ಶಿವಮೊಗ್ಗ : ಸೊರಬದಲ್ಲಿ 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಪ್ರತಿ ಜಿಲ್ಲೆಯಲ್ಲಿ 75 ಕಿ ಮೀ ದೂರ ಕ್ರಮಿಸಬೇಕಿದ್ದು ನಾಳೆ ಸೊರಬ ಪಟ್ಟಣದಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಮಧುಬಂಗಾರಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂಬೇಡ್ಕರ್ ಸಂವಿಧಾನವನ್ನ ತಿದ್ದುಪಡಿ ಬಗ್ಗೆ ಬಿಜೆಪಿ ಮಾತನಾಡುತ್ತಿದ್ದಾರೆ. ಧ್ವಜದ ಬಗ್ಗೆ ಮಾತನಾಡುತ್ತಾರೆ. 150 ಕೋಟಿ ವೆಚ್ಚದಲ್ಲಿ ಧ್ವಜ ಹಂಚಲಾಗುತ್ತಿದೆ. ಧ್ವಜ ಹಂಚುವ ಶಕ್ತಿ ನೀಡಿದ್ದು ಮಹಾತ್ಮ ಗಾಂಧಿಯವರ ಕೊಡುಗೆ ಎಂದು ಗುಡುಗಿದರು. ಕಾಶ್ಮೀರಿಫೈಲ್ಸ್ ಸಿನಿಮಾಗೆ ತೆರಿಗೆ ಪಡೆಯುತ್ತಾರೆ. ಆದರೆ ಧ್ವಜಕ್ಕೆ ಹಣ ಪಡೆಯುತ್ತಾರೆ. ಇದೇ ಬಿಜೆಪಿಯ ಅಮೃತ ಮಹೋತ್ಸವ ಎಂದು ಕುಟುಕಿದರು.
ಅಂದು ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆದಿದೆ. ಇಂದು ಬಿಜೆಪಿ ಮುಕ್ತ ರಾಜ್ಯ ಮಾಡುವ ಅವಶ್ಯಕತೆ ಇದೆ. ಅದಕ್ಕಾಗಿ ಹೋರಾಟ ಮಾಡಬೇಕಿದೆ. ಮನೆ ಬಿದ್ದವರಿಗೆ ಪರಿಹಾರ ನೀಡಲು ಅಧಿಕಾರಿಗಳು ಹಿಂದೆ ಮುಂದೆ ಮಾಡ್ತಾ ಇದ್ದಾರೆ. ಸರ್ಕಾರಕ್ಕೆ ಅಧಿಕಾರಿಗಳ ಮೇಲಿನ ನಿಯಂತ್ರಣ ಕಳೆದುಕೊಂಡಿದೆ. ಐದು ಲಕ್ಷ ರೂ ಪರಿಹಾರ ನೀಡಬೇಕು ಮತ್ತು ಓಡಾಡಬೇಕಾದ ಹಿನ್ನಲೆಯಲ್ಲಿ ಅಧಿಕಾರಿಗಳು ನಿವಾಸಿಗಳೆ ಮನೆ ಕೆಡವಿಕೊಂಡಿದ್ದಾರೆ ಎಂದು ಹೇಳ್ತಿದ್ದಾರೆ. ಇದೆಲ್ಲ ಸರಿಯಾಗಬೇಕಿದೆ ಎಂದರು.
ಇನ್ನು ಪರ್ಸೆಂಟೇಜ್ ವಿಷಯ ಮಾತನಾಡಿ ಸೊರಬದಲ್ಲೂ ಪರ್ಸೆಂಟೇಜ್ ನಡೆದಿದೆ. ಸಿದ್ದರಾಮಯ್ಯನವರ ಅವರ ಅವಧಿಯಲ್ಲಿ ರಸ್ತೆ ಎಷ್ಟು ಚೆನ್ನಾಗಿತ್ತು. ಇವತ್ತು ಹಾಕಿರುವ ಟಾರ್ ಹಪ್ಪಳ ಬಂದಹಾಗೆ ಬರುತ್ತಿದೆ. ಇದಕ್ಕೆಲ್ಲಾ ಪರ್ಸೆಂಟೇಜ್ ಕಾಮಗಾತಿ ಎಂದು ದೂರಿದರು.
ಸುದ್ದಿಗೋಷ್ಠಿ ಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್ ಎಸ್ ಸುಂದರೇಶ್, ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನ ಕುಮಾರ್, ಆರ್ ಪ್ರಸನ್ನ ಕುಮಾರ್, ಎನ್ ರಮೇಶ್, ಕುಲಗೋಡು ರತ್ನಾಕರ್ ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್