January 11, 2026

ರಿಪ್ಪನ್‌ಪೇಟೆ ಶ್ರೀ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಈಶ್ವರ್ ಶೆಟ್ಟಿ ಆಯ್ಕೆ :

ರಿಪ್ಪನ್ ಪೇಟೆ : ಇಲ್ಲಿಯ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಧರ್ಮದರ್ಶಿ ಸಮಿತಿಯ ಅಧ್ಯಕ್ಷರಾಗಿ ಆರ್.ಈ. ಈಶ್ವರ್ ಶೆಟ್ಟಿ ಆಯ್ಕೆ ಆಗಿದ್ದಾರೆ.

ರಿಪ್ಪನ್ ಪೇಟೆಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಮುಜರಾಯಿ ಇಲಾಖೆಯ ದೇವಸ್ಥಾನವಾಗಿದ್ದು, ದೇವಸ್ಥಾನದ ಧರ್ಮದರ್ಶಿ ಸಮಿತಿಗೆ ಸೇರಲು ಆಕಾಂಕ್ಷಿಗಳಾಗಿ ಸುಮಾರು 82 ಜನ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಭಾರಿ ಪೈಪೋಟಿ ನಡೆದಿದ್ದು, ಇತ್ತೀಚಿಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಧರ್ಮದರ್ಶಿ ಸಮಿತಿ 9 ಜನರ ಸಮಿತಿ ಆಯ್ಕೆ ಮಾಡಿತ್ತು. ಈ ಆಯ್ಕೆಯಂತೆ ಮಾನ್ಯ ಜಿಲ್ಲಾಧಿಕಾರಿಗಳು ಇತ್ತೀಚಿಗೆ 9 ಜನರ ಸಮಿತಿ ಮಾಡಿ ಆದೇಶ ಹೊರಡಿಸಿದ್ದರು.

ಈ ಸಮಿತಿಯಲ್ಲಿ  ಗಣೇಶ.ಎನ್.ಕಾಮತ್,  ಆರ್ .ಈ.ಈಶ್ವರ ಶೆಟ್ಟಿ, ಎಂ.ಡಿ.ಇಂದ್ರಮ್ಮ,  ಆಶಾನರಸಿಂಹ,  ವೈ.ಜಿ.ಕೃಷ್ಣ, ಸ್ವಾಮಿ ದೊಡ್ಡಿನಕೊಪ್ಪ, ಕೆ. ಮಂಜನಾಯ್ಕ, ತುಳುಜಿರಾವ್, ಅರ್ಚಕರಾದ ಚಂದ್ರಶೇಖರ ಭಟ್ ಇವರುಗಳು ಆಯ್ಕೆಯಾಗಿದ್ದು, ಇವರಲ್ಲಿ ಒಬ್ಬರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ನಿಬಂಧನೆಯಂತೆ ದಿನಾಂಕ 14-08-2022 ರಂದು ದೇವಸ್ಥಾನದ ಆವರಣದಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಈ ಆಯ್ಕೆ ನಡೆಯಿತು.

About The Author

Leave a Reply

Your email address will not be published. Required fields are marked *

Exit mobile version