ಈ ಸಂಧರ್ಭದಲ್ಲಿ ಮಾತನಾಡಿದ ಪ್ರವಾಸಿ ವಾಹನಗಳ ಸಂಘದ ಜಿಲ್ಲಾಧ್ಯಕ್ಷರಾದ ಕಾರ್ತಿಕ್ ಶೆಟ್ಟಿ ಪ್ರವಾಸಿ ವಾಹನಗಳ ನಿಲ್ದಾಣಗಳಲ್ಲಿ ವೈಟ್ಬೋರ್ಡ್ ಖಾಸಗಿ ಲಘು ವಾಹನಗಳನ್ನು ತಂದು ನಿಲ್ಲಿಸಿ, ಪ್ರವಾಸಿಗರನ್ನು ಕರೆದುಕೊಂಡು ವಿವಿಧ ಪ್ರದೇಶಗಳಿಗೆ ಬಾಡಿಗೆ ಪ್ರಯಾಣ ಬೆಳೆಸುವುದು ಕಳೆದ ಹಲವಾರು ವರ್ಷಗಳಿಂದ ನಡೆಯುವ ಒಂದು ಪ್ರಕ್ರಿಯೆಯಾಗಿದೆ. ಈ ಕಾನೂನು ಬಾಹಿರ ಟ್ಯಾಕ್ಸಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗುತ್ತಾ ಬರುತ್ತಿದೆ. ಇದರಿಂದ ಸರ್ಕಾರಕ್ಕೆ ನಿಗಧಿತ ತೆರಿಗೆ ಕಟ್ಟಿ ವಾಣಿಜ್ಯ ಉದ್ದೇಶಗಳಿಗಾಗಿ ನಿಲ್ದಾಣಗಳಲ್ಲಿ ಬಾಡಿಗೆಯನ್ನು ಕಾಯುತ್ತಾ ನಿಲ್ಲುತ್ತಿರುವ ಪ್ರವಾಸಿ ವಾಹನಗಳಿಗೆ ಯಾವುದೇ ರೀತಿಯ ಕೆಲಸ ಕಾರ್ಯಗಳಾಗಲೀ, ಬಾಡಿಗೆಗಳಾಗಲೀ ಇಲ್ಲವಾಗಿರುತ್ತದೆ.
ಇದರಿಂದಾಗಿ ಪ್ರವಾಸಿ ವಾಹನಗಳ ಜಾಲಕರು ಮತ್ತು ಮಾಲೀಕರುಗಳು ಹಾಗೂ ಅವರನ್ನು ಅವಲಂಬಿತವಾಗಿರುವ ಕುಟುಂಬವರ್ಗದವರು ಬೀದಿಗೆ ಬಂದು ನಿಲ್ಲುವಂತಹ ಪರಿಸ್ಥಿತ ನಿರ್ಮಾಣವಾಗಿದೆ. ಕಾರಣ ಖಾಸಗಿ ವೈಟ್ಬೋರ್ಡ್ ವಾಹನಗಳು ಕಾನೂನು ಬಾಹಿರವಾಗಿ ಸರ್ಕಾರ ನಿಗಧಿಮಾಡಿದ ಪ್ರವಾಸಿ ವಾಹನಗಳ ದರಗಳಿಗಿಂತ ಬಹಳ ಕಡಿಮೆ ಬಾಡಿಗೆಯನ್ನು ಪಡೆದು ಸಂಚರಿಸುತ್ತಿರುವುದು ಕಾರಣವಾಗಿದೆ. ಅದರಂತೆ ಬ್ಯಾಂಕುಗಳಿಂದ, ಖಾಸಗಿ ಹಣಕಾಸು ಸಂಸ್ಥೆಗಳಿಂದ ವಾಹನ ಸಾಲಗಳನ್ನು ಪಡೆದುಕೊಂಡಿರುವ ಮಾಲೀಕರು ಹಾಗೂ ಚಾಲಕರುಗಳಿಗೆ ಮಾಸಿಕ ಸಾಲದ ಕಂತುಗಳನ್ನು ಕಟ್ಟಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…