ತೀರ್ಥಹಳ್ಳಿಯಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಆರಗ ಜ್ಞಾನೇಂದ್ರ ಚಾಲನೆ : ಸಾವಿರಾರು ವಿದ್ಯಾರ್ಥಿಗಳು ಬಾಗಿ

ತೀರ್ಥಹಳ್ಳಿ : 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಬೇಕೆಂಬ ಕಾರಣಕ್ಕಾಗಿ ಪಟ್ಟಣದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಹರ್ ಘರ್ ತಿರಂಗಾಕ್ಕೆ ಚಾಲನೆ ನೀಡಿದರು.
ಪಟ್ಟಣದ ಕುಶಾವತಿ ಪಾರ್ಕ್ ನಿಂದ ತೀರ್ಥಹಳ್ಳಿಯ ಆಗುಂಬೆ ಬಸ್ ನಿಲ್ದಾಣದವರೆಗೆ ಸಾವಿರಾರು ವಿದ್ಯಾರ್ಥಿಗಳೊಡನೆ ಸರಿ ಸುಮಾರು 2 ಕಿಮೀ ಗಳಷ್ಟು ದೂರ ಮಳೆಯಲ್ಲಿಯೇ ಹೆಜ್ಜೆ ಹಾಕಿದರು.
ಪಟ್ಟಣದ ಆಗುಂಬೆ ಬಸ್ ನಿಲ್ದಾಣದ ಬಳಿ ಹರ್ ಘರ್ ತಿರಂಗಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಎಲ್ಲಾ ಮನೆಗಳಲ್ಲೂ ತ್ರಿವರ್ಣ ಧ್ವಜ ಹಾರಬೇಕಾಗಿದೆ ಹಾಗಾಗಿ ಅದನ್ನು ಪ್ರತಿ ಮನೆ ಮನೆಗೆ ಧ್ವಜವನ್ನು ವಿತರಿಸುವ ಕಾರ್ಯಕ್ಕೆ ಇಂದು ಚಾಲನೆ ನೀಡಿದ್ದೇನೆ. ಈ ಒಂದು ಧ್ವಜ ವಿತರಣೆ ಕಾರ್ಯದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳು, ಧಾರ್ಮಿಕ ಮುಖಂಡರು, ಹಾಗೂ ಸಾರ್ವಜನಿಕರೆಲ್ಲರೂ ಕೂಡ ನಮ್ಮ ಜೊತೆ ಭಾಗವಹಿಸಿದ್ದಾರೆ. ಇದೊಂದು ನಮಗೆ ಹೆಮ್ಮೆಯ ಕಾರ್ಯ. ತೀರ್ಥಹಳ್ಳಿ ಕೂಡ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿತ್ತು. ಹಲವು ಹಿರಿಯರು ಇದ್ದರೂ ಆದರೆ ಈಗ ನಮ್ಮೊಂದಿಗೆ ಇಲ್ಲ. ತೋಟದ ಮನೆ ವೆಂಕಣ್ಣ ರಾಯರ ಬದಲು ಅವರ ಮಗನಿಗೆ ಧ್ವಜವನ್ನು ಕೊಡುವುದರ ಮೂಲಕ ಚಾಲನೆ ಕೊಟ್ಟಿದ್ದೇವೆ. ಇನ್ನು ತೀರ್ಥಹಳ್ಳಿಗೆ ಗಾಂಧೀಜಿ ಕೂಡ ಬಂದಿದ್ದರು. ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಫಂಡ್ ಕಲೆಕ್ಟ್ ಮಾಡಿ ಕೊಟ್ಟ ದಾಖಲೆ ನಮ್ಮ ತೀರ್ಥಹಳ್ಳಿಯದು.ಹೀಗಾಗಿ ಅತ್ಯಂತ ಅದ್ದೂರಿಯಾಗಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಬೇಕು ಎಂದು ತಿಳಿಸಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದಾಗ ನಾವು ಹುಟ್ಟೇ ಇರಲಿಲ್ಲ ಹಾಗಾಗಿ ಈಗ ನಾವೆಲ್ಲರೂ ಪ್ರೌಢರಾಗಿದ್ದೇವೆ. ಸ್ವಾತಂತ್ರ್ಯದ ಬಗ್ಗೆ ಓದಿ ಕೇಳಿ ತಿಳಿದುಕೊಂಡಿದ್ದೇವೆ. ಈ ಕಾರಣಕ್ಕೆ ನಾವೆಲ್ಲರೂ ಈ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಿ ಅವರನ್ನೆಲ್ಲ ನೆನಪಿಸಿಕೊಂಡು ಅವರ ಕನಸಿನ ಭಾರತವನ್ನು ಕಟ್ಟಬೇಕು ಎಂದು ತಿಳಿಸಿದರು.
ಹರ್ ಘರ್ ತಿರಂಗಾ
ಆಗಸ್ಟ್ 13ರಿಂದ 15 ರವರೆಗೆ ಪ್ರತಿ ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸಲು ಕರೆ ಕೊಡಲಾಗಿದೆ. ನಮ್ಮ ತಾಲೂಕಿನಲ್ಲಿ ಸುಮಾರು
80 % ಮನೆಗಳ ಮೇಲೆ ತಿರಂಗಾ ಧ್ವಜ ಹಾರಡಲಿದೆ ಎಂದರು. ನಮ್ಮ ಸಂಘಟನೆ ಇಂದ ಇಪ್ಪತ್ತು ಸಾವಿರ ಧ್ವಜವನ್ನು ವಿತರಣೆ ಮಾಡುತ್ತಿದ್ದೇವೆ. ಪಂಚಾಯತ್ ಹಾಗೂ ಬೂತ್ ಕೇಂದ್ರಗಳಿಗೆ ಮುಟ್ಟಿಸುವ ಕೆಲಸವಾಗುತ್ತಿದೆ. ಒಟ್ಟಿನಲ್ಲಿ ಈ ಬಾರಿಯ ಸ್ವಾತಂತ್ರತ್ಯೋತ್ಸವ ರಾಷ್ಟ್ರ ಭಕ್ತಿಯ ನಿರ್ಮಾಣ ಮಾಡುವುದರಲ್ಲಿ ಸಫಲವಾಗುತ್ತದೆ ಎಂದರು.
ವಿದ್ಯಾರ್ಥಿಗಳಿಗೆ ಗೃಹಸಚಿವರ ಕಿವಿಮಾತು;
ಹರ್ ಘರ್ ತಿರಂಗಾಕ್ಕೆ ಚಾಲನೆ ನೀಡಿದ ನಂತರ ವಿದ್ಯಾರ್ಥಿಗಳಿಗೆ ಧ್ವಜವನ್ನು ತಮ್ಮ ತಮ್ಮ ಮನೆಗಳಲ್ಲಿ ನೀವೆಲ್ಲರೂ ಮುಂದೆ ನಿಂತು ಈ ಬಾರಿಯ 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಬೇಕು. ಯಾವುದೇ ಕಾರಣಕ್ಕೂ ಧ್ವಜಕ್ಕೆ ಅಪಮಾನವಾಗುವ ರೀತಿ ಮಾಡಬಾರದು. ಆಗಸ್ಟ್ 15 ರ ಸಂಜೆ ಧ್ವಜವನ್ನು ಇಳಿಸಿ ಮಡಿಸಿ ಇಡಬೇಕು ಎಂದು ಕಿವಿಮಾತು ಹೇಳಿದರು.
ವರದಿ : ಅಕ್ಷಯ್ ಕುಮಾರ್
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

11 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

11 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

11 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

16 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

18 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago