ರಿಪ್ಪನ್‌ಪೇಟೆಯಲ್ಲಿ ಪ್ರಾಥಮಿಕ ಶಾಲೆಯ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ : ಪಲಿತಾಂಶದ ವಿವರ ಇಲ್ಲಿದೆ ನೋಡಿ

ರಿಪ್ಪನ್‌ಪೇಟೆ;-ಮಕ್ಕಳ ದೈಹಿಕ ಸಾಮಾರ್ಥ್ಯವನ್ನು ಹೆ ಚ್ಚಿಸಲು ಕ್ರೀಡೆ ಅಗತ್ಯವಾಗಿದೆ.ವಿದ್ಯಾರ್ಥಿ ಸದಾ ಉಲ್ಲಾಸದಿಂದಿರಲು ಕ್ರೀಡಾ ಚಟುವಟಿಕೆ ಸಹಕಾರಿಯಾಗಿದೆ.ಕ್ರೀಡೆ ಸೋಲು ಗೆಲುವು ಮುಖ್ಯವಾಗದೇ ಮಕ್ಕಳು ಭಾಗವಹಿಸುವುದು ಮುಖ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಅರ್.ಕೃಷ್ಣಮೂರ್ತಿ ಹೇಳಿದರು.

ಸರ್ಕಾರಿ ಪದವಿಪೂರ್ವ ಕಾಲೇಜ್ ಚಿನ್ನೆಗೌಡ ಕ್ರೀಡಾಂಗಣದಲ್ಲಿ ರಿಪ್ಪನ್‌ಪೇಟೆ-ಬಾಳೂರು ಗ್ರಾಮ ಪಂಚಾಯ್ತಿ ಸಮೂಹ ಸಂಪನ್ಮೂಲ ಕೇಂದ್ರ ಎಸ್.ಡಿ.ಎಂ.ಸಿ.ಹಾಗೂ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಶಾಲೆ ಸಂಯುಕ್ತ ಅಶ್ರಯದಲ್ಲಿ “ಕ್ಲಸ್ಟರ್ ಮಟ್ಟದ ೧೪ ವರ್ಷದೊಳಗಿನ ಮಕ್ಕಳ ೨೦೨೨-೨೩ ನೇ ಸಾಲಿನ ಪ್ರಾಥಮಿಕ ಪಾಠಶಾಲೆಯ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಸರ್ಕಾರದಿಂದ ಕ್ರೀಡಾಕೂಟಗಳಿಗೆ ಕಡಿಮೆ ಹಣ ನೀಡುತ್ತದೆ ಅದು ಸಾಲದು ಗ್ರಾಮದ ದಾನಿಗಳ ಸಹಕಾರದೊಂದಿಗೆ ಕ್ರೀಡಾಕೂಟವನ್ನು ಕಡಿಮೆ ಖರ್ಚಿನಲ್ಲಿ ಅಚ್ಚುಕಟ್ಟಾಗಿ ಯಶಸ್ವಿಯಾಗಿ ನಿರ್ವಹಿಸುವಂತೆ ಹೇಳಿದರು.

ಕ್ರೀಡಾಕೂಟ ಸಮಾರಂಭವನ್ನು ಗುಡ್‌ಶಫರ್ಡ್ ಚರ್ಚ್ ಪಾದರ್ ರೆ.ಬಿನೋಯ್ ಉದ್ಘಾಟಿಸಿದರು.

ಕ್ರೀಡಾ ದ್ವಜಾರೋಹಣವನ್ನು ಗ್ರಾಮಾಧ್ಯಕ್ಷೆ ಮಂಜುಳಕೇತಾರ್ಜಿರಾವ್, ಕ್ರೀಡಾಜ್ಯೋತಿಯನ್ನು ಉಪಾಧ್ಯಕ್ಷೆ ಮಹಾಲಕ್ಷಿ ಬಾಳೂರು ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ದಿವಾಕರ್ ಪ್ರತಿಜ್ಞಾ ವಿಧಿ ಬೋಧಿಸಿದರು.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನಾಗರಾಜ್,ದೈಹಿಕ ಶಿಕ್ಷಣಾಧಿಕಾರಿ ಬಾಲಚಂದ್ರ,ಸಮನ್ವಯ ಅಧಿಕಾರಿ ರಂಗನಾಥ,ಗ್ರಾಮ ಪಂಚಾಯ್ತಿ ಸದಸ್ಯರುಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.


ಈ ಕ್ರೀಡಾಕೂಟದಲ್ಲಿ ಗೆದ್ದ ತಂಡಗಳ ವಿವರ ಇಂತಿದೆ :



ಬಾಲಕರ ವಾಲಿಬಾಲ್:

1> ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ರಿಪ್ಪನ್‌ಪೇಟೆ
2> ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆ ರಿಪ್ಪನ್‌ಪೇಟೆ 

                                                       

ಬಾಲಕರ ಕಬ್ಬಡಿ :

1> ರಾಮಕೃಷ್ಣ ಹಿರಿಯ ಪ್ರಾಥಮಿಕ ಶಾಲೆ ರಿಪ್ಪನ್‌ಪೇಟೆ
2> ಗುಡ್ ಶೆಪರ್ಡ್ ಹಿರಿಯ ಪ್ರಾಥಮಿಕ ಶಾಲೆ

ಬಾಲಕರ ಖೊಖೊ :

1>ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ರಿಪ್ಪನ್‌ಪೇಟೆ
2>ಅಂಬೇಡ್ಕರ್ ಹಿರಿಯ ಪ್ರಾಥಮಿಕ ವಸತಿ ಶಾಲೆ ಕೆರೆಹಳ್ಳಿ

ಬಾಲಕರ ಥ್ರೋ ಬಾಲ್ :

1>ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಳೂರು
2>ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆ ರಿಪ್ಪನ್‌ಪೇಟೆ

—————–

ಬಾಲಕಿಯರ ವಾಲಿಬಾಲ್ :

1>ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆ ರಿಪ್ಪನ್‌ಪೇಟೆ           
2>ಗುಡ್ ಶೆಪರ್ಡ್ ಹಿರಿಯ ಪ್ರಾಥಮಿಕ ಶಾಲೆ

ಬಾಲಕಿಯರ ಕಬ್ಬಡಿ :

1>ರಾಮಕೃಷ್ಣ ಹಿರಿಯ ಪ್ರಾಥಮಿಕ ಶಾಲೆ ರಿಪ್ಪನ್‌ಪೇಟೆ
2>ಗುಡ್ ಶೆಪರ್ಡ್ ಹಿರಿಯ ಪ್ರಾಥಮಿಕ ಶಾಲೆ

ಬಾಲಕಿಯರ ಖೊಖೊ :

1>ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ರಿಪ್ಪನ್‌ಪೇಟೆ
2>ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆ ರಿಪ್ಪನ್‌ಪೇಟೆ

ಬಾಲಕಿಯರ ಥ್ರೋ ಬಾಲ್ : ಪಲಿತಾಂಶ ತಡೆಹಿಡಿಯಲಾಗಿದೆ.

ಅಥ್ಲೆಟಿಕ್ಸ್ ಪಲಿತಾಂಶಗಳ ವಿವರ ಇಲ್ಲಿ ನೋಡಿ :


ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

3 hours ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

3 hours ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

3 hours ago

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

13 hours ago

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

1 day ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

1 day ago