ಕೋಮುಗಲಭೆಯಲ್ಲ, ಜೂಜಿನ ವೇಳೆ ನಡೆದ ಗಲಾಟೆ : ವಿಡಿಯೋ ಸಹಿತ ಬಿಜೆಪಿಗೆ ಭದ್ರಾವತಿ ಶಾಸಕ ತಿರುಗೇಟು


ಸ್ವಾತಂತ್ರ್ಯ ದಿನಾಚರಣೆ ದಿನವಾದ ಸೋಮವಾರ ಸಂಜೆ ಸಾವರ್ಕರ್​ ಫ್ಲೆಕ್ಸ್​ ತೆರವು ವಿವಾದದಲ್ಲಿ ಪ್ರೇಮ್​ಸಿಂಗ್​ ಎಂಬಾತನಿಗೆ ಮುಸ್ಲಿಂ ಯುವಕರು ಚಾಕುವಿನಿಂದ ಇರಿದ ಪ್ರಕರಣ ಸಂಬಂಧ ಶಿವಮೊಗ್ಗದಲ್ಲಿ ಪ್ರಕ್ಷ್ಯಬ್ಧ ಸ್ಥಿತಿ ನಿರ್ಮಾಣಗೊಂಡಿದೆ.

ಇದರ ಬೆನ್ನಲ್ಲೇ ಅಂದರೆ ಮಂಗಳವಾರ ಭದ್ರಾವತಿಯಲ್ಲಿ ಹಿಂದು ಯುವಕ ಸುನೀಲ್​ ಎಂಬಾತನ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ನಡೆದಿತ್ತು. ಇದು ಶಿವಮೊಗ್ಗ ಜಿಲ್ಲೆ ಮಾತ್ರವಲ್ಲ, ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಇದೀಗ ಸುನೀಲ್​ ಮೇಲಿನ ಹಲ್ಲೆ ಪ್ರಕರಣ ಕುರಿತು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್​, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಭದ್ರಾವತಿ ಯುವಕನ ಪ್ರಕರಣ ಕುರಿತು ವಿಡಿಯೋ ಬಿಡುಗಡೆ ಮಾಡಿದ ಬಿ.ಕೆ.ಸಂಗಮೇಶ್, ಹಲ್ಲೆಗೊಳಗಾದ ಸುನೀಲ್ ಹಾಗೂ ಹಲ್ಲೆ ನಡೆಸಿದ ಮುಬಾರಕ್ ಇಬ್ಬರೂ ಸ್ನೇಹಿತರು. ಜೂಜಾಟದ ವಿಷಯಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ. ಇದೇ ಕಾರಣಕ್ಕೆ ಮುಬಾರಕ್, ಸುನೀಲ್ ಮೂಗಿಗೆ ಹೊಡೆದಿದ್ದಾನೆ. ಇದನ್ನು ಕೋಮುಗಲಭೆಗೆ ಹಾಗೂ ಊರಿನಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಬಳಸಿಕೊಳ್ಳುತ್ತಿದೆ. ಭದ್ರಾವತಿಯಲ್ಲಿ ನಾವೆಲ್ಲರೂ ಒಂದೇ ತಾಯಿಯ ಮಕ್ಕಳಂತೆ ಇದ್ದೇವೆ. ಬಿಜೆಪಿ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಲು ಹೊರಟಿದೆ. ಆದರೆ ಭದ್ರಾವತಿಯಲ್ಲಿ ಇದಕ್ಕೆ ಅವಕಾಶವಿಲ್ಲ. ಈ ರೀತಿಯ ಘಟನೆಯಲ್ಲಿ ರಾಜಕಾರಣಿಗಳ ಮಕ್ಕಳು ಸತ್ತಿಲ್ಲ ಹಾಗೂ ಶ್ರೀಮಂತರ ಮಕ್ಕಳೂ ಸತ್ತಿಲ್ಲ. ಬಡವರು ಪಾಪಿಗಳು ಸತ್ತಿದ್ದಾರೆ ಎಂದರು.

ಭದ್ರಾವತಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಹೋಗಲು ಸುನೀಲ್ ಹೊರಟಿದ್ದ. ಆದರೆ ಬಿಜೆಪಿಯವರು ವಿಷಯ ದೊಡ್ಡದು ಮಾಡಿ ಆಸ್ಪತ್ರೆಯಲ್ಲೇ ಉಳಿಯುವಂತೆ ಮಾಡಿದ್ದಾರೆ. ಇದು ಕೋಮುಗಲಭೆಯಲ್ಲ, ಜೂಜಿನ ಕಾರಣಕ್ಕೆ ನಡೆದ ಗಲಾಟೆ ಎಂದು ದೇವಸ್ಥಾನಕ್ಕೆ ನಾನು ಬಂದು ಹೇಳುತ್ತೇನೆ. ಬಿಜೆಪಿಯವರಿಗೆ ಆತ್ಮಸಾಕ್ಷಿ ಇದ್ದರೆ ದೇವರ ಮೇಲೆ ನಂಬಿಕೆ ಇದ್ದರೆ ಇದು ಕೋಮುಗಲಭೆ ಎಂದು ದೇವಾಲಯದಲ್ಲಿ ಪ್ರಮಾಣ ಮಾಡಲಿ. ದೇವಸ್ಥಾನಕ್ಕೆ ಅವರು ಬರಲಿ ಆಣೆ ಮಾಡಲಿ ಎಂದು ಬಿ.ಕೆ.ಸಂಗಮೇಶ್ ಸವಾಲು ಹಾಕಿದರು.

ಬಿಜೆಪಿಯವರು ಬೆಂಕಿ ಹಚ್ಚಿ ನೀರು ಕಾಯಿಸಿಕೊಳ್ಳುವ ಕೆಲಸ ಮಾಡುತಿದ್ದಾರೆ. ಮುಬಾರಕ್ ಯಾರು ಎಂದೇ ನನಗೆ ಗೊತ್ತಿಲ್ಲ, ಹೀಗಿರುವಾಗ ಪೊಲೀಸ್ ಠಾಣೆಗೆ ಕರೆ ಮಾಡಿ ನಾನೇಕೆ ಅವನನ್ನು ಬಿಡಿಸಲಿ? ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸುಳ್ಳು ಹೇಳಿ ಪ್ರಚೋದನೆ ನೀಡುವುದರಲ್ಲಿ ಎತ್ತಿದ ಕೈ. ಬಿಜೆಪಿ ಅಜೆಂಡಾನೇ ಬರೀ ಹಿಂದುತ್ವ ಹಾಗೂ ಬೆಂಕಿ ಹಚ್ಚುವ ಕೆಲಸ. ಊರು ತಣ್ಣಗೆ ಇರಬೇಕು ಅಂದ್ರೆ ಬಿಜೆಪಿಯವರಿಗೆ ಆಗುವುದಿಲ್ಲ‌ ಎಂದು ಬಿ.ಕೆ.ಸಂಗಮೇಶ್ ಕಟುವಾಗಿ ಟೀಕಿಸಿದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

4 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

4 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

14 hours ago

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

22 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

23 hours ago