ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಹರ್-ಘರ್ ತಿರಂಗಾ : ವಿದ್ಯಾರ್ಥಿಗಳ ಕೈಯಲ್ಲಿ ರಾರಾಜಿಸಿದ ರಾಷ್ಟ್ರ ಧ್ವಜ

ರಿಪ್ಪನ್‌ಪೇಟೆ: ರಾಷ್ಟದ ಸ್ವಾತಂತ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಆಯೋಜಿಸಿರುವ ಹರ್‌ಘರ್ ತಿರಂಗ್ ಅಭಿಯಾನವನ್ನು ಭಾರತೀಯರಾದ ನಾವುಗಳು ಯಶಸ್ವಿಗೊಳಿಸಬೇಕಿರುವುದು ನಮ್ಮ ಆದ್ಯಕರ್ತವ್ಯವಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.


ಪಟ್ಟಣದ ರಾಮಕೃಷ್ಣ ಶಿಕ್ಷಣ ಸಂಸ್ಥೆ,ಪದವಿ ಕಾಲೇಜು,ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಡ ಶಾಲೆಯ ಮಕ್ಕಳಿಗೆ ಹರ್‌ಗರ್ ತಿರಂಗ ವಿತರಿಸಿ ಮಾತನಾಡಿ ಅಮೃತ ಮಹೋತ್ಸವ ಸುಸಂದರ್ಭದಲ್ಲಿ ಭಾರತ ದೇಶದ ಘನತೆಯನ್ನು ವಿಶ್ವಮಟ್ಟದಲ್ಲಿ ಪಸರಿಸುವಂತಾಗಲು ಅಭಿಯಾನ ಸರ್ವವ್ಯಾಪಿಯಾಗಬೇಕಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭಿಲಾಷೆಯಂತೆ ದೇಶದ ಪ್ರತಿಯೊಂದು ಮನೆಯ ಮೇಲೂ ರಾಷ್ಟçಧ್ವಜ ಹಾರಾಡಬೇಕು. ರಾಷ್ಟçಧ್ವಜ ಆರೋಹಣ ಮತ್ತು ಅವರೋಹಣ ಸಂದರ್ಭಗಳಲ್ಲಿ ಹೆಚ್ಚಿನ ಜಾಗ್ರತೆ ವಹಿಸಿ ಕಾರ್ಯಕ್ರಮಕ್ಕೆ ಕಿಂಚಿತ್ತು ಚ್ಯುತಿಬಾರದಂತೆ ನಡೆದುಕೊಳ್ಳುವುದು ಹಾಗೂ ರಾಷ್ಟ ಧ್ವಜವನ್ನು ಭಕ್ತಿಗೌರವಗಳಿಂದ ಕಾಣಬೇಕು. ಅಭಿಯಾನ ಯಶಸ್ವಿಯಾಗಬೇಕಾದರೆ ಸರ್ವರ ಸಹಭಾಗಿತ್ವ ಅಗತ್ಯವಿದ್ದು ವಿದ್ಯಾರ್ಥಿಗಳು, ಸಾರ್ವಜನಿಕರು ಸ್ವ-ಆಸಕ್ತಿಯಿಂದ ಪಾಲ್ಗೊಂಡು ದೇಶದ ಹಿರಿಮೆಯ ಹೆಚ್ಚಿಸುವಂತಾಗಬೇಕು ಎಂದರು.


ಕ್ಷೇತ್ರದಾದ್ಯಂತ ಒಟ್ಟು ೭೭ ಸಾವಿರ ಮನೆಗಳಲ್ಲಿ ತ್ರಿವರ್ಣ ರಾಷ್ಟ ಧ್ವಜವನ್ನು ಹಾರಿಸುವ ಉದ್ದೇಶ ಹೊಂದಿದ್ದು ಅದಕ್ಕೆ ಪೂರ್ವ ತಯಾರಿಯಾಗಿ ಬೇಕಾದ ಪರಿಕರಗಳನ್ನು ಸಿದ್ಧಗೊಳಿಸಿ ಹೊಸನಗರ, ಸಾಗರ, ಆನಂದಪುರ, ರಿಪ್ಪನ್‌ಪೇಟೆ ಇನ್ನಿತರೆಡೆ ವಿವಿಧ ಇಲಾಖಾಧಿಕಾರಿಗಳು, ವಿದ್ಯಾರ್ಥಿಗಳು, ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಧ್ವಜ ವಿತರಣೆ ಕಾರ್ಯ ಭರದಿಂದ ನಡೆಯುತ್ತಿದೆ ಎಂದರು.



ಈ ಸಂದರ್ಭದಲ್ಲಿ ತಾಲ್ಲೂಕು ತಹಶೀಲ್ದಾರ್ ರಾಜೀವ್, ಇಓ ಪ್ರವೀಣ್, ಪ್ರಾಂಶುಪಾಲರಾದ ಚಂದ್ರಶೇಖರ, ಮಂಜುನಾಥ, ಉಪಪ್ರಾಂಶುಪಾಲ ಕೆಸಿನಮನೆ ರತ್ನಾಕರ, ಪಿಡಿಓ ಚಂದ್ರಶೇಖರ, ಪಿಎಸ್‌ಐ ಶಿವಾನಂದ ಕೋಳಿ ಗ್ರಾ.ಪಂ.ಅಧ್ಯಕ್ಷೆ ಮಂಜುಳ, ಉಪಾಧ್ಯಕ್ಷೆ ಮಹಾಲಕ್ಷಿಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಟಿ.ಡಿ. ಮೇಘರಾಜ್,ರಾಮಕೃಷ್ಣ ವಿದ್ಯಾ ಸಂಸ್ಥೆಯ ದೇವರಾಜ್‌ ಮುಖಂಡರಾದ್ ವೀರೇಶ ಆಲುವಳ್ಳಿ ಆರ್.ಟಿ. ಗೋಪಾಲ, ಎಂ.ಬಿ. ಮಂಜುನಾಥ, ಸುಧೀಂಧ್ರ ಪೂಜಾರಿ, ಮೆಣಸೆ ಆನಂದ, ಬಿಇಓ ಕೃಷ್ಣಮೂರ್ತಿ, ಇನ್ನಿತರರಿದ್ದರು.


ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

20 hours ago

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…

21 hours ago

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

22 hours ago

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

2 days ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

2 days ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

2 days ago