ರಾಜ್ಯದಲ್ಲಿರುವುದು ಕೊಲೆಗಡುಕ ಸರ್ಕಾರ : ಬೇಳೂರು ಗೋಪಾಲಕೃಷ್ಣ

ತೀರ್ಥಹಳ್ಳಿ :  ದೇಶದ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷದ ಮಹಾತ್ಮರು ಮತ್ತು ಹುತಾತ್ಮರ ನೆನಪಿಗಾಗಿ ಜನ ಜಾಗೃತಿಯ ಪಾದಯಾತ್ರೆಯಲ್ಲಿ  ಭಾಗಿಯಾಗಿ ಮಾತನಾಡಿದ ಬೇಳೂರು ಗೋಪಾಲ ಕೃಷ್ಣ ದೇಶದ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಮಹಾತ್ಮರು ಮತ್ತು ಹುತಾತ್ಮರ ನೆನಪಿಗಾಗಿ ಕಾಂಗ್ರೆಸ್ ಪಕ್ಷದಿಂದ ಪಾದಯಾತ್ರೆ ನೆಡೆಸಲು ಆದೇಶ ಬಂದಿರುವುದರಿಂದ ಇವತ್ತು ಪ್ರಥಮ ಬಾರಿಗೆ ಕಡಿದಾಳ್ ಮಂಜಪ್ಪ ಅವರ ಸಮಾಧಿಯ ಸ್ಥಳದಲ್ಲಿ ಪೂಜೆ ಮಾಡಿ ಆರ್ ಎಂ ಮಂಜುನಾಥ್ ಗೌಡರ ನೇತೃತ್ವದಲ್ಲಿ ಪಾದಯಾತ್ರೆ ಮಾಡುತ್ತಿದ್ದೇವೆ. ಈ ಬೃಹತ್ ಹೋರಾಟಕ್ಕೆ ಜಯವಾಗಲಿ ಎಂದರು.

ನಂತರ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು. ಇದೊಂದು ಕೊಲೆಗಡುಕ ಸರ್ಕಾರ ಎಂದು ಈಗಾಗಲೇ ಹೇಳಿದ್ದೆ. ಮಂಗಳೂರಿನ ಪ್ರವೀಣ್, ಶಿವಮೊಗ್ಗದ ಹರ್ಷ ಹೀಗೆ ಹಲವರ ಹತ್ಯೆಯಾಗಿದೆ. ಈ ಸರ್ಕಾರ ಜೀವಂತವಾಗಿಲ್ಲ. ಬೆಂಕಿ ಹಚ್ಚುತ್ತೇವೆ, ನಮ್ಮ ಕಾರ್ಯಕರ್ತರ ಮೈ ಮುಟ್ಟಿದರೆ ಸಾಯಿಸ್ತೀವಿ ಎನ್ನುವಂತ ಮಾತನಾಡುವುದು, ಕೊಲೆಗೆ ಕೊಲೆಯೇ ಮಾಡುತ್ತೇವೆ ಎನ್ನುವ ಈಶ್ವರಪ್ಪನಂತ ಮುಟ್ಟಳರಿದ್ದಾರೆ. ಇಂತಹ ದೋರಣೆಯಿಂದ ಜನ ಬೇಸತ್ತು ಹೋಗಿದ್ದಾರೆ. ಇವತ್ತು ಅವರಿಗೆ ಜನರು ಪಾಠ ಕಲಿಸಿದ್ದಾರೆ.ಹಿಂದುತ್ವ ಎಂದು ಎಷ್ಟು ಜನರನ್ನು ಸಾಯಿಸುತ್ತೀರಾ ಎಂದು ಬಿಜೆಪಿ ಪಕ್ಷದ ವಿರುದ್ಧ ಹರಿಹಾಯ್ದರು.
ಈ ಸರ್ಕಾರ ಸಂಪೂರ್ಣ ವಿಫಲ ಹೊಂದಿದ್ದು ಗೃಹಸಚಿವರಾಗಿರಬಹುದು ಇತರ ಯಾವುದೇ ಸಚಿವರು ಜನರ ಜೀವ ಉಳಿಸಲು ವಿಫಲರಾಗಿದ್ದಾರೆ. ಶಿವಮೊಗ್ಗದಲ್ಲಿ ಹರ್ಷ, ರೌಡಿ ಅಣ್ಣಿ, ವಾಸ್ತು ಚಂದ್ರಶೇಖರ ಗುರೂಜಿ ಹೀಗೆ ಎಷ್ಟು ಜನರ ಹತ್ಯೆ ಮಾಡಿಸುತ್ತೀರಾ ?  ಇಂತಹ ದುಷ್ಟ ಸರ್ಕಾರವನ್ನು ಜನ ಕಿತ್ತೊಗೆಯಬೇಕು ಎಂದು ಹೇಳಿದರು.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
75ನೇ  ಅಮೃತ ಮಹೋತ್ಸವ ಜಾಗೃತಿಯ ಪಾದಯಾತ್ರೆಗೆ ಚಾಲನೆ :

ತೀರ್ಥಹಳ್ಳಿ : ದೇಶದ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷದ ಮಹಾತ್ಮರು ಮತ್ತು ಹುತಾತ್ಮರ ನೆನಪಿಗಾಗಿ ಜನ ಜಾಗೃತಿಯ ಪಾದಯಾತ್ರೆಗೆ ಚಾಲನೆ ದೊರಕಿತು. ಕಾಂಗ್ರೆಸ್ ನ ಸಹಕಾರಿ ವಿಭಾಗದ ಸಂಚಾಲಕರಾದ ಆರ್ ಎಂ ಮಂಜುನಾಥ ಗೌಡರ ನೇತೃತ್ವದಲ್ಲಿ ತಾಲೂಕಿನ ಹಾರೋಗೊಳಿಗೆ ಗ್ರಾಮದಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆಗೆ ಚಾಲನೆ ನೀಡಲಾಯಿತು.
ಮಾಜಿ ಮುಖ್ಯಮಂತ್ರಿ ಕಡಿದಾಳ್ ಮಂಜಪ್ಪನವರ ಸಮಾದಿಯಿಂದ ಪಾದಯಾತ್ರೆ ಆರಂಭಗೊಂಡು  ತೀರ್ಥಹಳ್ಳಿ ತಲುಪಲಿದೆ. ಕಡಿದಾಳ್ ಮಂಜಪ್ಪನವರ ಸಮಾದಿಗೆ ಹೂವು ಗುಚ್ಛ ಸಮರ್ಪಿಸಿ ಪಾದಯಾತ್ರೆಗೆ ಶಾಸಕ ಕಡಿದಾಳ್ ದಿವಾಕರ್ ಚಾಲನೆ ನೀಡಿದರು.
ಭಾರತ್ ಮಾತಾಕಿ ಜೈ, ವಂದೇ‌ಮಾತರಂ ಘೋಷಣೆ ಕೂಗುತ್ತಾ ಹೊರಟ‌ ಪಾದಯಾತ್ರೆ ಗ್ರಾಮ ಪಂಚಾಯಿತಿ ಆವರಣದಲ್ಲಿರುವ ಕಡಿದಾಳ್ ಮಂಜಪ್ಪನವರ ಪ್ರತಿಮೆಗೆ ಹೂವಿನ ಹಾರ ಸಮರ್ಪಿಸಲಾಯಿತು. ಈ ವೇಳೆ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಮಾಲಾರ್ಪಣೆ ಮಾಡಿದರು.
ಈ ವೇಳೆ ಮಾತನಾಡಿದ ಆರ್ ಎಂ .ಮಂಜುನಾಥ್ ಗೌಡರು ಸ್ವಾತಂತ್ರ್ಯ ಹೋರಾಟದ ಬಗ್ಗೆ ಯುವಕರಿಗೆ ನೆನಪು ಮಾಡಿಕೊಡುವ ಹಿನ್ನಲೆಯಲ್ಲಿ ಈ ಪಾದಯಾತ್ರೆ ನಡೆಯುತ್ತಿದೆ. ಜುಲೈ 27 ರಂದು  ದಿ.ಕಡಿದಾಳ್ ಮಂಜಪ್ಪನವರ ಜಯಂತಿ, ಜಯಂತಿ ಮುಗಿಸಿ ಪಾದಯಾತ್ರೆ ನಡೆಸಲಾಗುತ್ತಿದೆ.
ಗೋಪಾಲಗೌಡರು ಮತ್ತು ಕಡಿದಾಳ್ ರವರ ನಂತರದ ಪೀಳಿಗೆಗೆ ಈ ದೇಶದ ಇತಿಹಾಸ ತಿಳಿಯಕೊಡಬೇಕಿದೆ ಎಂದರು. ನರೇಂದ್ರ ಮೋದಿ ಮತ್ತು ಅಮಿತ್ ಶಾ ರವರ  ಅಲೆಯಲ್ಲಿ ಸ್ವಾತಂತ್ರ್ಯ ಹೋರಾಟ ಕೊಚ್ಚಿ ಹೋಗಬಾರದು ಎಂಬುದು ನಮ್ಮ ಪ್ರಯತ್ನವಾಗಿದೆ. ಇತ್ತೀಚೆಗೆ ನಡೆಯುತ್ತಿರುವ ಘಟನೆಗಳಿಗೆ ಪರ್ಯಾಯವಾದ ಮಾರ್ಗವೆಂದರೆ ಗಾಂಧಿ ಮಾರ್ಗ ಒಂದೇ ಎಂದು ಜನರಿಗೆ ಹೇಳಬೇಕಿದೆ ಎಂದರು.
ಸ್ಥಳೀಯ ನಾಯಕರಾದ ಕಿಮ್ಮನೆ ರತ್ನಾಕರ್ ಪತ್ರ ಬರೆದ ಬಗ್ಗೆ ಪ್ರಸ್ತಾಪಿಸಿದ ಮಾಧ್ಯಮಗಳ ಪ್ರಶ್ನೆಗೆ ಕೆಲವರು ಅಡಚಣೆ ಮಾಡಿದ್ದಾರೆ. ಆದರೆ ಹಬ್ಬದ ವಾತಾವರಣವಿರುವ ಈ ಸಂದರ್ಭದಲ್ಲಿ ವೈಯುಕ್ತಿಕ ವಿಚಾರಗಳು ಬೇಡವೆಂದು ತಳ್ಳಿಹಾಕಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

4 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

4 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

10 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago