ಸಕ್ರೆಬೈಲು ಆನೆ ಬಿಡಾರದ ತುಂಗಾ ಹಿನ್ನೀರಿನಲ್ಲಿ ಜಂಗಲ್ ರೇಸಾರ್ಟ್ ವತಿಯಿಂದ ಇಂದು ಬೋಟ್ ವ್ಯವಸ್ಥೆಗೆ ಚಾಲನೆ ನೀಡಲಾಯಿತು.
ಸಂಸದ ಬಿ.ವೈ.ರಾಘವೇಂದ್ರ ರವರು ನೂತನ ಬೋಟ್ ಗೆ ಚಾಲನೆ ನೀಡಿದರು. ನಂತರ ಸಂಸದರು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಂಗಲ್ ರೇಸಾರ್ಟ್ ನ ನಿರ್ದೆಶಕ ರಾಜೇಶ್ ಕಾಮತ್ ಸೇರಿದಂತೆ ಇತರರು ಬೋಟ್ ನಲ್ಲಿ ವಿಹರಿಸಿದರು.
ನಂತರ ಮಾತನಾಡಿದ ಸಂಸದರು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಬೋಟಿಂಗ್ ವ್ಯವಸ್ಥೆ ಉಪಯುಕ್ತವಾಗಲಿದೆ ಎಂದರು.
ಸಕ್ರೆಬೈಲು ಆನೆಬಿಡಾರದಲ್ಲಿ ಇನ್ಮುಂದೆ ಪ್ರವಾಸಿಗರು ಆನೆಗಳನ್ನು ವೀಕ್ಷಿಸುವುದು ಮಾತ್ರವಲ್ಲ, ತುಂಗಾ ಹಿನ್ನೀರಿನಲ್ಲಿ ಬೋಟಿಂಗ್ ಸ್ಪೋರ್ಟ್ಸ್ ಕೂಡ ಆಡಬಹುದು.
ಏನೇನು ಲಭ್ಯ?
ಸಕ್ರೆಬೈಲಿನ ಆನೆಗಳ ಬಿಡಾರದ ಜೊತೆಗೆ ಇಲ್ಲಿನ ಹಿನ್ನೀರಿನ ವಿಹಂಗಮ ನೋಟವನ್ನು ಆಸ್ವಾದಿಸುವುದು ಮಾತ್ರವಲ್ಲ ಜಲಕ್ರೀಡೆಗಳಲ್ಲಿ ಭಾಗವಹಿಸಬಹುದಾಗಿದೆ. ಇಲ್ಲಿನ ಸುಂದರ ವಾತಾವರಣ ಮನಮೋಹಕವಾಗಿದ್ದು, ಪ್ರವಾಸಿಗರನ್ನು ಸಂತಸಪಡಿಸಲಿದೆ. ಇಲ್ಲಿನ ಶುದ್ಧ ಗಾಳಿ, ನೀರು, ಅಷ್ಟಾಗಿ ಇರದ ಜನಜಂಗುಳಿ ವಾತಾವರಣ ಇದೆಲ್ಲವೂ ಪ್ರವಾಸಿಗರನ್ನು ಆಕರ್ಷಿಸಲಿದೆ.
ಹೊಸದಾಗಿ ಆರಂಭಿಸಲಾಗುತ್ತಿರುವ ಈ ಬೋಟಿಂಗ್ ಸ್ಪೋರ್ಟ್ಸ್ ಪ್ರವಾಸಿಗರಿಗೆ ಹೊಸ ಆಕರ್ಷಣೆಯಾಗಿರಲಿದೆ. ಮುಂದಿನ ದಿನಗಳಲ್ಲಿ ಸ್ವಯಂ ಹುಟ್ಟು ಹಾಕುತ್ತಾ ಬೋಟಿಂಗ್ ಮಾಡುವುದು, ರ್ಯಾಫ್ಟಿಂಗ್, ಪೆಡಲಿಂಗ್ ಕೂಡ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಜಂಗಲ್ ರೆಸಾರ್ಟ್ ನಲ್ಲಿ ತಂಗುವವರು ಮಾತ್ರವಲ್ಲದೇ ಸಾರ್ವಜನಿಕರಿಗೂ ಅವಕಾಶ ಮುಕ್ತವಾಗಿದ್ದು, ಪ್ರವಾಸಿಗರು ಕುಟುಂಬದ ಸದಸ್ಯರೊಂದಿಗೆ ಈ ಜಲಕ್ರೀಡೆಯ ಸವಿಯನ್ನು ಸವಿಯಬಹುದಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್