ತೀರ್ಥಹಳ್ಳಿ : ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯಿಂದ ಸ್ಥಳೀಯ ಮೇಲಿನ ಕುರುವಳ್ಳಿ ಬಂಡೆ ಕಾರ್ಮಿಕರಿಗೆ ನಿರಂತರ ಕಿರುಕುಳ
ನೀಡಲಾಗುತ್ತಿದೆ ಎಂದು ಮೇಲಿನ ಕುರುವಳ್ಳಿ ಗ್ರಾ.ಪಂ. ಉಪಾಧ್ಯಕ್ಷ ಹೊರಬೈಲು ಪ್ರಭಾಕರ್ ಆರೋಪಿಸಿದ್ದಾರೆ.
ಪಟ್ಟಣದ ತಾಲ್ಲೂಕು ಕಛೇರಿ ಎದುರು ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ತೀರ್ಥಹಳ್ಳಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಅವಿನಾಶ್ ರವರು ಕಳೆದ ಕೆಲ ದಿನಗಳಿಂದ ಮೇಲಿನ ಕುರುವಳ್ಳಿಯಲ್ಲಿನ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೆ ಬಂದು ಕಾರ್ಮಿಕರು ಕಷ್ಟ ಪಟ್ಟು ಮಾಡಿರುವಂತಹ ಕಲ್ಲು ಕಂಬ 150 ಹಾಗೂ ಇನ್ನಿತರ ಕಲ್ಲಿನ ಸಾಮಾಗ್ರಿಗಳನ್ನು ಉದ್ದೇಶಪೂರ್ವಕವಾಗಿ ಒಡೆದು ಹಾಕಿದ್ದು, ಇದು ಅಕ್ಷಮ್ಯ ಅಪರಾಧವಾಗಿರುತ್ತದೆ ಮತ್ತು ಅಧಿಕಾರ ವ್ಯಾಪ್ತಿಗೆ ಮೀರಿದ ಕೃತ್ಯವಾಗಿರುತ್ತದೆ.
ಕಲ್ಲುಕಂಬ ಹಾಳುಗೆಡವಿದವರ ವಿರುದ್ಧ ಕಾನೂನು ಕ್ರಮ ಗೊಳ್ಳಬೇಕು. ಈ ರೀತಿ ಕಾರ್ಮಿಕರನ್ನು ಶೋಷಣೆ ಮಾಡುತ್ತಿರುವ ಅಧಿಕಾರಿ ವಿರುದ್ಧ ಸೂಕ್ತಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ನಂತರ ಗ್ರಾ.ಪಂ. ಸದಸ್ಯ ನಿಶ್ಚಲ್ ಜಾದೂಗಾರ್ ಮಾತಾನಾಡಿ ಕಲ್ಲು ಕುಟಿಕರು ಕಲ್ಲು ಬಂಡೆಯೊಂದಿಗೆ ಗುದ್ದಾಡಿ ಕಲ್ಲು ಸಾಮಾಗ್ರಿಗಳನ್ನು ತಯಾರಿಸುವ ಕಠಿಣಶ್ರಮ ಜೀವಿಗಳಾಗಿದ್ದು ಇವರ ವೃತ್ತಿ ಬದುಕಿಗೆ ಅಡ್ಡಿ ಉಂಟು ಮಾಡುವ ಅಧಿಕಾರಿಗಳು ಹಾಗೂ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಇದೇ ರೀತಿ ಅಮಾಯಕ ಕಾರ್ಮಿಕರ ಮೇಲೆ ಅದಿಕಾರಿಗಳು ದರ್ಪ ಮುಂದುವರೆದರೆ ಮುಂದಿನ ದಿನಗಳಲ್ಲಿ ಇನ್ನೂ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ
ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮೇಲಿನಕುರುವಳ್ಳಿ ಗ್ರಾ.ಪಂ. ಅಧ್ಯಕ್ಷೆ ಭವ್ಯಾ ರಾಘವೇಂದ್ರ, ಉಪಾಧ್ಯಕ್ಷ ಹೊರಬೈಲು ಪ್ರಭಾಕರ್, ಸದಸ್ಯರಾದ ಯು.ಡಿ. ವೆಂಕಟೇಶ್, ಅನಿತಾ ಪ್ರವೀಣ್, ಆನಂದ್ ಸಿ., ಸುಧಾ ಕೃಷ್ಣಕುಮಾರ್, ನಿಶ್ಚಲ್ ಜಾದೂಗಾರ್ ಸೇರಿ ಹಲವರು ಉಪಸ್ಥಿತರಿದ್ದರು.
ವರದಿ : ಅಕ್ಷಯ್ ಕುಮಾರ್
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್