ಶಿವಮೊಗ್ಗದಲ್ಲಿ ಕೋಮುಗಲಭೆ ಸೃಷ್ಟಿಯ ಕುರಿತು ಅನಾಮಧೇಯ ಪತ್ರ ಪ್ರಕರಣಕ್ಕೆ ಟ್ವಿಸ್ಟ್ : ಆಕೆಗಾಗಿ ಲೆಟರ್ ಬರೆದವ ಈಗ ಪೊಲೀಸರ ಅತಿಥಿ

ಶಿವಮೊಗ್ಗ ನಗರದಲ್ಲಿ ಸಾವರ್ಕರ್ ಭಾವಚಿತ್ರ ತೆರವುಗೊಳಿಸಿದ ವೇಳೆ ಉಂಟಾದ ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು ಈ ನಡುವೆ ಕಳೆದ ಶನಿವಾರ ನಗರದಲ್ಲಿ ಅನಾಮದೇಯ ಪತ್ರವೊಂದು ಪತ್ತೆಯಾಗಿ ಭಾರಿ ತಲ್ಲಣ ಸೃಷ್ಠಿಸಿತ್ತು, ಈ ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಸೂಳೆಬೈಲಿನ ಅಯೂಬ್ ಎಂಬಾತನನ್ನು ಬಂಧಿಸುವ ಜೊತೆಗೆ ನಗರದಲ್ಲಿ ಕೋಮು ಗಲಭೆ ಸೃಷ್ಟಿಸುವ ಅನಾಮಧೇಯ ಪತ್ರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದಂತಾಗಿದೆ..

ಅಂದಹಾಗೆ ಈ ಪತ್ರ ಬರೆದಿರುವುದು ಕೂಡಾ ಆತನೇ.. ಕಾರಣ ಅದೇ ಊರಿನ ಫೈಜಲ್ ಎಂಬಾತನ ಪತ್ನಿಯನ್ನು ಅಯೂಬ್ ಪ್ರೀತಿಸುತಿದ್ದನಂತೆ ಕಳೆದ ನಾಲ್ಕು ವರ್ಷಗಳ ಹಿಂದೆ ಇವರಿಬ್ಬರ ಮದುವೆಯಾಗಿದ್ದು ಹೇಗಾದರೂ ಮಾಡಿ ಫೈಜಲ್ ನನ್ನು ಜೈಲಿಗೆ ಅಟ್ಟಿ ಆತನ ಪತ್ನಿ ಜೊತೆಗೆ ಸುಖವಾಗಿ ಇರಬಹುದು ಎಂದು ಪ್ಲಾನ್ ಮಾಡಿದ್ದನಂತೆ ಅದಕ್ಕೆ ಸರಿಯಾಗಿ ಶಿವಮೊಗ್ಗದಲ್ಲಿ ಸಾವರ್ಕರ್ ಭಾವಚಿತ್ರ ವಿಚಾರದಲ್ಲಿ ಉಂಟಾದ ಗಲಭೆಯನ್ನು ಫೈಜಲ್ ಮೇಲೆ ಹಾಕಿ ಗಣೇಶ ಹಬ್ಬದ ಸಂದರ್ಭ ಕೋಮು ಗಲಭೆ ಎಬ್ಬಿಸುವ ರೀತಿಯಲ್ಲಿ ಏನಾದರು ಮಾಡಬೇಕೆಂದು ಸಂಚು ರೂಪಿಸಿ ಅಯೂಬ್ ಪತ್ರ ಬರೆದು ಜೈಲಿಗಟ್ಟುವ ಪ್ಲಾನ್ ಮಾಡಿದ್ದ.. ಆದರೆ ಕೊನೆಗೆ ತಾನು ಹೆಣೆದ ಬಲೆಗೆ ತಾನೆ ಬಿದ್ದು ಜೈಲು ಸೇರಿದ್ದಾನೆ.


ಕಳೆದ ಶನಿವಾರ ರಾತ್ರಿ ಗಾಂಧಿ ಬಜಾರ್ ನಿವಾಸಿ ಪ್ರಶಾಂತ್ ಅವರು ತನ್ನ ಅಂಗಡಿ ಬಂದ್ ಮಾಡಿ ದೇವಸ್ಥಾನದ ಲೈಟ್ ಬಂದ್ ಮಾಡಲು ತೆರಳುತ್ತಿದ್ದ ವೇಳೆ ದೇವಸ್ಥಾನದ ಎದುರು ಕವರ್ ಪತ್ತೆಯಾಗಿದ್ದು ಅದರೊಳಗೆ ಇದ್ದ ಪತ್ರದಲ್ಲಿ ಗಣೇಶ ಹಬ್ಬದ ದಿನ ನಡೆಯುವ ಕೋಮುಗಲಭೆ ನಿಲ್ಲಿಸಿ ಹಾಗೂ ಮೂವರ ಜೀವ ಉಳಿಸಿ ಎಂದು ಬರೆಯಲಾಗಿತ್ತು.


ಪತ್ರದಲ್ಲಿದ್ದ ವಿವರ :

ಓರ್ವ ಮಾರ್ವಾಡಿಯನ್ನ ಅರ್ಧಂಬರ್ಧ ಕೊಲೆ ಮಾಡಲಾಗಿದೆ ಆತನನ್ನ ಸಂಪೂರ್ಣ ತೆಗೆಯಬೇಕು. ಇನ್ನೊಬ್ಬ ಮಾರ್ವಾಡಿ, ಉದ್ದಿಮೆದಾರ ಹಾಗೂ ಹರ್ಷನ ಸಹಚರನನ್ನ ಕೊಲೆಯಾಗಬೇಕೆಂದು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಮಾರುಕಟ್ಟೆಯಲ್ಲಿ ಶೌಚಾಲಯದ ಬಳಿ ಮೂವರು ಗಾಂಜಾ ಸೇದುತ್ತಿದ್ದವರು ಈ ಬಗ್ಗೆ ಮಾತನಾಡಿಕೊಂಡಿರುವುದನ್ನ ನಾನು ಕೇಳಿಸಿಕೊಂಡು ಭಯಭೀತಿಯಾಗಿದ್ದೇನೆ ಅಲ್ಲದೆ ಈ ಕಾರ್ಯಕ್ಕೆ ಮೂವರನ್ನ ಮಂಗಳೂರಿನಿಂದ ಕರೆಸಬೇಕು ಎಂದು ಮಾತನಾಡಿಕೊಂಡಿದ್ದಾರೆ. ಕೃತ್ಯದ ವೇಳೆ ಮೊಬೈಲ್ ಫೋನ್ ಜೊತೆಗೆ ಯಾವುದೇ ವಾಹನ ಬಳಸಬಾರದು ಅಲ್ಲದೆ ಯಾವುದೇ ಕಾರಣಕ್ಕೂ ಯಾರಿಗೂ ಈ ಬಗ್ಗೆ ತಿಳಿಯಬಾರದು. ಗಲಾಟೆ ನಡೆದರೆ ಮಾತ್ರ ಗಣೇಶ ಹಬ್ಬ ನಿಲ್ಲಿಸಲು ಸಾಧ್ಯ ಎಂದು ಮಾತನಾಡುತ್ತಿದ್ದರು ಬಳಿಕ ನಾನು ಕಷ್ಟಪಟ್ಟು ಆ ವ್ಯಕ್ತಿಗಳು ಯಾರೆಂದು ನೋಡಿದಾಗ ಓರ್ವ ಮೊಹ್ಮದ್ ಫೈಜಲ್ ಎಂಬಾತನಾಗಿದ್ದ ಆತ ನನ್ನ ಪರಿಚಿತನೇ ಆಗಿದ್ದ ಆತನ ಹೆಸರು ಫೈಸಲ್, ಈತ ಗಾಂಜಾ ಮಾರಾಟ ಮಾಡುವುದು ಜೊತೆಗೆ ಗಾಂಜಾ ಸೇವನೆಯನ್ನೂ ಮಾಡುತ್ತಾನೆ ಅಲ್ಲದೆ ಈತ ಆಜಾದ್ ನಗರದಲ್ಲಿ ರೌಡಿಸಂ ಮಾಡಿಕೊಂಡು ಇದ್ದವನು. ಹಾಗಾಗಿ ಪೊಲೀಸರು ಈತನನ್ನು ಬಂಧಿಸಿ ಮುಂದೆ ನಡೆಯುವ ಗಲಭೆಯನ್ನು ನಿಯಂತ್ರಿಸಬಹುದು ಎಂದು ಬರೆದಿದ್ದ.

ಘಟನೆ ಕುರಿತು ತನಿಖೆ ಕೈಗೆತ್ತಿಕೊಂಡ ಪೊಲೀಸರು ಫೈಜಲ್ ನನ್ನು ವಿಚಾರಣೆ ನಡೆಸಿದ ವೇಳೆ ತನ್ನ ಪತ್ನಿಯ ಜೊತೆ ಅಯೂಬ್ ಅನೈತಿಕ ಸಂಬಂಧ ಹೊಂದಿರುವುದು ಗೊತ್ತಾಗಿದೆ, ಬಳಿಕ ಪೊಲೀಸರು ಅಯೂಬ್ ನನ್ನು ವಿಚಾರಣೆ ನಡೆಸಿದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾನೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

39 minutes ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

3 hours ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

3 hours ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

3 hours ago

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

13 hours ago

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

1 day ago