ರಿಪ್ಪನ್ ಪೇಟೆ : ಪಟ್ಟಣದಲ್ಲಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ 26 ಸಾವಿರ ಮೌಲ್ಯದ ಹಳೆ ಕಟ್ಟಡದ ಸಾಮಗ್ರಿಗಳಾದ ಮರ ಮುಟ್ಟು ಗಳನ್ನು ಹರಾಜಿನಲ್ಲಿ 1 ಕೋಟಿ ರೂಪಾಯಿಗೆ ಹರಾಜು ಕರೆದ ಪ್ರಸಂಗ ಇಂದು ರಿಪ್ಪನ್ ಪೇಟೆ ಪಟ್ಟಣದಲ್ಲಿ ನಡೆದಿದೆ.
ಹಳೆ ನಾಟಕ್ಕೆ ಸರ್ಕಾರಿ ಮೌಲ್ಯ 26,388 ನಿಗದಿ ಮಾಡಿತ್ತು.ಇಂದು ಹರಾಜು ಪ್ರಕ್ರಿಯೆಯಲ್ಲಿ ಮೊದಲು 2 ಸಾವಿರದಿಂದ ಹರಾಜು ಪ್ರಾರಂಭವಾಗಿ ಹರಾಜುದಾರರು 4 ಸಾವಿರ ಎಂದು ಕೂಗುತಿದ್ದಾಗ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ಏಕಾಏಕಿ ಒಂದು ಕೋಟಿ ಮೊತ್ತಕ್ಕೆ ಹರಾಜು ಕೂಗಿದಾಗ ಅಧಿಕಾರಿಗಳು ಹಾಗೂ ಹರಾಜುದಾರರು ಒಂದು ಕ್ಷಣ ತಬ್ಬಿಬ್ಬಾದ ಘಟನೆ ನಡೆದಿದೆ.
ಸಮಾಜ ಕಲ್ಯಾಣ ಇಲಾಖೆಯ ನಿರ್ಲಕ್ಷದಿಂದ ಯಾವುದೇ ರಕ್ಷಣೆ ಇಲ್ಲದೆ ಮಳೆಯಲ್ಲಿ ಬೇಕಾಬಿಟ್ಟಿ ಶೇಖರಣೆ ಮಾಡಿದ ಹಿನ್ನೆಲೆಯಲ್ಲಿ ಇದನ್ನು ವಿರೋಧಿಸಿ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡು ನಿಗದಿತ ಠೇವಣಿ ಕಟ್ಟಿದ ಸಾಮಾಜಿಕ ಹೋರಾಟಗಾರ ಟಿ.ಆರ್.ಕೃಷ್ಣಪ್ಪ ಒಂದು ಕೋಟಿಗೆ ಹರಾಜು ಕರೆದರು.ಇದನ್ನು ಆಲಿಸಿದ ಹರಾಜು ಪ್ರಕ್ರಿಯೆ ಅಧಿಕಾರಿಗಳು ತಬ್ಬಿಬ್ಬಾದರು.
ಇನ್ನುಳಿದ ಹರಾಜುದಾರರು ಮುಂದುವರೆದು ಬಿಡ್ ಕರೆಯದ ಕಾರಣ ಅಧಿಕಾರಿಗಳು ಈ ಬಗ್ಗೆ ಅಂತಿಮವಾಗಿ ಟಿ ಆರ್ ಕೃಷ್ಣಪ್ಪ ಕರೆದ ಹರಾಜು ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದೆಂದು ತಿಳಿಸಿ ಹರಾಜು ಪ್ರಕ್ರಿಯೆ ಸ್ಥಗಿತಗೊಳಿಸಿದರು.
ಹರಾಜು ಪ್ರಕ್ರಿಯೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾಗರಾಜ್ ಕೆ, ಸಹಾಯಕ ನಿರ್ದೇಶಕ ಇಕ್ಬಾಲ್, ಹೊಸನಗರದ ಕಾರ್ಯನಿರ್ವಣಾಧಿಕಾರಿ ಪ್ರವೀಣ್, ಹಾಸ್ಟೆಲ್ ವಾರ್ಡನ್ ರಾಘವೇಂದ್ರ ಕೆ.ಎಸ್ ಇನ್ನಿತರರಿದ್ದರು.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್