ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸೊರಬ ತಾಲೂಕು ಘಟಕವು ಅಸ್ತಿತ್ವಕ್ಕೆ

ಸೊರಬ : ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸೊರಬ ತಾಲೂಕು ಘಟಕವು ಅಸ್ತಿತ್ವಕ್ಕೆ ಬಂದಿದೆ.
ಸೊರಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪ್ರಜಾವಾಣಿ ವರದಿಗಾರ ರಾಘವೇಂದ್ರ ಟಿ., ಉಪಾಧ್ಯಕ್ಷರಾಗಿ ಹೊಸ ದಿಗಂತ ಪತ್ರಿಕೆ ವರದಿಗಾರ ಮಹೇಶ್ ಗೋಖಲೆ, ಪ್ರಧಾನ ಕಾರ್ಯದರ್ಶಿಯಾಗಿ ಮಲೆನಾಡು ಮಿತ್ರ ಪತ್ರಿಕೆ ವರದಿಗಾರ ದಿನಕರ್ ಬಾವೆ, ಕಾರ್ಯದರ್ಶಿಯಾಗಿ ಕ್ರಾಂತಿದೀಪ ವರದಿಗಾರ ನೂಪಿ ಶಂಕರ್, ಖಜಾಂಚಿಯಾಗಿ ಕನ್ನಡಪ್ರಭ ವರದಿಗಾರ ಹೆಚ್.ಕೆ.ಬಿ. ಸ್ವಾಮಿ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಿರಿಯ ಪತ್ರಕರ್ತ ಶ್ರೀಪಾದ ಬಿಚ್ಚುಗತ್ತಿ ಅವರು ಗೌರವಾಧ್ಯಕ್ಷರಾಗಿದ್ದಾರೆ.
ಜಿಲ್ಲಾ ಉಪಾಧ್ಯಕ್ಷರಾಗಿ ಸುರಭಿ ವಾಣಿ ಪತ್ರಿಕೆ ಸಂಪಾದಕ ರಾಮಚಂದ್ರಪ್ಪ ಹಾಗೂ ಜಿಲ್ಲಾ ಪ್ರತಿನಿಧಿಯಾಗಿ ವಿಜಯ ಕರ್ನಾಟಕ ವರದಿಗಾರ ಯು.ಎಂ. ನಟರಾಜ್ ಅವರು ಆಯ್ಕೆಯಾಗಿದ್ದಾರೆ.ನಿರ್ದೇಶಕರಾಗಿ ನೀಲೇಶ್ ಸಮನಿ, ರವಿ ಕಲ್ಲಂಬಿ, ಎಂ‌.ಕೆ. ಮೋಹನ್, ಪುರುಷೋತ್ತಮ್ ಚಂದ್ರಗುತ್ತಿ, ರಾಜೇಂದ್ರ ಜೈನ್, ಜಗನ್ನಾಥಪ್ಪ, ವಾಣಿಶ್ರೀ, ವಾಸುದೇವ ಆನವಟ್ಟಿ, ಪ್ರಶಾಂತ ಹುಣವಳ್ಳಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಗೋಪಾಲ್ ಯಡಗೆರೆ ಅವರು ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿ, ಈ ಸಂಘ ಯಾರ ವಿರುದ್ಧವೂ ಅಲ್ಲ. ಸೃಜನಾತ್ಮಕ ಕೆಲಸಗಳನ್ನು ಮಾಡೋಣ. ಈ ಮೂಲಕ ಎಲ್ಲರ ಮೆಚ್ಚುಗೆ ಪಡೆಯೋಣ ಎಂದರು.
ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಅವರು ಮಾತನಾಡಿ, ಪತ್ರಕರ್ತರ ಬದುಕಿನ ಭದ್ರತೆಗೆ ಬೇಕಾದ ಕೆಲಸಗಳನ್ನು ಒಟ್ಟಿಗೆ ಮಾಡೋಣ ಎಂದರು.
ನೂತನ ಅಧ್ಯಕ್ಷ ರಾಘವೇಂದ್ರ ಟಿ. ಪ್ರಧಾನ ಕಾರ್ಯದರ್ಶಿ ದಿನಕರ ಬಾವೆ ಅವರು ಮಾತನಾಡಿ ಸಂಘಟನೆಯನ್ನು ಬಲಿಷ್ಠವಾಗಿ ಹಾಗೂ ಸಮಾಜಮುಖಿಯಾಗಿ ಬೆಳೆಸುವ ಉತ್ಸಾಹ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪತ್ರಕರ್ತರಾದ ಜೇಸುದಾಸ್, ಹೊನ್ನಾಳಿ ಚಂದ್ರಶೇಖರ್, ಕಿರಣ್ ಕಂಕಾರಿ ಸೇರಿದಂತೆ ಹಲವರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

1 hour ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

4 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

16 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

16 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

18 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

18 hours ago