ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು : ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಸಮಾಜದಲ್ಲಿ ನೊಂದವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಹಾಗೂ ಮಕ್ಕಳಿಗೆ ಸೂಕ್ತ ವಿದ್ಯಾಭ್ಯಾಸ ಒದಗಿಸಿ ಸುಸಂಸ್ಕೃತ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು.


ಅವರು ಭಾನುವಾರ ಪಟ್ಟಣದ ಜಿಎಸ್ ಬಿ ಸಭಾಂಗಣದಲ್ಲಿ ಹೊಸನಗರ ತಾಲ್ಲೂಕ್ ಗಂಗಾಮತಸ್ಥರ ನೌಕರರ ಕ್ಷೇಮಾಭಿವೃದ್ದಿ ಸಂಘ ಮತ್ತು ತಾಲ್ಲೂಕ್ ಗಂಗಾಮತಸ್ಥರ ಸಮಾಜ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕೊರೊನಾದಿಂದಾಗಿ ಸಮಾಜಗಳ ಆರ್ಥಿಕ ಮಟ್ಟ ಕುಸಿಯುವಂತಾಗಿದೆ.ತಾವು ಸಮಾಜದಲ್ಲಿನ ತಮ್ಮ ಮಕ್ಕಳಿಗಾಗಿ ವಸತಿ ನಿಲಯಗಳನ್ನು ಆರಂಭಿಸಿ ವಿದ್ಯಾಭ್ಯಾಸಕ್ಕೆ ಹೆಚ್ಚು ಒತ್ತುನೀಡಿ ವಿದ್ಯೆಯೊಂದಿಗೆ ಸದೃಢ ಸಮಾಜ ನಿರ್ಮಾಣ ಮಾಡುವ ಮೂಲಕ ಸಂಘಟನೆಗೆ ಬಲತುಂಬಬೇಕಾಗಿದೆ ಎಂದರು.


ಗಂಗಾಮತಸ್ಥ ಜನಾಂಗ ಎಸ್ ಟಿ ಗೆ ಸೇರಿಸುವ ಬಹಳ ಕಾಲದ ಬೇಡಿಕೆಯನ್ನು ಸರ್ಕಾರದ ಮಟ್ಟದಲ್ಲಿ ಗಮನ ಸೆಳೆದು,ಮುಖ್ಯಮಂತ್ರಿ ಗಳಿಗೂ ಮನವರಿಕೆ ಮಾಡಿಕೊಡುವ ಮೂಲಕ ಕಾರ್ಯರೂಪಕ್ಕೆ ತರುವಲ್ಲಿ ಶ್ರಮಿಸುತ್ತೇನೆ ಎಂದು ಹೇಳಿದರು.


ನಂತರ ಮಾತನಾಡಿದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕೆ.ಪಿ.ಎಸ್ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಕೆ.ಆರ್.ಧರ್ಮಪ್ಪ  ಈ ಬಾರಿ ನಮ್ಮ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಬಗ್ಗೆ ಶಾಸಕ ಹರತಾಳು ಹಾಲಪ್ಪ ಶಾಸನ ಸಭೆಯಲ್ಲಿ ಧ್ವನಿ ಎತ್ತಿ ನಮ್ಮ ಸಮಾಜವನ್ನು ಎಸ್ ಟಿ ಗೆ ಸೇರಿಸಲು ವಿಶೇಷ ಕಾಳಜಿ ವಹಿಸಬೇಕು  ಎಂದು ಸಮಾಜದ ಪರವಾಗಿ ಒತ್ತಾಯಿಸಿದರು.


ಹೊಸನಗರ ತಾಲ್ಲೂಕ್ ಗಂಗಾಮತಸ್ಥ ಸಮಾಜದ ಅಧ್ಯಕ್ಷ ಉಮೇಶ್ ಕೆ.ವೈ.ಕಾಳೇಶ್ವರ ಅಧ್ಯಕ್ಷತೆ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ತಾಲೂಕು ಗಂಗಾಮತಸ್ಥ ನೌಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಗಂಗಾಧರ ಕೆ, ತಾ.ಗ.ಮ.ಸ.ಗೌ.ಅಧ್ಯಕ್ಷ ರುಕ್ತೇಶ್, ಮಂಜುನಾಥ ಎಸ್.ಬ್ಯಾಣದ, ನಾಗೇಶ್ ಜಿ.ಗ.ಮ.ಸಂಘದ ಅಧ್ಯಕ್ಷ ಡಿ.ಬಿ.ಕೆಂಚಪ್ಪ,ಜಿ.ಗ.ಮ.ನೌ.ಕ್ಷೇ.ಸಂಘದ ಅಧ್ಯಕ್ಷ ಚಂದ್ರಶೇಖರ್, ಗ್ರಾ.ಪ.ಮಾಜಿ ಅಧ್ಯಕ್ಷ ಹೆಚ್.ಬಿ.ಚಿದಂಬರ, ಹಾಲೇಶಪ್ಪ, ಶಶಿಕಲಾ, ಗುರುಮೂರ್ತಿ ಪಾಂಡುರಂಗ, ಓಂಕೇಶ್, ರಮೇಶ್, ಹೂವಪ್ಪ, ಸತ್ಯನಾರಾಯಣ, ಆನಂದ, ನಾಗೇಂದ್ರ, ಚಂದಳ್ಳಿ, ಮೇಘರಾಜ್, ವಿನೋಧ ಹರೀಶ ಇಂದ್ರೇಶ್, ವೇದಾವತಿ, ರಮ್ಯ, ಸರಸ್ವತಿ ಇನ್ನಿತರರು ಪಾಲ್ಗೊಂಡಿದ್ದರು.



ಇದೇ ಸಂದರ್ಭದಲ್ಲಿ 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ.ಮತ್ತು ಪಿಯುಸಿ ಪರೀಕ್ಷೆ ಯಲ್ಲಿ ಅತಿಹೆಚ್ಚು ಅಂಕಗಳಿಸಿ ಉತ್ತೀರ್ಣಾರಾದ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ “ಪ್ರತಿಭಾ ಪುರಸ್ಕಾರ’’ನೀಡಿ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.

ಕು. ರಶ್ಮಿ ಪ್ರಾರ್ಥಿಸಿದರು. ಪ್ರಧಾನ ಕಾರ್ಯದರ್ಶಿ ಲೋಹಿತ್‌ಕುಮಾರ್ ಹೆಚ್.ಸ್ವಾಗತಿಸಿದರು. ದಿನೇಶ್ ಜಿ.ಮಾದಾಪುರ ನಿರೂಪಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

5 hours ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

6 hours ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

7 hours ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

8 hours ago

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…

8 hours ago

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

16 hours ago