ರಿಪ್ಪನ್‌ಪೇಟೆ : ಮತಾಂತರಕ್ಕೆ ಯತ್ನ ಆರೋಪ – ಹಿಂದೂಪರ ಸಂಘಟನೆಗಳಿಂದ ತರಾಟೆ

ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯಲ್ಲಿನ ಖಾಸಗಿ ವಸತಿ ಗೃಹದ ಸಭಾ ಭವನದಲ್ಲಿ ಪ್ರೊಟೆಸ್ಟೆಂಟ್ ಕ್ರಿಶ್ಚಿಯನ್ ಪಂಗಡದವರು ಹಿಂದೂ ಧರ್ಮದ ಕೆಲವರನ್ನು ಮತಾಂತರ ಮಾಡುತ್ತಿದ್ದಾರೆ ಎಂಬ ಮಾಹಿತಿಯ ಮೇರೆಗೆ ರಿಪ್ಪನ್ ಪೇಟೆ ಹಿಂದೂ ಪರಸಂಘಟನೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ವಸತಿ ಗೃಹದ ಸಭಾಭವನಕ್ಕೆ ಧಾವಿಸಿ ಮತಾಂತರಕ್ಕೆ ಪ್ರಯತ್ನಿಸುತ್ತಿದ್ದ ಸಂಘಟನೆಯವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ಭಾನುವಾರ ನಡೆದಿದೆ.



ನಡೆದಿದ್ದೇನು…?

ಪ್ರಾರ್ಥನಾ ಕೇಂದ್ರ ಹೊರತುಪಡಿಸಿ ಖಾಸಗಿ ಸ್ಥಳಗಳಲ್ಲಿ ಪ್ರಾರ್ಥನೆಗೆ ಅವಕಾಶ ನೀಡಬೇಕೆಂದು ಪ್ರೊಟೆಸ್ಟೆಂಟ್ ಕ್ರಿಶ್ಚಿಯನ್ ಪಂಗಡದವರು ರಿಪ್ಪನ್‌ಪೇಟೆ ಗ್ರಾಮಪಂಚಾಯತ್ ಗೆ ಅರ್ಜಿ ಸಲ್ಲಿಸಿದ್ದರು ಅದನ್ನು ಗ್ರಾಮಾಡಳಿತ ತಿರಸ್ಕರಿಸಿ ಯಾವುದೇ ಕಾರಣಕ್ಕೂ ಖಾಸಗಿ ಸ್ಥಳಗಳಲ್ಲಿ ಅವಕಾಶವಿಲ್ಲವೆಂದು ಹೇಳಿತ್ತು.ಆದರೆ ಅರ್ಜಿ ಸಲ್ಲಿಸಿದ ಪ್ರತಿಯನ್ನು ಇಟ್ಟುಕೊಂಡು ಖಾಸಗಿ ವಸತಿಗೃಹದವರಿಗೆ ತೋರಿಸಿ ನಮಗೆ ಪಂಚಾಯತ್ ಅನುಮತಿ ಇದೆಯೆಂದು ಸಭಾಂಗಣ ಬಾಡಿಗೆ ಪಡೆದಿದ್ದಾರೆ.


ಭಾನುವಾರ ಖಾಸಗಿ ಸಭಾಂಗಣದಲ್ಲಿ ಮತಾಂತರಕ್ಕೆ ಯತ್ನಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪಟ್ಟಣದ ಹಿಂದೂಪರ ಸಂಘಟನೆಗಳು ಮತ್ತು ಸಾರ್ವಜನಿಕರು ಪೊಲೀಸರೊಂದಿಗೆ ಸ್ಥಳಕ್ಕೆ ಧಾವಿಸಿ ತರಾಟೆಗೆ ತೆಗೆದುಕೊಂಡು ಎಚ್ಚರಿಕೆ ನೀಡಿ ಎಲ್ಲಾರನ್ನು ಕಳುಹಿಸಿಕೊಟ್ಟಿದ್ದಾರೆ.


ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿದ ಹಿಂದೂಪರ ಸಂಘಟನೆಯ ಸುಧೀಂದ್ರ ಪೂಜಾರಿ ಕಳೆದ ಕೆಲವು ವರ್ಷಗಳಿಂದ ರಿಪ್ಪನ್ ಪೇಟೆ ಸೇರಿದಂತೆ ಸುತ್ತಮುತ್ತ ಗ್ರಾಮಗಳಲ್ಲಿ ದಲಿತರು ಹಿಂದುಳಿದವರು ಮತ್ತು ಬಡವರನ್ನು ಗುರಿಯನ್ನಾಗಿಟ್ಟುಕೊಂಡು ಪ್ರೊಟೆಸ್ಟೆಂಟ್ ಕ್ರಿಶ್ಚಿಯನ್ ಪಂಗಡದ ಮತಾಂಧ ಶಕ್ತಿಗಳು ಹಿಂದೂ ಧರ್ಮದವರನ್ನು ಮತಾಂತರಗೊಳಿಸಲು ಪ್ರಯತ್ನಿಸುತ್ತಿದ್ದಾರೆ.ಈ ಬಗ್ಗೆ ರಕ್ಷಣೆ ಇಲಾಖೆ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಬೇಕೆಂದು ತಿಳಿಸಿದರು.



ಈ ಸಂಧರ್ಭದಲ್ಲಿ ಹಿಂದೂಪರ ಮುಖಂಡರಾದ ಸುಂದರೇಶ್ ,ವೈ ಜೆ ಕೃಷ್ಣ, ಸುಧೀಂದ್ರ ,ರಾಘವೇಂದ್ರ ,ನಿರೂಪ್ ಕುಮಾರ್ ,ರಂಜನ್ ಕುಮಾರ್ , ಮತ್ತು ಗವಟೂರು ವಾರ್ಡ್ ಗ್ರಾಪಂ ಸದಸ್ಯ ಆಸೀಫ಼್ ಸೇರಿದಂತೆ ಇನ್ನಿತರರಿದ್ದರು.


ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

12 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

12 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

12 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

17 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

19 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago