Headlines

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ :

ಖಾಸಗಿ ಬಸ್​ವೊಂದು ಚಾಲಕ ನಿಯಂತ್ರಣ ತಪ್ಪಿ ರಸ್ತೆ ಪಕ್ಕ ಉರುಳಿ ಬಿದ್ದ ಪರಿಣಾಮ 20 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಹೊಳೆಹೊನ್ನೂರು ಸಮೀಪ ಸಿದ್ಲಿಪುರದ ಬಳಿ ನಡೆದಿದೆ.

ಶಿವಮೊಗ್ಗ ದಿಂದ ಚಿತ್ರದುರ್ಗ ಕ್ಕೆ ಹೋಗುತ್ತಿದ್ದ ಬಸ್​, ಹೊಳೆಹೊನ್ನೂರು ಸಮೀಪ ಸಿದ್ಲಿಪುರದ ಬಳಿ ಪಲ್ಟಿ!

ಘಟನೆಯಲ್ಲಿ ಗಾಯಗೊಂಡವರಿಗೆ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಮೆಗ್ಗಾನ್​ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ.

ಹೊಳೆಹೊನ್ನೂರು ಸಮೀಪದ ಸಿದ್ಲಿಪುರದಲ್ಲಿ ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಬಸ್​ ಪಲ್ಟಿಯಾಗಿದೆ. ಎದುರಿನಿಂದ ಬರುತ್ತಿದ್ದ ಲಾರಿಗೆ ಜಾಗ ಬಿಡಲು ಸೈಡ್​ಗೆ ಬಂದಾಗ, ಬಸ್​ ರೋಡ್​ ಕೆಳಕ್ಕೆ ಇಳಿದಿದೆ. ಅಲ್ಲದೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

Leave a Reply

Your email address will not be published. Required fields are marked *