Headlines

“ಮಹಾನ್ ಪುರುಷರ ಮಾರ್ಗದಲ್ಲಿ ನಡೆದರೆ ಸುಖ-ಶಾಂತಿ”: ಜಗದ್ಗುರು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ

ಹುಂಚಾ : ಪೂರ್ವಪರಂಪರೆಯಂತೆ ಶೀಕ್ಷೇತ್ರ ಹೊಂಬುಜದಲ್ಲಿ ಜುಲೈ 29ರಂದು ಮೊದಲನೇ ಸಂಪತ್ ಶುಕ್ರವಾರದ ಪೂಜೆಯು ನೆರವೇರಿದವು. ಅಂದು ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಜಿನಾಲಯದಲ್ಲಿ ಧಾರ್ಮಿಕ ವಿಧಿಯಂತೆ ಅಭಿಷೇಕ, ಮಹಾಪೂಜೆ ಬಳಿಕ ಜಗನ್ಮಾತೆ ಶ್ರೀಪದ್ಮಾವತಿ ಅಮ್ಮನವರ ಸನ್ನಿದಿಯಲ್ಲಿ ಸರ್ವಾಲಂಕಾರದೊಂದಿಗೆ ವಿಶೇಷ ಪೂಜಾ ವಿಧಾನಗಳು ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರ ನೇತೃತ್ವ, ಮಾರ್ಗದರ್ಶನದಲ್ಲಿ ಜರುಗಿದವು.


ತಮಿಳುನಾಡು, ಮಹಾರಾಷ್ಟ್ರ, ರಾಜಸ್ಥಾನ, ಆಂಧ್ರಪ್ರದೇಶ, ರಾಜ್ಯ ಹಾಗೂ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತವೃಂದದವರು ಶ್ರದ್ಧಾಭಕ್ತಿಯಿಂದ ಜಿನನಾಮ ಸ್ತುತಿಸಿ, ಭಕ್ತಿಕಾಣಿಕೆ ಸಮರ್ಪಿಸಿದರು. ಸಂಪ್ರದಾಯದಂತೆ ಉಡಿ ಅರ್ಪಿಸಿ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಆಗಮಿಸಿದ್ದ ಭಕ್ತಾದಿಗಳಿಗೆ ಅಭೀಷ್ಠ ಪ್ರಸಾಧ ಭವನದಲ್ಲಿ ಸೂಕ್ತ ಊಟೋಪಚಾರ ಮತ್ತು ನೂತನ ಯಾತ್ರಿ ನಿವಾಸದಲ್ಲಿ ವಸತಿ ವ್ಯವಸ್ಥೆ ಮಾಡಲಾಗಿತ್ತು.



ನಂತರ ಆಶೀರ್ವಚನ ನೀಡಿದ ಪರಮಪೂಜ್ಯ ಶ್ರೀಗಳವರು ನಮ್ಮ ಆಚಾರ-ವಿಚಾರಗಳಲ್ಲಿ ನ್ಯೂನತೆಯುಂಟಾದಾಗ, ಮನಸ್ಸಿನ ವಿಕಾರಗಳು ಹೆಚ್ಚಾದಾಗ ಚಂಚಲತೆಯಿಂದ ಅದು ಅಶುಭವಾಗಿ ಪರಿಣಮಿಸುತ್ತದೆ. ಧರ್ಮವು ಶಾಶ್ವತ ಸುಖ ಕೊಡುವ ಮಾರ್ಗವಾಗಿದ್ದು, ಮಹಾನ್ ಪುರುಷರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು ಎಂದು ಆಶೀರ್ವಚನ ನೀಡಿದರು.

About The Author

Leave a Reply

Your email address will not be published. Required fields are marked *

Exit mobile version