ಆಯುಷ್ ವಿಶ್ವವಿದ್ಯಾಲಯ ಕೂಡಲೇ ಪ್ರಾರಂಭಿಸುವಂತೆ ಸಮಾಜವಾದಿ ಗೋಪಾಲಗೌಡ ಅಧ್ಯಯನ ಟ್ರಸ್ಟ್ ವತಿಯಿಂದ ಒತ್ತಾಯ :

ಶಿವಮೊಗ್ಗ ನಗರದಲ್ಲಿ ಕಳೆದ 2021-22ರ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳಾದ ಬೊಮ್ಮಾಯಿಯವರು ಮಂಜೂರು ಮಾಡಿ, 20 ಕೋಟಿ ರೂಪಾಯಿ ಹಣವನ್ನು ಮೀಸಲಿಡಲಾಗಿದ್ದ ಆಯುಷ್
ವಿಶ್ವ ವಿದ್ಯಾಲಯದ ಯೋಜನೆಯ ಭರವಸೆಯು ಖಾಸಗಿ ಆಯುರ್ವೇದ ಮತ್ತು ಖಾಸಗಿ ನರ್ಸಿಂಗ್ ಹೋಂಗಳ ಚಿತಾವಣೆಯಿಂದ ಠುಸ್ಸ್ ಆಗಿದೆ ಎಂದು ಸಮಾಜವಾದಿ ಗೋಪಾಲಗೌಡ ಅಧ್ಯಯನ ಟ್ರಸ್ಟ್ ನ ಕಲ್ಲೂರು ಮೇಘರಾಜ್ ಮತ್ತು ಆರ್ ಎ ಚಾಬುಸಾಬ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಇಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಶಿವಮೊಗ್ಗದಲ್ಲಿ ಆಯುಷ್ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಿದರೆ ಖಾಸಗಿ ಮತ್ತು ಸರ್ಕಾರಿ ಆಯುರ್ವೇದ, ಯುನಾನಿ, ಹೋಮಿಯೋಪತಿ, ಯೋಗ, ನ್ಯಾಚುಯೋಪತಿ ಮುಂತಾದ ಕಾಲೇಜುಗಳು ಈ ವಿ. ವಿ. ಯ ವ್ಯಾಪ್ತಿಗೆ ಒಳಪಡುತ್ತವೆ. ಈ ಹಿಂದೆ ಶಿವಮೊಗ್ಗ ಹೊರವಲಯದ ಸೋಗಾನೆ ಸರ್ವೆ ನಂ. 120 ರಲ್ಲಿ  ಆಯೂಶ್ ವಿ. ವಿ. ಯನ್ನು ಸ್ಥಾಪನೆ ಮಾಡಬಹುದಾಗಿದೆ.


ಸರ್ವೆ ನಂ. 120ರಲ್ಲಿ ಆಯುರ್ವೇದಿಕ್ ಕಾಲೇಜಿಗೆ ಮಂಜೂರಾತಿ ಜಾಗಕ್ಕೆ ಕಾಂಪೌಂಡ್ ನಿರ್ಮಿಸಲು ಕರ್ನಾಟಕ ಸರ್ಕಾರ 92 ಲಕ್ಷ ರೂಪಾಯಿಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. ಈ ಪೈಕಿ ರೂ. 41,22,000-00 ಹಣ ಖರ್ಚಾಗಿ ಕಾಲೇಜಿಗಾಗಿ 100-00 ಎಕರೆ ಜಮೀನು ಮೀಸಲಿಡಲಾಗಿದೆ. ನೀಡಲಾಗಿದೆ. ಸುಮಾರು 100 ಮೀಟರ್ ಕಾಂಪೌಂಡ್ ನಿರ್ಮಿಸಲಾಗಿದೆ. ಉಳಿದ ಹಣ ರೂ. 48,08,000-00 ಗಳು ಶಿವಮೊಗ್ಗ ಪಿ.ಡಬ್ಲೂಡಿ ನಂ.1 ಉಪವಿಭಾಗದಲ್ಲಿ ಡೆಪಾಜಿಟ್ ಆಗಿದೆ.


ಸೋಗಾನೆ ಸರ್ವೆ ನಂ. 120 ರಲ್ಲಿ ಇದ್ದ 53 ಬಗರ್‌ಹುಕುಂ ರೈತರಿಗೆ ರೂ. 2.00 ಲಕ್ಷದಂತೆ ಒಟ್ಟು 33 ಬಗರ್‌ಹುಕುಂ ರೈತರಿಗೆ ಪರಿಹಾರದ ಹಣ ನೀಡಲಾಗಿದೆ ಉಳಿದ 20 ಬಗರ್‌ಹುಕುಂ ರೈತರು ಪರಿಹಾರ ಪಡೆಯದೇ ಹೈಕೋರ್ಟಿನಲ್ಲಿ ಮೊಕದ್ದಮೆ ಹೂಡಿದ್ದಾರೆ. ಈ ಮೊಕದ್ದಮೆಯನ್ನು ರಾಜ್ಯ ಸರ್ಕಾರ ಸಾರ್ವಜನಿಕರ ಹಿತಾಸಕ್ತಿಯಿಂದ ವಜಾ ಗೊಳಿಸಬೇಕಾಗಿದೆ.



ಇಷ್ಟೆಲ್ಲಾ ಸಕಾರಾತ್ಮಕ ಅಂಶಗಳನ್ನೇ ಗಮನಿಸಿ ಅಂದಿನ ಮುಖ್ಯಮಂತ್ರಿಗಳಾಗಿದ್ದ  ಬಿ. ಎಸ್. ಯಡಿಯೂರಪ್ಪನವರು ಶಿವಮೊಗ್ಗಕ್ಕೆ ನೂತನ ಆಯುಷ್ ವಿ. ವಿ. ಯನ್ನು ನಮ್ಮ ಸಂಘಟನೆಯ ಕೋರಿಕೆಯ ಮೇರೆಗೆ ಮತ್ತು ಹಿರಿಯ ಮುಖಂಡ ಡಿ. ಹೆಚ್. ಶಂಕರಮೂರ್ತಿಯವರ ಶಿಫಾರಸ್ಸಿನ ಮೇಲೆ ಮಂಜೂರು ಮಾಡಿದ್ದರು. ಆದರೆ ಈ ಮಂಜೂರಾತಿ ಆದೇಶವನ್ನು ಜಾರಿಗೊಳಿಸದೇ ಶ್ರೀ ಬೊಮ್ಮಾಯಿಯವರ ಸರ್ಕಾರ ಅಸಡ್ಡೆ ತೋರುತ್ತಿರುವುದು ಖಂಡನೀಯ ವಿಚಾರವಾಗಿದೆ ಎಂದು ಈ ಸಂಧರ್ಭದಲ್ಲಿ  ಹೇಳಿದರು.


ಪತ್ರಿಕಾಗೋಷ್ಠಿಯಲ್ಲಿ ಹೊಳೆಮಡಿಲು ವೆಂಕಟೇಶ್, ಡಾ. ಶೇಖರ್‌ ಗೌಳೇರ್, ಎಸ್. ಸಿ. ರಾಮಚಂದ್ರ, ಹೆಚ್. ಎಂ. ಸಂಗಯ್ಯ, ಶಂಕ್ರಾನಾಯ್ಕ, ಮುಂತಾದವರು ಹಾಜರಿದ್ದರು.


ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ – ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ ಪರಿಹಾರ

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…

7 hours ago

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…

11 hours ago

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ – ಇಬ್ಬರ ಬಂಧನ

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…

12 hours ago

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…

15 hours ago

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…

16 hours ago

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್!

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…

1 day ago