ರಿಪ್ಪನ್‌ಪೇಟೆ ಮೂಲದ ಟೆಂಪಲ್ ಆಫ್ ಸಕ್ಸಸ್ ನ ಶ್ರೀ ರಘುನಾಥ್ ಗುರೂಜಿ ಇನ್ನಿಲ್ಲ : ರಾಷ್ಟ್ರದ ಪ್ರಮುಖ ಗುರೂಜಿಗಳಲ್ಲಿ ಒಬ್ಬರಾಗಿದ್ದರು.

ರಿಪ್ಪನ್‌ಪೇಟೆ : ಟೆಂಪಲ್ ಆಫ್ ಸಕ್ಸಸ್ ನ ಸಾಯಿದತ್ತ ರಘುನಾಥ್ ಗುರೂಜಿಯವರು ಬೆಂಗಳೂರಿನಲ್ಲಿ ಮಂಗಳವಾರ ಕೊನೆಯುಸಿರೆಳೆದಿದ್ದಾರೆ.


ತೀವ್ರ ಅಸೌಖ್ಯ ಗೊಂಡಿದ್ದ ರಘುನಾಥ್ ಗುರೂಜಿ ಅವರು ಬೆಂಗಳೂರಿನ ಜಯನಗರದಲ್ಲಿರುವ ಅಪೋಲೋ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರೂಜಿಯವರು ಅಪಾರ ಭಕ್ತವೃಂದವನ್ನು ಹೊಂದಿದ್ದಾರೆ.

ನಿನ್ನೆ (30th August 2022) ವಿಧಿವಶರಾದ ರಘುನಾಥ್ ಗುರೂಜಿ ಅವರ ಅಂತ್ಯಕ್ರಿಯೆ ಸೆಪ್ಟೆಂಬರ್ 2 ರಂದು ಮಣಿಪಾಲದಲ್ಲಿ ನಡೆಯಲಿದೆ.

ಅನುಯಾಯಿಗಳು ಬೆಂಗಳೂರು ಬಸವನಗುಡಿಯ ವಾಣಿ ನಿಲಾಸ ರಸ್ತೆಯಲ್ಲಿರುವ ಟೆಂಪಲ್ ಆಫ್ ಸಕ್ಸಸ್ ಬಳಿ ನಾಳೆ ಗುರುವಾರ (ಸೆಪ್ಟೆಂಬರ್ 1) ರಘುನಾಥ್ ಗುರೂಜಿ ಅವರ ಅಂತಿಮ ದರ್ಶನ ಪಡೆಯಬಹುದು. ಮರು ದಿನ ಸೆಪ್ಟೆಂಬರ್ 2 ರಂದು ಮಣಿಪಾಲದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಇವರು ಮೂಲತಃ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಮೂಗೂಡ್ತಿಯ ಕೃಷಿಕ ಶಾಮರಾಯರ ಇಬ್ಬರು ಮಕ್ಕಳಲ್ಲಿ ಹಿರಿಯ ಪುತ್ರನಾದ ಇವರು ಜೀವ ವಿಮಾ ನಿಗಮದಲ್ಲಿ ಕ್ಷೇತ್ರ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು ನಂತರ ರಿಪ್ಪನ್‌ಪೇಟೆ,ಕೋಣಂದೂರು,ತೀರ್ಥಹಳ್ಳಿ, ಆನಂದಪುರ,ಸಾಗರ ,ಶಿಕಾರಿಪುರ ಸೇರಿದಂತೆ ವಿವಿಧೆಡೆಯಲ್ಲಿ ಶಾಂಭವಿ‌ ಪೈನಾನ್ಸ್ ಎಂಬ ಹಣಕಾಸು ಸಂಸ್ಥೆ ಯನ್ನು ತೆರೆದು ಸಾಕಷ್ಟು ಶಿಕ್ಷಣವಂತ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವುದರ ಜೊತೆಗೆ ಸಾರ್ವಜನಿಕರಿಗೆ ಸಾಲದ ರೂಪದಲ್ಲಿ ಹಣಕಾಸಿನ ನೆರವು ನೀಡಿ ಶಾಂಭವಿ ಫೈನಾನ್ಸ್ ರಘುನಾಥ್ ಶೆಣೈ ಎಂದು ಕೀರ್ತಿ ಗಳಿಸಿದ್ದರು.

ರಾಜಕಾರಣಿಗಳಿಗೆ ಮೆಚ್ಚಿನ ಗುರುವಾಗಿದ್ದರು :

ರಾಜ್ಯದ ಹಾಗೂ ರಾಷ್ಟ್ರದ ಪ್ರಮುಖ ರಾಜಕಾರಣಿಗಳಿಗೆ ವಾಟರ್ ಥೆರಪಿಯಿಂದ ಅನೇಕ ರೋಗಗಳಿಗೆ ಚಿಕಿತ್ಸೆ  ನೀಡುವುದರ ಮೂಲಕ ಗುಣಮುಖರಾಗಲು  ಕಾರಣಕರ್ತರಾಗಿದ್ದ ಶ್ರೀ ರಘುನಾಥ್ ಗುರೂಜಿ ರಾಜಕಾರಣಿಗಳ ಮೆಚ್ಚಿನ ಗುರೂಜಿಯಾಗಿದ್ದು, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ವಿಲಾಸ್ರಾವ್ ದೇಶ ಇವರ ಅನುಯಾಯಿ  ಆಗಿದ್ದರು, ರಾಜ್ಯದ ವಿವಿಧ ರಾಷ್ಟ್ರೀಯ ಪಕ್ಷಗಳ ಮುಖಂಡರುಗಳು ಸಿನಿಮಾ ತಾರೆಯರು,ಧಾರವಾಹಿ ನಟನೆಟಿಯರು, ವೈದ್ಯರು ಸೇರಿದಂತೆ   ಸಾವಿರಾರು ಜನರು ಇವರ ಭಕ್ತರಾಗಿದ್ದರು ಹಾಗೆ ಅನುಯಾಯಿಯಾಗಿದ್ದರು.


ಯಶಸ್ಸಿನ ದೇವಾಲಯ:

ಸಾಯಿ ದತ್ತ ರಘುನಾಥ ಗುರೂಜಿ ಅವರು ಹುಟ್ಟಿದ್ದು ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಮೂಗೂಡ್ತಿಯಲ್ಲಿ. ಅವರು ಟೆಂಪಲ್ ಆಫ್ ಸಕ್ಸೆಸ್‌ನ ಸಂಸ್ಥಾಪಕರಾಗಿದ್ದಾದ್ದರು. ಹಳೆಯ ಚಿಕಿತ್ಸಾ ಪದ್ಧತಿಗಳನ್ನು ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ಅಮೃತ್ ಚಿಕಿತ್ಸೆ ಎಂಬ ಹಳೆಯ ಪದ್ದತಿಯನ್ನು ಅಳವಡಿಸಿಕೊಂಡಿದ್ದರು. ಅವರ ಯೌವನದಲ್ಲಿ, ಅವರು ನಾಲ್ಕು ಕಾಯಿಲೆಗಳಿಂದ ಬಳಲುತ್ತಿದ್ದರು. 6 ವರ್ಷಗಳ ನೋವು ಮತ್ತು 200 ಕ್ಕೂ ಹೆಚ್ಚು ವೈದ್ಯರು, ಮೆಡಿಸಿನ್‌ಗಳು ಇತ್ಯಾದಿಗಳನ್ನು ಸಮಾಲೋಚಿಸಿದ ನಂತರ ಅವರು ಅಮೃತ್ ಚಿಕಿತ್ಸೆ ಮೂಲಕ ಪರಿಹಾರ ಕಂಡುಕೊಂಡರು.

ಈ ಚಿಕಿತ್ಸೆಯು ನಾಲ್ಕು ತಿಂಗಳೊಳಗೆ ಅವರ ಎಲ್ಲಾ ಕಾಯಿಲೆಗಳನ್ನು ಗುಣಪಡಿಸಿತು. ಶ್ರೀ ಶಿರಡಿ ಸಾಯಿ ಬಾಬಾ ಅವರ ಒಳನೋಟದ ಮೂಲಕ, ಅವರು ಈ ದೈವಿಕ ಚಿಕಿತ್ಸೆಯನ್ನು ಅಗತ್ಯವಿರುವವರಿಗೆ ಹರಡಲು ನಿರ್ಧರಿಸಿದರು. ಅವರು 1999 ರಲ್ಲಿ ಸರಸ್ವತಿ ನಗರದಲ್ಲಿ ಟೆಂಪಲ್ ಆಫ್ ಸಕ್ಸೆಸ್ ಅನ್ನು ಪ್ರಾರಂಭಿಸಿದರು. ಅಂದಿನಿಂದ ಇದು ನಿರ್ಗತಿಕರಿಗೆ ಸಹಾಯ ಮಾಡುವ ಸಂಸ್ಥೆಯಾಗಿ ವಿಕಸನಗೊಂಡಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

2 hours ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

2 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

10 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

10 hours ago

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…

10 hours ago

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಬರುವೆ ಶಾಲೆಯ ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…

22 hours ago