ಹೊಸನಗರದ ಖ್ಯಾತ ವೈದ್ಯರು ಮಾಜಿ ಪುರಸಭಾ ಅಧ್ಯಕ್ಷರಾದ ಡಾ. ನಾಗರಾಜ ಚಡಗ (83) ವಯೋಸಹಜದಿಂದ ನಿಧನರಾಗಿದ್ದಾರೆ.
ಪಟ್ಟಣದ ಶಿವಪ್ಪನಾಯಕ ರಸ್ತೆಯ ವೈದ್ಯ ಫ್ಯಾಮಿಲಿ ಎಂದೇ ಗುರುತಿಸಿಕೊಂಡಿದ್ದ ಡಾಕ್ಟರ್ ಚಡಗ ಕುಟುಂಬದ ನಾಗರಾಜ ಚಡಗ ಅವರು ಇಂದು ಸಂಜೆ 5.30 ರ ವೇಳೆಗೆ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ ಪುತ್ರ ಅಪಾರ ಬಂಧು-ಬಳಗ ಬಿಟ್ಟು ಅಗಲಿದ್ದಾರೆ.
ಡಾಕ್ಟರ್ ನಾಗರಾಜ ಚಡಗ ರವರು 1986 ರಿಂದ 1990 ರವರೆಗೆ ಹೊಸನಗರ ಪುರಸಭೆ ಅಧ್ಯಕ್ಷರಾಗಿ ಹಾಗೂ ಪರಿವರ್ತಿತ ಮಂಡಲ ಪ್ರಧಾನರಾಗಿ ಉತ್ತಮ ಸೇವೆ ಸಲ್ಲಿಸಿದ್ದರು.ಅವರ ತಂದೆ ವೆಂಕಟರಮಣ ಚಡಗ ರವರು ಪಟ್ಟಣದಲ್ಲಿ ವೈದ್ಯ ವೃತ್ತಿ ಪ್ರಾರಂಭಿಸಿ ಜನಾನುರಾಗಿಯಾಗಿದ್ದರು.ಡಾಕ್ಟರ್ ನಾಗರಾಜ ಚಡಗ ರವರ ಏಕೈಕ ಪುತ್ರ ರಾಜೇಶ ಚಡಗ ಅವರು ಸಹ ಈಗ ಪಟ್ಟಣದಲ್ಲಿ ವೈದ್ಯವೃತ್ತಿ ಮಾಡುತ್ತಿದ್ದಾರೆ.
ಜನಾನುರಾಗಿಯಾಗಿದ್ದ ಡಾಕ್ಟರ್ ಚಡಗ ಅವರ ನಿಧನದ ಸುದ್ದಿ ಹಬ್ಬುತ್ತಿದ್ದಂತೆ ನೂರಾರು ಜನ ಅಭಿಮಾನಿಗಳು ಅವರ ನಿವಾಸಕ್ಕೆ ತೆರಳಿ ಮೃತರ ಅಂತಿಮ ದರ್ಶನ ಪಡೆದರು.
ಸಂತಾಪ ::
ಡಾ ನಾಗರಾಜ ಚಡಗ ರವರ ನಿಧನಕ್ಕೆ ತಾಲೂಕು ಬ್ರಾಹ್ಮಣ ಮಹಾಸಭಾ ತೀವ್ರ ಸಂತಾಪ ವ್ಯಕ್ತಪಡಿಸಿದೆ
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್