ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿರುವ ತೀವ್ರ ನಿಗಾ ಘಟಕ ಉದ್ಘಾಟಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ: ತಾಲೂಕಿನ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದ ಕೊರತೆಯಿತ್ತು. ಅದರಲ್ಲಿ ಮುಖ್ಯವಾಗಿ ಐಸಿಯು ಸಮಸ್ಯೆ ಮತ್ತು ಆಸ್ಪತ್ರೆಯ ಐಸಿಯು ತೀವ್ರ ನಿಗಾ ಘಟಕ ಮತ್ತು ಶಸ್ತ್ರಚಿಕಿತ್ಸಾ ಕೊಠಡಿಯು ಮಳೆಯಿಂದ ಸೋರುತ್ತಿದ್ದು ಈ  ಕೊಠಡಿ ಸೋರದಂತೆ ಮೇಲ್ಛಾವಣಿ ಶೀಟ್‌ಗಳನ್ನು ಅಳವಡಿಸಿಲಾಗಿದ್ದು ಅದನ್ನು ಮಂಗಳವಾರ ಗೃಹಸಚಿವ ಆರಗ ಜ್ಞಾನೇಂದ್ರ ಉದ್ಘಾಟನೆ ಮಾಡಿದರು.

ನಂತರ ಮಾತನಾಡಿದ ಸಚಿವರು ನನಗೆ ಇದೊಂದು ಸಂತೋಷದ ವಿಚಾರ. ಸಾರ್ವಜನಿಕ ಆಸ್ಪತ್ರೆಗೆ ಹಣ ಬಿಡುಗಡೆ ಮಾಡಿಸುವ ಮತ್ತು ಸಾರ್ವಜನಿಕರ ಸಮಸ್ಯೆ ಪರಿಹರಿಸುವ ಪ್ರಯತ್ನ ನೆಡೆಯುತ್ತಿದೆ. ತೀರ್ಥಹಳ್ಳಿಯಲ್ಲಿ ಜನರಿಗೆ ಸಮಸ್ಯೆ ಆಗುತ್ತಿರುವುದು ತಾಲೂಕು ಕಛೇರಿ ಮತ್ತು ಆಸ್ಪತ್ರೆಯಲ್ಲಿ ಎಂಬುದಿದೆ.  ಹಾಗಾಗಿ ಆಸ್ಪತ್ರೆಗೆ ಮತ್ತು ತಾಲೂಕು ಕಛೇರಿಗೆ ಏನೆಲ್ಲಾ ಬೇಕೋ ಅದನ್ನೆಲ್ಲ ಮಾಡಿಸುವ ಪ್ರಯತ್ನ ಮಾಡುತ್ತಿದ್ದೇನೆ. ಮೊದಲಿಗೆ ಆಸ್ಪತ್ರೆ ಸ್ವಚ್ಛವಾಗಿರಬೇಕು ಹಾಗಾಗಿ ಈ ಒಂದು ಸುಸಜ್ಜಿತವಾದ ಕಟ್ಟಡವನ್ನು ಕಟ್ಟಿದ್ದಾರೆ. ಅಷ್ಟೇ ಅಲ್ಲದೆ 1.50 ಕೋಟಿ ವೆಚ್ಚದಲ್ಲಿ 25 ಬೆಡ್ ನ ಐಸಿಯು ತೀವ್ರ ನಿಗಾ ಘಟಕ ಮಾಡಿ ಅದನ್ನು ಕೂಡ ಉದ್ಘಾಟನೆ ಮಾಡಲಾಗಿದೆ. ಬಡ ಜನರಿಗೆ ಅನುಕೂಲವಾಗುವಂತೆ ಏನೆಲ್ಲಾ ಆಗಬೇಕೋ ಅದನ್ನೆಲ್ಲ ನಾನು ಈ ಸ್ಥಾನದಲ್ಲಿ ಇದ್ದಾಗ ಮಾಡಿದ್ದೇನೆ. ಆಸ್ಪತ್ರೆಗೆ ಇನ್ನಷ್ಟು ಅನುಕೂಲ ಬೇಕಾಗಿದೆ ಇನ್ನು ಏನೆಲ್ಲಾ ವ್ಯವಸ್ಥೆ ಬೇಕೋ ಅದನ್ನು ಮಾಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಕೋವಿಡ್ ಸಂದರ್ಭದಲ್ಲಿ ಹಗಲಿರುಳು ನಿರಂತರ ಶ್ರಮ ಹಾಕಿದ ವೈದ್ಯಧಿಕಾರಿಗಳ ತಂಡ, ನರ್ಸ್ ಗಳು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರಿಗೆ  ಅಭಿನಂದನೆಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಪ ಪಂ ಅಧ್ಯಕ್ಷೆ ಶಬನಂ, ಜಯಪ್ರಕಾಶ್ ಶೆಟ್ಟಿ, ಡಾ ನಾರಾಯಣ ಸ್ವಾಮಿ, ಡಾ ಗಣೇಶ ಭಟ್, ಬಾಳೆಬೈಲು ರಾಘವೇಂದ್ರ, ನಾಗರಾಜ್ ಶೆಟ್ಟಿ, ಡಾ ನಟರಾಜ್, ಬಾಳೆಬೈಲು ಸಂತೋಷ್ ಶೆಟ್ಟಿ, ಸಂತೋಷ್ ದೇವಾಡಿಗ, ಪ ಪಂ ಸದಸ್ಯರೆಲ್ಲರೂ ಭಾಗಿಯಾಗಿದ್ದರು.

ವರದಿ : ಅಕ್ಷಯ್ ಕುಮಾರ್
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

3 hours ago

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…

3 hours ago

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…

3 hours ago

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…

3 hours ago

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…

12 hours ago

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…

12 hours ago