ತೀರ್ಥಹಳ್ಳಿ ಕ್ಷೇತ್ರದ ಘನತೆ ಕಾಪಾಡಲು ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು – ಕಿಮ್ಮನೆ ರತ್ನಾಕರ್

ತೀರ್ಥಹಳ್ಳಿ : ರಾಜ್ಯಾದ್ಯಂತ ಗೃಹಸಚಿವರ ಮೇಲೆ ಬಹುದೊಡ್ಡ ಸೈಟ್ ಹಗರಣದ ಆಪಾದನೆ ಇದೆ. ಆರಗ ಜ್ಞಾನೇಂದ್ರರವರು ಬೆಂಗಳೂರಿನಲ್ಲಿ ಅಕ್ರಮವಾಗಿ 50 ಕೋಟಿ ಸೈಟ್ ತಾವು ತೆಗೆದುಕೊಂಡು ಅಧಿಕಾರಿಗಳನ್ನು ಮನೆಗೆ ಹೋಗುವ ಹಾಗೆ ಮಾಡಿದ್ದಾರೆ. ಹೈಕೋರ್ಟ್ ಕೂಡ ಈ ವಿಚಾರವಾಗಿ ಇವರ ಕಪಾಳಕ್ಕೆ ಹೊಡೆದಿದ್ದಾರೆ. ಹಾಗಾಗಿ ತೀರ್ಥಹಳ್ಳಿ ಕ್ಷೇತ್ರದ ಘನತೆ ಕಾಪಾಡಲು ರಾಜೀನಾಮೆ ಕೊಡಬೇಕು ಎಂದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ಆಗಿನ ಕಾಲದಲ್ಲಿ ಕಡಿದಾಳ್ ಮಂಜಪ್ಪನವರಿಗೆ ಸೈಟ್ ಕೊಡಲು ಹೋದಾಗಲೇ ಅದನ್ನು ತಿರಸ್ಕಾರ ಮಾಡಿದ್ರು ಆದರೆ ಜ್ಞಾನೇಂದ್ರ ಆ ರೀತಿಯಲ್ಲಿ ಇಲ್ಲ. ಜ್ಞಾನೇಂದ್ರ ಅವರು ಯಾವಾಗಲು ಹೇಳ್ತ ಇದ್ರೂ ಕಿಮ್ಮನೆ ರತ್ನಾಕರ್ ಬಂಗಾರದಲ್ಲಿ ಹಾಲು ಕುಡಿಯುವವರು ನಾನು ಹಾಳೆ ತಟ್ಟೆ ಅಂತ ಚುನಾವಣೆಯಲ್ಲಿ ಗೆಲುವು ಆಗುವವರೆಗೂ ಮಾತಾಡ್ತಾ ಇದ್ರೂ. ಈಗ ಅದು ಉಲ್ಟಾ ಆಗಿದೆ ಎಂದರು

ನನಗೆ ತಿಳಿದ ಹಾಗೆ ಹಿಂದೆ ಒಬ್ಬರು ಸೀರೆ ಹಂಚಿದ್ದರು, ಆದರೆ ಈಗ ಗೃಹಸಚಿವರು 1000 ರೂ ಬೆಲೆ ಬಾಳುವ ಬೆಳ್ಳಿ ನಾಣ್ಯವನ್ನು 10000 ಕ್ಕೂ ಹೆಚ್ಚು ನಾಣ್ಯ ಮಾಡಿಸಿ 4000 ಮಹಿಳೆಯರಿಗೆ ಮಾತ್ರ ಹಂಚಿದ್ದಾರೆ. ಉಳಿದಿದ್ದು ಏನಾಯಿತು ಗೊತ್ತಿಲ್ಲ. ನಾನು ಕೂಡ ಮಂತ್ರಿಯಾಗಿದ್ದೆ ಆದ್ರೆ ಈಗ ವಾಹನ, ಬ್ಯಾಂಕ್ ಹೀಗೆ ಎಲ್ಲವು ಸಾಲ ಇದೆ. ಆದರೆ ಇವರು ಮಂತ್ರಿಯಾಗಿ ಬೆಳ್ಳಿ ನಾಣ್ಯ ಕೊಡುವ ಲೇವಲ್ ಗೆ ಹೋದರ ಎಂಬುದು ಪ್ರೆಶ್ನೆಯಾಗಿದೆ.
ತೀರ್ಥಹಳ್ಳಿ ಸುತ್ತಮುತ್ತ ಎಷ್ಟೋ ರೈತರು ಮನೆ, ನಿವೇಶನ ಇಲ್ಲದೆ ಬಾಡಿಗೆ ಮನೆಯಲ್ಲಿ ಇದ್ದಾರೆ. ಆದರೆ ಇವರು ಬೆಂಗಳೂರಿನಲ್ಲಿ 50 ಕೋಟಿ ಸೈಟ್ ಮಾಡಿದ್ದಾರೆ. ತೀರ್ಥಹಳ್ಳಿಯಲ್ಲಿ ಬೆಳ್ಳಿ ನಾಣ್ಯ ಕೊಡುತ್ತಾರೆ ಇವರಿಗೆ ಹಣ ಎಲ್ಲಿಂದ ಬಂತು ಎನ್ನುವುದು ಗೊತ್ತಾಗಬೇಕಿದೆ. ಹೀಗೆ ಆದರೆ ಚುನಾವಣೆಯಲ್ಲಿ ಚಿನ್ನದ ನಾಣ್ಯ ಕೊಡುತ್ತಾರೆ ಅನಿಸುತ್ತದೆ ಎಂದರು.

ಇನ್ನು ತೀರ್ಥಹಳ್ಳಿ ಪೊಲೀಸರು ದಬ್ಬಾಳಿಕೆ ಮಾಡುತ್ತಿದ್ದಾರೆ ಅದರಲ್ಲೂ ಕಾಂಗ್ರೆಸ್ ನವರು ಮಾತನಾಡಿದ್ರೆ ಸಾಕು ಎಫ್ ಐ ಆರ್ ಹಾಕ್ತಾರೆ.
ಸಂದೇಶ್ ಜವಳಿ, ಕುಕ್ಕೆ ಪ್ರಶಾಂತ್ ಎಲ್ಲಾ ಏನೇ ಮಾತನಾಡಿದರು ಎಫ್ ಐ ಆರ್ ಇಲ್ಲವೇ ಇಲ್ಲ.
ತೀರ್ಥಹಳ್ಳಿಯ ಎಪಿಎಂಸಿ ಬಳಿ ಗಲಾಟೆ ಮಾಡಿದರು ಎಂಬ ಕಾರಣಕ್ಕೆ ಕಾಲೇಜು ವಿದ್ಯಾರ್ಥಿಗಳ ಮೇಲೆ ಎಫ್ ಐ ಆರ್ ಹಾಕಿದ್ರು. ಆ ವಿದ್ಯಾರ್ಥಿಗಳ ಜೀವನವನ್ನೇ ಹಾಳು ಮಾಡಿದ್ರು. ಮಕ್ಕಳ ಭವಿಷ್ಯ ವನ್ನು ಜ್ಞಾನೇಂದ್ರ ಹಾಳು ಮಾಡುತ್ತಿದ್ದಾರೆ. ಅದರಲ್ಲೂ ಜಾತಿ ನೋಡಿ ಈ ಕೆಲಸ ಮಾಡುತ್ತಿದ್ದಾರೆ. ಇವರು ಖಂಡಿತವಾಗಿ ಸ್ವರ್ಗಕ್ಕೆ ಹೋಗಲ್ಲ ಎಂದರು.

ಪಿ ಎಸ್ ಐ ಹಗರಣದಲ್ಲಿ ಈಗಾಗಲೇ 30 ಜನ ಜೈಲಿಗೆ ಹೋಗಿದ್ದಾರೆ ಅವರೆಲ್ಲರಿಗೂ ಹೆಡ್ ಜ್ಞಾನೇಂದ್ರ.  ತೀರ್ಥಹಳ್ಳಿಗೆ ಇಂತಹ ಜನಪ್ರತಿನಿಧಿ ಅಗತ್ಯ ಇದೆಯಾ ? ತೀರ್ಥಹಳ್ಳಿ ಕ್ಷೇತ್ರದ ಘನತೆ ಕಾಪಾಡಲು ಆರಗ ಜ್ಞಾನೇಂದ್ರ ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಕಿಮ್ಮನೆ ರತ್ನಾಕರ್ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕೆಸ್ತೂರ್ ಮಂಜುನಾಥ್, ವಿಶ್ವನಾಥ್ ಶೆಟ್ಟಿ, ಪ. ಪಂ ಅಧ್ಯಕ್ಷೆ ಶಬನಮ್, ಸುಶೀಲ ಶೆಟ್ಟಿ, ಗೀತಾ ರಮೇಶ್, ಮಂಜುಳಾ ನಾಗೇಂದ್ರ, ಆದರ್ಶ ಹುಂಚದಕಟ್ಟೆ, ಪೂರ್ಣೇಶ್ ಕೆಳಕೆರೆ ಸೇರಿ ಹಲವರು ಉಪಸ್ಥಿತರಿದ್ದರು.

ವರದಿ : ಅಕ್ಷಯ್ ಕುಮಾರ್
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

4 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

8 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

11 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

23 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

23 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

1 day ago