರುವ ಕುಗ್ರಾಮಗಳಾದ ಬೆಳ್ಳೂರು, ಬುಕ್ಕಿವರೆ, ಚಾಣಬೈಲು, ದೋಬೈಲು, ಮಸ್ಕಾನಿ, ಕಳಸೆ, ಹಾರೋಹಿತ್ತಲು, ಬಸವಾಪುರ, ಕಲ್ಲುಹಳ್ಳ, ಗುಳಿಗುಳಿ ಶಂಕರ, ಗುಬ್ಬಿಗಾ ಇನ್ನಿತರ ಗ್ರಾಮಗಳ ಗ್ರಾಮಸ್ಥರು ಮತ್ತು ಶಾಲಾ – ಕಾಲೇಜ್ ವಿದ್ಯಾರ್ಥಿಗಳು ಮತ್ತು ಅನಾರೋಗ್ಯ ಪೀಡಿತರು ವೃದ್ಧರು ಗರ್ಭಿಣಿಯರು ಸೇರಿದಂತೆ ಇನ್ನಿತರ ಹಲವರು ಬಸ್ ಸೌಲಭ್ಯವಿಲ್ಲದೆ ಪರದಾಡುವಂತಾಗಿತು.
ಕೆಲ ದಿನಗಳ ಹಿಂದೆ ಬೆಳ್ಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ರವರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕುಗ್ರಾಮದ ಜನರ ಪ್ರಮುಖ ಬೇಡಿಕೆಯಾಗಿದ್ದ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿದ್ದರು.ಈ ಹಿನ್ನಲೆಯಲ್ಲಿ ಶಾಸಕರಾದ ಹರತಾಳು ಹಾಲಪ್ಪ ರವರು ಜಿಲ್ಲಾಧಿಕಾರಿಗಳು ಹಾಗೂ ಸಂಸದರ ಗಮನಕ್ಕೆ ತಂದು ಬಸ್ ವ್ಯವಸ್ಥೆ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಬಗ್ಗೆ ಮಾತನಾಡಿದ ಬಿಜೆಪಿ ಮುಖಂಡರಾದ ಬೆಳ್ಳೂರು ತಿಮ್ಮಪ್ಪ ರವರು ಶಾಸಕರು ಹಾಗೂ ಸಂಸದರ ಸಹಕಾರದಿಂದ ಶಾಲಾ – ಕಾಲೇಜ್ ವಿದ್ಯಾರ್ಥಿಗಳು ಮತ್ತು ಅನಾರೋಗ್ಯ ಪೀಡಿತರು ವೃದ್ಧರು ಗರ್ಭಿಣಿಯರು ಸೇರಿದಂತೆ ಇನ್ನಿತರ ಹಲವರಿಗೆ ಬಸ್ ಸೌಲಭ್ಯದಿಂದ ಅನುಕೂಲವಾಗಿದೆ ಎಂದರು.
ನೂತನ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸಿದ್ದಕ್ಕೆ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ,ಸಂಸದ ಬಿ ವೈ ರಾಘವೇಂದ್ರ ಹಾಗೂ ಶಾಸಕರಾದ ಹರತಾಳು ಹಾಲಪ್ಪ ರವರಿಗೆ ಬೆಳ್ಳೂರು, ಬುಕ್ಕಿವರೆ ಭಾಗದ ಗ್ರಾಮಸ್ಥರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ನೂತನ ಬಸ್ ವೇಳಾಪಟ್ಟಿ ಇಂತಿದೆ :
ಬೆ.6.15 ಕ್ಕೆ ಶಿವಮೊಗ್ಗದಿಂದ ಹೊರಟು ಬೆ. 7.15 ಗೆ ಬುಕ್ಕಿವರೆಗೆ ಬರುತ್ತದೆ.
7.30ಕ್ಕೆ ಬುಕ್ಕಿವರೆಯಿಂದ ಹೊರಟು 08.00 ಕ್ಕೆ ರಿಪ್ಪನ್ಪೇಟೆಗೆ ಬರುತ್ತದೆ.
ಸಂಜೆ.4.30 ಕ್ಕೆ ರಿಪ್ಪನ್ಪೇಟೆಯಿಂದ – 5.10 ಬುಕ್ಕಿವರೆ
ಹೆಚ್ಚಿನ ಮಾಹಿತಿಗೆ ಈ ವೀಡಿಯೋ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್