ಶಿವಮೊಗ್ಗದ ಶಾಪಿಂಗ್ ಮಾಲ್​ ನಲ್ಲಿ ವೀರ ಸಾವರ್ಕರ್ ಭಾವಚಿತ್ರ ಪ್ರದರ್ಶನ ವಿವಾದ : ಬಿಗುವಿನ ವಾತಾವರಣ

ಶಿವಮೊಗ್ಗ : ನಗರದ ಸಿಟಿ ಸೆಂಟ್ರಲ್​ ಮಾಲ್​ ವಿವಾದವೊಂದಕ್ಕೆ ಸಾಕ್ಷಿಯಾಗಿ ಹಲವು ಸನ್ನಿವೇಶಗಳನ್ನು ಕಂಡಿತು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮಾಡಿದ್ದ ಅಲಂಕಾರದ ನಡುವೆ ವೀರ ಸಾರ್ವಕರ್​ ಫೋಟೋಹಾಕಿದ್ದನ್ನ ಪ್ರಶ್ನಿಸಿ ಎಸ್​ಡಿಪಿಐ ಕಾರ್ಯಕರ್ತರು ಆಕ್ರೋಶ ಹೊರಹಾಕಿ ಪ್ರತಿಭಟಿಸಿದರೆ, ಬಿಜೆಪಿ ಕಾರ್ಯಕರ್ತರು ವೀರ ಹೋರಾಟಗಾರರಿಗೆ ಎಸ್​ಡಿಪಿಐ ಅವಮಾನ ಮಾಡಿದೆ ಎಂದು ಆಕ್ರೋಶ ಹೊರಹಾಕಿ ಮಾಲ್​ನ ಎದುರಲ್ಲೆ ಪ್ರತಿಭಟನೆ ನಡೆಸಿತು.

ಮನೆಮನೆಗೂ ತಿರಂಗಾ ಅಭಿಯಾನದ ನಡುವೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮದ ಅಂಗವಾಗಿ ನಗರ ಪ್ರತಿಷ್ಟಿತ ಕಟ್ಟಡಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸ್ವಾತಂತ್ರ್ಯಕ್ಕೆ ಕಾರಣರಾದ ಮಹನೀಯರ ಫೋಟೋಗಳನ್ನ ಇಟ್ಟು, ವಿವಿಧ ರೀತಿಯಲ್ಲಿ ಅಲಂಕಾರ ಮಾಡಲಾಗುತ್ತಿದೆ.

ಇದರ ಹಿನ್ನೆಲೆ ಶಿವಮೊಗ್ಗ ಸಿಟಿ ಸೆಂಟ್ರಲ್ ಮಾಲ್​ನಲ್ಲಿ ಇವತ್ತು ವಿಶೇಷವಾಗಿ ಬ್ಯಾನರ್ ಹಾಗೂ ಬಂಟಿಂಗ್ಸ್ ಬಲೂನ್ಸ್ ಅಳವಡಿಸಿ ಅಲಂಕಾರ ಮಾಡಲಾಗಿತ್ತು. ಮಹಾತ್ಮ ಗಾಂಧಿ, ಜವಾಹರಲಾಲ್‌ ನೆಹರು, ಭಗತ್‌ ಸಿಂಗ್‌, ಸರ್ದಾರ್‌ ವಲ್ಲಭಭಾಯಿ ಪಟೇಲ್‌, ಚಂದ್ರಶೇಖರ್‌ ಆಜಾದ್‌, ಡಾ.ಬಿ.ಆರ್.ಅಂಬೇಡ್ಕರ್‌, ಸುಭಾಷ್ ಚಂದ್ರ ಬೋಸ್‌ ಮತ್ತಿತರ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳನ್ನು ಅಳವಡಿಸಿ ಅಲಂಕರಿಸಲಾಗಿತ್ತು.

ಇನ್ನೂ ವೀಕೆಂಡ್ ಆದ್ದರಿಂದ ಇವತ್ತು ಹೆಚ್ಚಿನ ಜನರು ಮಾಲ್​ಗೆ ಬರುತ್ತಿದ್ರು. ಇದರ ನಡುವೆ ಎಸ್​ಡಿಪಿಐ ಕಾರ್ಯಕರ್ತರು ಸ್ಥಳಕ್ಕೆ ಬಂದು ಸ್ವಾತಂತ್ರ್ಯ ಹೋರಾಟಗಾರರ ನಡುವೆ ವೀರ ಸಾರ್ವಕರ್​ ಫೋಟೋ ಹಾಕಿದ್ದೀರಾ ಮೊದಲು ಅವರ ಫೋಟೋವನ್ನು ತೆಗೆಯಿರಿ ಎಂದು ಆಕ್ರೋಶ ಹೊರಹಾಕಿದ್ರು.

ಸಾರ್ವಕರ್ ಫೋಟೋ ತೆಗೆಯುವಂತೆ ಒತ್ತಾಯ

ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದುಕೊಟ್ಟು ಬಂದ ಸಾವರ್ಕರ್ ಹೇಗೆ ಸ್ವಾತಂತ್ರ್ಯ ಹೋರಾಟಗಾರನಾಗಲು ಸಾಧ್ಯ? ಎಂದು ಆಕ್ರೋಶ ವ್ಯಕ್ತಪಡಿಸಿದರು.ಗಾಂಧಿಜಿಯವರ ಫೋಟೋವನ್ನು ದೊಡ್ಡದಾಗಿ ಹಾಕಿ, ಮೌಲಾನಾ ಅಬ್ದುಲ್​ ಕಲಾಂ ಅಜಾದ್​ರ ಫೋಟೋವನ್ನ ಹಾಕಿ ಎಂದು ಒತ್ತಾಯಿಸಿದ್ರು. ಈ ಸಂಬಂಧ ಪ್ರತಿಭಟನೆಯನ್ನು ಸಹ ನಡೆಸಿದ್ರು. ನಂತ ಮೌಲಾನಾ ಅಬ್ದುಲ್ ಕಲಾಂ ಅಜಾದ್​ರ ಫೋಟೋವನ್ನು ಹಾಕುವುದಾಗಿ ಮಾಲ್ ಸಿಬ್ಬಂದಿ ಹೇಳಿದ್ದರಿಂದ ಅಲ್ಲಿಂದ ಎಸ್​ಡಿಪಿಐ ಕಾರ್ಯಕರ್ತರ ತೆರಳಿದ್ರು ಎನ್ನಲಾಗಿದೆ.

ವೀಡಿಯೋ ಇಲ್ಲಿ ವೀಕ್ಷಿಸಿ👇




ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ


ಇನ್ನೂ ಈ ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಬಿಜೆಪಿ ಕಾರ್ಯಕರ್ತರು ದೌಡಾಯಿಸಿದ್ಧಾರೆ. ಇದು ಸ್ವಾತಂತ್ರ್ಯ ಹೋರಾಟಗಾರರಿಗೆ ಎಸ್​ಡಿಪಿಐ ಕಾರ್ಯಕರ್ತರು ಅವಮಾನ ಮಾಡಿದ್ದಾರೆ. ಕಿಡಿಗೇಡಿಗಳು ರೌಡಿಗಳಂತೆ ಬಂದು ಮಾಲ್​ನಲ್ಲಿದ್ದವರನ್ನ ಹೆದರಿಸಿದ್ಧಾರೆ. ಅವರ ವಿರುದ್ಧ ಕ್ರಮ ಆಗಬೇಕು ಎಂದು ಆಕ್ರೋಶ ಹೊರಹಾಕಿದ್ರು. ಅಲ್ಲದೆ ಕೆಲಕಾಲ ಮಾಲ್​ ಬಾಗಿಲ ಬಳಿಯಲ್ಲಿಯೇ ಪ್ರತಿಭಟನೆ ನಡೆಸಿದ್ರು.

ಇನ್ನೂ ಸ್ಥಳಕ್ಕೆ ಬಂದ ಮೇಯರ್ ಹಾಗೂ ಉಪಮೇಯರ್​ ಸಾರ್ವಕರ್​ ಫೋಟೋ ತೆಗೆಯುವಂತೆ ಒತ್ತಾಯಿಸಿದ ಎಸ್​ಡಿಪಿಐ ಕಾರ್ಯಕರ್ತರ ವಿರುದ್ಧ ಕೇಸ್​ ದಾಖಲಾಗಿದೆ. ಅವರ ವಿರುದ್ಧ ಕ್ರಮವಾಗಲಿದೆ ಎಂದು ಭರವಸೆ ನೀಡಿದ ನಂತರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನು ಹಿಂಪಡೆದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

3 hours ago

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…

3 hours ago

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…

4 hours ago

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…

4 hours ago

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…

12 hours ago

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…

12 hours ago