ಈ ಸಂಧರ್ಭದಲ್ಲಿ ಮಾತನಾಡಿದ ಪ್ರವಾಸಿ ವಾಹನಗಳ ಸಂಘದ ಜಿಲ್ಲಾಧ್ಯಕ್ಷರಾದ ಕಾರ್ತಿಕ್ ಶೆಟ್ಟಿ ಪ್ರವಾಸಿ ವಾಹನಗಳ ನಿಲ್ದಾಣಗಳಲ್ಲಿ ವೈಟ್ಬೋರ್ಡ್ ಖಾಸಗಿ ಲಘು ವಾಹನಗಳನ್ನು ತಂದು ನಿಲ್ಲಿಸಿ, ಪ್ರವಾಸಿಗರನ್ನು ಕರೆದುಕೊಂಡು ವಿವಿಧ ಪ್ರದೇಶಗಳಿಗೆ ಬಾಡಿಗೆ ಪ್ರಯಾಣ ಬೆಳೆಸುವುದು ಕಳೆದ ಹಲವಾರು ವರ್ಷಗಳಿಂದ ನಡೆಯುವ ಒಂದು ಪ್ರಕ್ರಿಯೆಯಾಗಿದೆ. ಈ ಕಾನೂನು ಬಾಹಿರ ಟ್ಯಾಕ್ಸಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗುತ್ತಾ ಬರುತ್ತಿದೆ. ಇದರಿಂದ ಸರ್ಕಾರಕ್ಕೆ ನಿಗಧಿತ ತೆರಿಗೆ ಕಟ್ಟಿ ವಾಣಿಜ್ಯ ಉದ್ದೇಶಗಳಿಗಾಗಿ ನಿಲ್ದಾಣಗಳಲ್ಲಿ ಬಾಡಿಗೆಯನ್ನು ಕಾಯುತ್ತಾ ನಿಲ್ಲುತ್ತಿರುವ ಪ್ರವಾಸಿ ವಾಹನಗಳಿಗೆ ಯಾವುದೇ ರೀತಿಯ ಕೆಲಸ ಕಾರ್ಯಗಳಾಗಲೀ, ಬಾಡಿಗೆಗಳಾಗಲೀ ಇಲ್ಲವಾಗಿರುತ್ತದೆ.
ಇದರಿಂದಾಗಿ ಪ್ರವಾಸಿ ವಾಹನಗಳ ಜಾಲಕರು ಮತ್ತು ಮಾಲೀಕರುಗಳು ಹಾಗೂ ಅವರನ್ನು ಅವಲಂಬಿತವಾಗಿರುವ ಕುಟುಂಬವರ್ಗದವರು ಬೀದಿಗೆ ಬಂದು ನಿಲ್ಲುವಂತಹ ಪರಿಸ್ಥಿತ ನಿರ್ಮಾಣವಾಗಿದೆ. ಕಾರಣ ಖಾಸಗಿ ವೈಟ್ಬೋರ್ಡ್ ವಾಹನಗಳು ಕಾನೂನು ಬಾಹಿರವಾಗಿ ಸರ್ಕಾರ ನಿಗಧಿಮಾಡಿದ ಪ್ರವಾಸಿ ವಾಹನಗಳ ದರಗಳಿಗಿಂತ ಬಹಳ ಕಡಿಮೆ ಬಾಡಿಗೆಯನ್ನು ಪಡೆದು ಸಂಚರಿಸುತ್ತಿರುವುದು ಕಾರಣವಾಗಿದೆ. ಅದರಂತೆ ಬ್ಯಾಂಕುಗಳಿಂದ, ಖಾಸಗಿ ಹಣಕಾಸು ಸಂಸ್ಥೆಗಳಿಂದ ವಾಹನ ಸಾಲಗಳನ್ನು ಪಡೆದುಕೊಂಡಿರುವ ಮಾಲೀಕರು ಹಾಗೂ ಚಾಲಕರುಗಳಿಗೆ ಮಾಸಿಕ ಸಾಲದ ಕಂತುಗಳನ್ನು ಕಟ್ಟಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…