ಜಮೀನಿಗೆ ಹೋಗಲು ರಸ್ತೆ ಕಲ್ಪಿಸುವಂತೆ ಆಗ್ರಹಿಸಿ ಯುವ ಕೃಷಿಕನಿಂದ ತಾಲೂಕು ಕಛೇರಿ ಎದುರು ಉಪವಾಸ ಸತ್ಯಾಗ್ರಹ :

ಹೊಸನಗರ: ತಮ್ಮ ಜಮೀನಿಗೆ ತೆರಳಲು ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಯುವ ಕೃಷಿಕನೋರ್ವ ತಾಲೂಕು ಕಛೇರಿ ಆವರಣದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಹೊಸನಗರ ತಾಲೂಕಿನ ಎಚ್.ಮಳವಳ್ಳಿ ನಿವಾಸಿ ಕೆ.ಯು ದಿನೇಶ್ ಅವರು, ತಮ್ಮ ಜಮೀನಿಗೆ ತೆರಳಲು ರಸ್ತೆ ಬಂದ್ ಮಾಡಲಾಗಿದೆ. ಈ ಬಗ್ಗೆ ವರ್ಷಗಳ ಕಾಲ ಹೋರಾಟ ನಡೆಸಿದರೂ ಅಧಿಕಾರಿವರ್ಗ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


2019ರಲ್ಲಿಯೇ ತಹಸೀಲ್ದಾರ್, ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದೇನೆ. ನನ್ನ ಕೃಷಿ ಜಮೀನಿಗೆ ತೆರಳುವ ದಾರಿಗೆ ಅಡ್ಡಲಾಗಿ ಗ್ರಾಮದ ಇನ್ನೋರ್ವ ಕೃಷಿಕ ರೇವಣಪ್ಪ ಗೌಡ ಹಾಗೂ ಅವರ ಕುಟುಂಬದವರು ಸರಕಾರಿ ಜಾಗದಲ್ಲಿ ಬೇಲಿ ನಿರ್ಮಾಣ ಮಾಡಿದ್ದಾರೆ. ಇದರಿಂದ ನನ್ನ ಕೃಷಿ ಜಮೀನಿಗೆ ಹೋಗಲು ರಸ್ತೆ ಇಲ್ಲದಂತಾಗಿದೆ. ಈ ಬಗ್ಗೆ ಕಂದಾಯ ಅಧಿಕಾರಿಗಳು ಬೇಲಿ ತೆರವುಗೊಳಿಸಲು ಹಿಂದೆ ಆದೇಶ ಮಾಡಿದ್ದರು. ಆದರೆ ಇದುವರೆಗೂ ಬೇಲಿ ತೆರವುಗೊಳಿಸಿ, ದಾರಿಯನ್ನು ಖುಲ್ಲಾ ಗೊಳಿಸಿರುವುದಿಲ್ಲ.



ಅಲ್ಲದೇ ಇದೇ ಗ್ರಾಮದ ಸರಕಾರಿ ಜಾಗದಲ್ಲಿರುವ ಕೆರೆಯನ್ನು ಇದೇ ಆರೋಪಿಗಳು ಒತ್ತುವರಿ ಮಾಡಿದ್ದಾರೆ ಇದನ್ನು ಸಹಾ ತೆರವುಗೊಳಿಸಲು ಅಧಿಕಾರಿಗಳು ಆದೇಶ ಮಾಡಿದ ಬಳಿಕವೂ ತೆರವು ಕರ‍್ಯಾಚರಣೆ ನಡೆದಿಲ್ಲ. ಕಂದಾಯ ಇಲಾಖೆ ಅಧಿಕಾರಿಗಳು ತಹಸೀಲ್ದಾರ್ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ ನೀಡಿದರೂ, ಯಾವುದೇ ಕ್ರಮ ಕೈಗೊಳ್ಳದೇ ವಾಪಾಸಾಗಿದ್ದಾರೆ. ಅಧಿಕಾರಿ ವರ್ಗ ತೆರವುಗೊಳಿಸಲು ಮೀನಾ-ಮೇಷ ಎಣಿಸುತ್ತಿರುವುದರ ಹಿಂದೆ ಅನ್ಯ ಕಾರಣವಿದ್ದಂತೆ ಕಂಡು ಬರುತ್ತಿದೆ. ಪದೇ ಪದೇ ಮನವಿ ಮಾಡಿದರೂ ಉಪಯೋಗ ಆಗದ ಹಿನ್ನೆಲೆಯಲ್ಲಿ ತಾವು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದೇನೆ. ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ನ್ಯಾಯ ದೊರಕುವವರೆಗೂ ಸ್ಥಳದಲ್ಲಿಯೇ ಪ್ರತಿಭಟನೆ ಮುಂದುವರೆಸುತ್ತೇನೆ ಎಂದರು.


ರಾತ್ರಿಯಾದರು ಮುಂದುವರಿದ ಉಪವಾಸ ಸತ್ಯಾಗ್ರಹ :

ಇಂದು ಬೆಳಿಗ್ಗೆಯಿಂದ ತಾಲೂಕು ಕಛೇರಿ ಎದುರು ಕುಳಿತಿರುವ ದೇಶದ ಬೆನ್ನೆಲುಬಾದ ಯುವ ಕೃಷಿಕನ ಸಮಸ್ಯೆಯನ್ನು ಆಲಿಸಲು ಜಡ್ಡುಗಟ್ಟಿರುವ ಅಧಿಕಾರಿಗಳಿಗೆ ಸಮಯವಿಲ್ಲದೇ ಬೆಳಿಗ್ಗೆಯಿಂದ ಯಾವೊಬ್ಬ ಅಧಿಕಾರಿಯು ಹತ್ತಿರ ಸುಳಿದಿಲ್ಲ.


ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ದಿನೇಶ್ ರವರನ್ನು ಸಂಪರ್ಕಿಸಿದಾಗ ಬೆಳಿಗ್ಗೆಯಿಂದ ಯಾರು ಬಾರದೇ ರಾತ್ರಿ 9 ರ ಸುಮಾರಿಗೆ ತಹಶೀಲ್ದಾರರು ಬಂದು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರಾದರು ಅವರು ಕೊಡುತ್ತಿರುವ ಕಾರಣ ಕೇವಲ ತೇಪೆ ಹಚ್ಚುವ ಕೆಲಸವಾಗಿರುವ ಹಿನ್ನಲೆಯಲ್ಲಿ ನನ್ನ ಉಪವಾಸ ಸತ್ಯಾಗ್ರಹ ಮುಂದುವರೆಸುತ್ತೇನೆ ಎಂದು ಸ್ಪಷ್ಟ ಪಡಿಸಿದರು.

ಆ ಕಾರಣದಿಂದ ರಾತ್ರಿಯು ಉಪವಾಸ ಸತ್ಯಾಗ್ರಹವನ್ನು ಮುಂದುವರೆಸಿರುವ ಯುವ ಕೃಷಿಕ ದಿನೇಶ್ ನ್ಯಾಯಕ್ಕಾಗಿ ಅಂಗಲಾಚುತಿದ್ದಾರೆ.

ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳಿಗೆ ಯುವ ಕೃಷಿಕನ ಸಮಸ್ಯೆಗಳನ್ನು ಆಲಿಸಿ ಸೂಕ್ತ ನ್ಯಾಯ ಒದಗಿಸುತ್ತಾರೋ ಕಾದು ನೋಡ ಬೇಕಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

12 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

12 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

14 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

14 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

17 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

17 hours ago