ರಿಪ್ಪನ್ಪೇಟೆ : ಪಟ್ಟಣದ ವಿನಾಯಕ ವೃತ್ತದ ಬಳಿಯ ಹೊಸನಗರ-ತೀರ್ಥಹಳ್ಳಿ ರಸ್ತೆಗೆ ಹೊಂದಿಕೊಂಡಿರುವ ಸಾರ್ವಜನಿಕ ಬಸ್ಪ್ರಯಾಣಿಕರ ತಂಗುದಾಣಕ್ಕೆ ಹೋಗಿ ಬರುವ ಜಾಗದಲ್ಲಿ ಅವೈಜ್ಞಾನಿಕ ಕಬ್ಬಿಣದ ರಾಡುಗಳ ಮೂಲಕ ತಡೆಗೋಡೆ ಮಾಡಿರುವುದರಿಂದ ಮಹಿಳೆಯರು, ವೃದ್ದರು ಮತ್ತು ಅನಾರೋಗ್ಯ ಪೀಡಿತರು ಬಿದ್ದು ಕಾಲು ಕೈ ಮುರಿದುಕೊಂಡ ಗಾಯಗಳಾದ ಘಟನೆಗಳು ನಡೆದಿರುತ್ತವೆ ಈ ಬಗ್ಗೆ ಸಾಕಷ್ಟು ಭಾರಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಲಾದರೂ ಕೂಡಾ ಅದನ್ನು ತೆರವುಗೊಳಿಸದೇ ನಿರ್ಲಕ್ಷ ವಹಿಸಿದ್ದಾರೆಂದು ಆರೋಪಿಸಿ ಬರುವ ಜುಲೈ 25 ರಂದು ಸೋಮವಾರ ಪಕ್ಷಾತೀತವಾಗಿ ಪ್ರತಿಭಟನೆ ಏರ್ಪಡಿಸಲಾಗಿದೆ ಎಂದು ಜೆಡಿಎಸ್ ರಾಜ್ಯ ಮುಖಂಡ ಆರ್.ಎ.ಚಾಬುಸಾಬ್ ಮತ್ತು ಜನಪರ ಜಾಗೃತಿ ಹೋರಾಟ ಸಮಿತಿ ಅಧ್ಯಕ್ಷ ಟಿ.ಆರ್.ಕೃಷ್ಣಪ್ಪ ತಿಳಿಸಿದರು.
ಗ್ರಾಮ ಪಂಚಾಯಿತ್ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬಸ್ತಂಗುದಾಣದ ಬಳಿ ಅವೈಜ್ಞಾನಿಕವಾಗಿ ಕಬ್ಬಿಣದ ರಾಡು ಅಳವಡಿಸಿರುವುದರಿಂದಾಗಿ ಸಾಕಷ್ಟು ಪ್ರಯಾಣಿಕರು ಬಸ್ನಿಂದ ಇಳಿಯುವಾಗ ಬಿದ್ದಿರುತ್ತಾರೆ ಹಲವರಿಗೆ ಗಾಯಗಳಾಗಿರುತ್ತದೆ ಮತ್ತು ಅಟೋ ನಿಲ್ದಾಣದಿಂದಾಗಿ ತಂಗುದಾಣಕ್ಕೆ ಹೋಗಲು ಜಾಗವೇ ಇಲ್ಲದ ಸ್ಥಿತಿ ಎದುರಾಗಿದೆ.ಮತ್ತು ಹಲವರು ಮಧ್ಯಸೇವಿಸಿ ಬಸ್ ತಂಗುದಾಣದಲ್ಲಿ ಅಡ್ಡಾದಿಡ್ಡಿಯಾಗಿ ಮಲಗಿರುತ್ತಾರೆ ಹಾಗೂ ಮಲ ಮೂತ್ರ ವಿಸರ್ಜನೆ ಯೊಂದಿಗೆ ಎಲ್ಲದಂರಲ್ಲಿ ಗುಟ್ಕಾ ಹಾಕಿ ಉಗಿದು ದುರ್ನಾತ ಬೀರುವಂತಾಗಿದ್ದು ಪ್ರಯಾಣಿಕರು ಬಸ್ ತಂಗುದಾಣಕ್ಕೆ ಹೋಗಲು ವಾಕರಿಸುವಂತಾಗಿದೆ ಎಂದು ಅಕ್ರೋಶ ವ್ಯಕ್ತಪಡಿಸಿದರು.
ಅಲ್ಲದೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಾಕಷ್ಟು ಭಷ್ಟಾಚಾರ ವಾಸನೆ ಕೇಳಿಬರುತ್ತಿದ್ದು ಈ ಬಗ್ಗೆ ದಾಖಲೆಗಳ ಸಹಿತ ಪ್ರತಿಭಟನೆ ದಿನ ಬಹಿರಂಗ ಪಡಿಸುವುದಾಗಿ ವಿವರಿಸಿದರು.
ಕಾಂಗ್ರೇಸ್ ,ರೈತಸಂಘ,ಜೆಡಿಎಸ್.ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು ಈಗಾಗಲೇ ಎಲ್ಲ ಪಕ್ಷದವರು ಬೆಂಬಲದ ಬಗ್ಗೆ ಒಪ್ಪಿಗೆ ಸೂಚಿಸಿದ್ದಾರೆಂದರು.
ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಮುಖಂಡ ಜಿ.ಎಸ್.ವರದರಾಜ್ ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್