ಮನೆಯಲ್ಲಿ ಮಲಗಿದ್ದವರ ಮೇಲೆ ಏಕಾಏಕಿ ಗೋಡೆ ಕುಸಿದು ತಾಯಿ ಮತ್ತು ಮಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಶಾಂತಿನಗರ ಬಡಾವಣೆಯಲ್ಲಿ ನಡೆದಿದೆ. ಇಲ್ಲಿನ ನಾಲ್ಕನೇ ಕ್ರಾಸ್ನ ಯತಿರಾಜ್ ಎಂಬುವರ ಮನೆಯಲ್ಲಿ ಬಾಡಿಗೆಗೆ ಇದ್ದ ಉಮಾ ಹಾಗೂ ಮಗಳು ಕಾವ್ಯ ಎಂಬುವರ ಮೇಲೆ ಇಂದು ಬೆಳಿಗ್ಗೆ ಮನೆಯ ಗೋಡೆ ಕುಸಿದಿದೆ.
ಉಮಾ ಅವರ ಕಾಲು ಮುರಿದಿದ್ದು, ಕಾವ್ಯ ಅವರ ಬಲಗೈ ಮುರಿತವಾಗಿದೆ. ಗೋಡೆಯು ಯತಿರಾಜ್ ಅವರ ಕಡೆಯೂ ಬಿದ್ದಿದ್ದರಿಂದ ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಗಾಯಗೊಂಡಿರುವ ಉಮಾ ಹಾಗೂ ಕಾವ್ಯ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
>ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ತಹಶೀಲ್ದಾರ್ ನಾಗರಾಜ್ ಹಾಗೂ ಪಾಲಿಕೆ ಆಯುಕ್ತ ಮಾಯಾಣ್ಣ ಗೌಡ ಹಾಗೂ ಕಂದಾಯ ಅಧಿಕಾರಿಗಳು ಭೇಟಿ ನೀಡಿ ವೀಕ್ಷಿಸಿದರು. ಸರಿಯಾದ ದಾಖಲೆ ಪಡೆದು ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.
ರಿಪ್ಪನ್ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…