ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಸಿದ್ದಪನಗುಡಿ ಬಳಿ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ಲಾರಿಯಡಿ ಸಿಲುಕಿಕೊಂಡ ಘಟನೆ ನಡೆದಿದೆ.
ಆಯನೂರಿನಿಂದ ರಿಪ್ಪನ್ಪೇಟೆಗೆ ಬೈಕ್ ನಲ್ಲಿ ಬರುತ್ತಿದ್ದ ಇಬ್ಬರು ಯುವಕರಿಗೆ ರಿಪ್ಪನ್ಪೇಟೆ ಯಿಂದ ಶಿವಮೊಗ್ಗ ಕಡೆಗೆ ಸಾಗುತ್ತಿದ್ದ ಲಾರಿ ಡಿಕ್ಕಿಯಾಗಿ ಬೈಕ್ ಸಮೇತ ಇಬ್ಬರು ಯುವಕರು ಲಾರಿಯಡಿಗೆ ಸಿಲುಕಿಕೊಂಡ ಘಟನೆ ನಡೆದಿದೆ.
ನಡೆದಿದ್ದೇನು….
ರಿಪ್ಪನ್ಪೇಟೆಗೆ ಗಾರೆ ಕೆಲಸಕ್ಕೆಂದು ಬೈಕ್ ನಲ್ಲಿ ಬರುತ್ತಿದ್ದ ಆಯನೂರಿನ ನಿವಾಸಿಗಳಾದ ಶ್ರೀನಿವಾಸ್ (29) ಮತ್ತು ಮಂಜುನಾಥ್ (28) ಹಾಗೂ ರಿಪ್ಪನ್ಪೇಟೆ ಯಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಲಾರಿ (KL-11 BO 5728) ಸಿದ್ದಪ್ಪನಗುಡಿ ಬಳಿ ಶಿವಮೊಗ್ಗಕ್ಕೆ ತೆರಳುತಿದ್ದ ಕೆ ಎಸ್ ಆರ್ ಟಿಸಿ (KA 07 F 1795) ಬಸ್ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಹಿಂಬದಿಯಿದ್ದ ಲಾರಿ ಕೆ ಎಸ್ ಆರ್ ಟಿಸಿ ಬಸ್ ಗೆ ಹಿಂಬದಿಗೆ ತಾಗಿಸಿ ಏಕಾಏಕಿ ಬಲಕ್ಕೆ ತೆಗೆದುಕೊಂಡಿದ್ದಾನೆ ಈ ಸಂಧರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಈ ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ಇರ್ವರು ಲಾರಿ ಅಡಿ ಸಿಲುಕಿಕೊಂಡಿದ್ದು ಸ್ಥಳೀಯರ ಸಹಾಯದಿಂದ ಹೊರತೆಗೆಯಲಾಯಿತು.
ಅದೃಷ್ಟವಶಾತ್ ಬೈಕ್ ನಲ್ಲಿದ್ದ ಇಬ್ಬರಿಗೂ ಯವುದೇ ಗಂಭೀರ ಗಾಯಗಳಾಗಿರುವುದಿಲ್ಲ.ಗಾಯಾಳುಗಳನ್ನು ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದೆ.
ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್