Headlines

ಬೆಳ್ಳೂರು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ರೈತ ಸಾವು :

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತಿದ್ದ ರೈತ ವಿದ್ಯುತ್ ಅವಘಡದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ.


ಇಂದು ಬೆಳಿಗ್ಗೆ ಕೃಷಿ ಚಟುವಟಿಕೆ ನಿಮಿತ್ತ ತೋಟಕ್ಕೆ ಹೋದಾಗ ಈ ಅವಘಡ ಸಂಭವಿಸಿದ್ದು,ಬೆಳ್ಳೂರು ಗ್ರಾಮದ ಹಿರಿಯಣ್ಣ (58) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.


ಮೃತ ಹಿರಿಯಣ್ಣ ಬೆಳ್ಳೂರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಗಿರಿಜಮ್ಮ ರವರ ಪತಿಯಾಗಿದ್ದಾರೆ.


ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು ದೂರು  ದಾಖಲಾಗಿದೆ.

ಸಂತಾಪ : 

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಹಿರಿಯಣ್ಣ ರವರ ಕುಟುಂಬಕ್ಕೆ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಸಂತಾಪ ಸೂಚಿಸಿದ್ದಾರೆ.


Leave a Reply

Your email address will not be published. Required fields are marked *