ರಿಪ್ಪನ್‌ಪೇಟೆ ಸಂಜೀವಿನಿ ಒಕ್ಕೂಟದಿಂದ “ಮಾಸಿಕ ಸಂತೆ” : ಸ್ವಸಹಾಯ ಸಂಘದವರು ತಯಾರಿಸಿದ ವಸ್ತುಗಳ ಮಾರಾಟ ಮತ್ತು ಪ್ರದರ್ಶನ ಮೇಳ

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯ ಸಂತೆ ಮೈದಾನದಲ್ಲಿ ಸಂಜೀವಿನಿ ಮಾಸಿಕ ಸಂತೆ ಮಾರಾಟ ಮತ್ತು ಪ್ರದರ್ಶನ ನಡೆಯಿತು.ಪಟ್ಟಣದ ಗ್ರಾಪಂ ವ್ಯಾಪ್ತಿಯ ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ತಾವು ತಯಾರಿಸಿದ ಉತ್ಪನ್ನಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇಟ್ಟಿದ್ದರು. ಆಹಾರ ಉತ್ಪನ್ನಗಳು, ಕರಕುಶಲ ವಸ್ತುಗಳು ಲಭ್ಯವಿದ್ದವು.

ಗ್ರಾಮೀಣ ಭಾಗದ ಸ್ವಸಹಾಯ ಸಂಘಗಳಲ್ಲಿ ತೊಡಗಿಕೊಂಡಿರುವ ಮಹಿಳೆಯರು ತಯಾರಿಸಿರುವ ಉತ್ಪನ್ನಗಳನ್ನು ಮಾರಾಟ ಮಾಡಲು ವೇದಿಕೆ ಕಲ್ಪಿಸಿ, ಅವರು ಆರ್ಥಿಕವಾಗಿ ಅಭಿವೃದ್ಧಿ ಪಡಿಸಲು ಉತ್ತೇಜನ ನೀಡುವುದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,  ಜಿಲ್ಲಾ ಪಂಚಾಯತ್ ಶಿವಮೊಗ್ಗ , ತಾಲ್ಲೂಕ್ ಪಂಚಾಯತ್ ಹೊಸನಗರ ಮತ್ತು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ರಿಪ್ಪನ್ ಪೇಟೆಯಲ್ಲಿ  ‘ಮಾಸಿಕ ಸಂತೆ’ ಕಾರ್ಯಕ್ರಮ ಅನುಷ್ಠಾನಗೊಳಿಸಿದೆ.


ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ (ಎನ್‌ಆರ್‌ಎಲ್‌ಎಂ) ಸಂಜೀವಿನಿ ಯೋಜನೆಯಡಿ ಆರ್ಥಿಕ ನೆರವು ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳು ತಯಾರಿಸಿರುವ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಕ್ಕಾಗಿ ಈ ಸಂತೆಯನ್ನು ಆಯೋಜಿಸಲಾಗುತ್ತಿದೆ.

ಈ ಸಂಧರ್ಭದಲ್ಲಿ ಮಾತನಾಡಿದ ವಲಯ ಮೇಲ್ವಿಚಾರಕರಾದ ಮನೋಹರ್ ಸಂಜೀವಿನಿ ಮಾಸಿಕ ಸಂತೆಯಲ್ಲಿ ವಿವಿಧ ಸ್ವ ಸಹಾಯ ಒಕ್ಕೂಟದ ಮಹಿಳೆಯರು ತಯಾರಿಸಿದ ವಿವಿಧ ಖಾದ್ಯ, ಗುಡಿ ಕೈಗಾರಿಕೆ, ಕರ ಕುಶಲ ವಸ್ತುಗಳು ಅಲಂಕಾರಿ ವಸ್ತುಗಳ ನೇರ ಮಾರಾಟದ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿ ತಿಂಗಳಿಗೊಮ್ಮೆ ವಾರದ ಸಂತೆಯಲ್ಲಿ ಇದೇ ಸ್ಥಳದಲ್ಲಿ ಮಾರಾಟ ವ್ಯವಸ್ಥೆ ಮಾಡಲಾಗಿದ್ದು, ಇದರಿಂದ ಹಣಕಾಸಿನ ಸೌಲಭ್ಯ ಪಡೆದುಕೊಂಡ ಸ್ವ ಸಹಾಯ ಸಂಘದವರು ತಯಾರಿಸಿದ ಉತ್ಪನ್ನಗಳನ್ನು ಮುಂದಿನ ದಿನಗಳಲ್ಲಿ ಅಮೆಜಾನ್‌, ಪ್ಲಿಪ್‌ಕಾರ್ಟ್‌ ಮೂಲಕ ಆನ್‌ಲೈನ್‌ ಮಾರಾಟ ವ್ಯವಸ್ಥೆಗೆ ಸರ್ಕಾರ ಯೋಜಿಸಿದೆ. ಈ ಕ್ರಮದಿಂದ ಗ್ರಾಮೀಣ ಮಹಿಳೆಯರು ತಯಾರಿಸಿ ವಸ್ತುಗಳನ್ನು ಆನ್‌ಲೈನ್‌ ಖರೀದಿಯಿಂದ ಆರ್ಥಿಕ ಸ್ವಾವಲಂಬನೆ ಸಾಧ್ಯವಿದೆ ಎಂದರು.

ಸಂಜೀವಿನಿ ಮಾಸಿಕ ಸಂತೆ ಮಾರಾಟ ಮತ್ತು ಪ್ರದರ್ಶನದ ಬಗ್ಗೆ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಮಮತಾ ಸುಧೀಂದ್ರ ಪೂಜಾರಿ ಮಾತನಾಡಿ ಸಂಜೀವಿನಿ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಮನೆಗಳಲ್ಲಿಯೇ ವಿವಿಧ ಉತ್ಪನ್ನಗಳನ್ನು ತಯಾರಿಸುತ್ತಿದ್ದಾರೆ. ಈ ಉತ್ಪನ್ನಗಳಿಗೆ ಮಾರುಕಟ್ಟೆ ದೊರಕಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಮಾಸಿಕ ಸಂತೆಯನ್ನು ಆರಂಭಿಸಲು ಸರ್ಕಾರ ಸೂಚಿಸಿದೆ. ಅದರಂತೆ ರಿಪ್ಪನ್ ಪೇಟೆಯಲ್ಲಿ ಆಯೋಜಿಸಲಾಗಿದೆ.ಇದರಿಂದ ಮಹಿಳೆಯರಿಗೆ ಆರ್ಥಿಕವಾಗಿ ಸಬಲರಾಗಲು ವಿಪುಲವಾದ ಅವಕಾಶಗಳಿವೆ ಎಂದರು.

>ಈ ಸಂಧರ್ಭದಲ್ಲಿ ಸಂಜೀವಿನಿ ಒಕ್ಕೂಟದ ವಲಯ ಮೇಲ್ವಿಚಾರಕರಾದ ಸುಧೀರ್,ಒಕ್ಕೂಟದ ಕಾರ್ಯದರ್ಶಿ ಶೋಭಾ,ಖಜಾಂಚಿ ರಶ್ಮಿ ಹಾಗೂ ಒಕ್ಕೂಟದ ಸಂಪನ್ಮೂಲ ವ್ಯಕ್ತಿಗಳಾದ ಸಿಂಧೂ,ಅಶ್ವಿನಿ, ಬಿಂದು ಮತ್ತು ಅರಸಾಳು ವಿನಾಯಕ ಸ್ವಸಹಾಯ ಸಂಘದ ಯಶೋಧ ,ಸೀತಮ್ಮ ಸೇರಿದಂತೆ ಇನ್ನಿತರರಿದ್ದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

5 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

5 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

12 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago