Headlines

ರಿಪ್ಪನ್‌ಪೇಟೆ : ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್

ರಿಪ್ಪನ್‌ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ಇಂದು ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಅರಿಶಿಣ ಕುಂಕುಮ ಮತ್ತು ಅರತಿ ಬೆಳಗಿ ಬಾಗಿನ ಅರ್ಪಿಸಿದರು. ಇದೇ ಸಂಧರ್ಭದಲ್ಲಿ ವೃತ್ತ ನಿರೀಕ್ಷಕ ಗಿರೀಶ್ ಹಾಗೂ ಪಿಎಸ್‌ಐ ಶಿವಾನಂದ ಕೋಳಿ, ಎಎಸ್‌ಐ ಗಣಪತಿ,ಹಾಲಪ್ಪ,ಮಂಜಪ್ಪ ಹಾಗೂ ಇನ್ನಿತರ…

Read More

ನಾಳೆ (29-08-2022) ರಿಪ್ಪನ್‌ಪೇಟೆಗೆ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ : ಆಮ್ ಆದ್ಮಿ‌ ಪಕ್ಷದ ನೂತನ ಕಾರ್ಯಾಲಯ ಉದ್ಘಾಟನೆ

ರಿಪ್ಪನ್‌ಪೇಟೆ : ನಾಳೆ (29/08/2022) ಸೋಮವಾರ ಪಟ್ಟಣದಲ್ಲಿಆಮ್ ಆದ್ಮಿ ಪಕ್ಷದ ನೂತನ ಕಛೇರಿಯನ್ನು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಉದ್ಘಾಟಿಸಲಿದ್ದಾರೆ. ಪಟ್ಟಣದ ಸಾಗರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ10 ಗಂಟೆಗೆ ಆಮ್ ಆದ್ಮಿ ಪಕ್ಷದ ನೂತನ ಕಛೇರಿಯನ್ನು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಹಾಗೂ ಆಮ್ ಆದ್ಮಿ ಪಕ್ಷದ ರಾಜ್ಯ ಮುಖಂಡ ಟೆನ್ನಿಸ್ ಕೃಷ್ಣ ರವರು ಉದ್ಘಾಟಿಸಲಿದ್ದಾರೆ. ಆಮ್ ಆದ್ಮಿ‌ಪಕ್ಷದ ನೂತನ ಕಛೇರಿ ಉದ್ಘಾಟನೆಗೆ ರಿಪ್ಪನ್‌ಪೇಟೆ ಸುತ್ತಮುತ್ತಲಿನ ಹಳ್ಳಿಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ…

Read More

ಬೆಳ್ಳೂರು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ರೈತ ಸಾವು :

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತಿದ್ದ ರೈತ ವಿದ್ಯುತ್ ಅವಘಡದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಇಂದು ಬೆಳಿಗ್ಗೆ ಕೃಷಿ ಚಟುವಟಿಕೆ ನಿಮಿತ್ತ ತೋಟಕ್ಕೆ ಹೋದಾಗ ಈ ಅವಘಡ ಸಂಭವಿಸಿದ್ದು,ಬೆಳ್ಳೂರು ಗ್ರಾಮದ ಹಿರಿಯಣ್ಣ (58) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮೃತ ಹಿರಿಯಣ್ಣ ಬೆಳ್ಳೂರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಗಿರಿಜಮ್ಮ ರವರ ಪತಿಯಾಗಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು ದೂರು  ದಾಖಲಾಗಿದೆ. ಸಂತಾಪ…

Read More

ಕಾಗೋಡು ತಿಮ್ಮಪ್ಪ ಸಮ್ಮುಖದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಬೇಳೂರು :

ಹೊಸನಗರ: ಮುಂಬರುವ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಮುಂದಿನ ವರ್ಷ ನಡೆಯುವ ವಿಧಾನಸಬೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಹಾಗೂ ಕಾರ್ಯಕರ್ತರು ನಮ್ಮಲ್ಲಿ ಯಾವುದೇ ಒಡಕಿಲ್ಲದೇ ಚುನಾವಣೆ ಎದುರಿಸೋಣ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಹೇಳಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಮ್ಮುಖದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದರು. ಭಾರತ ಸ್ವಾತಂತ್ರ್ಯ ಪಡೆದು 75 ವರ್ಷಗಳ ಆಚರಣೆ ಪ್ರಯುಕ್ತ ಸ್ವಾತಂತ್ರ್ಯ ಬರಲು ಕಾರಣರಾದ ಎಲ್ಲ ಮಹಾನೀಯರಿಗೆ ಗೌರವ ಸೂಚಕವಾಗಿ ಹೊಸನಗರ ತಾಲ್ಲೂಕು ಮಾವಿನಕಟ್ಟೆಯಿಂದ ಸುಮಾರು…

Read More

ಭೂ ಕಬಳಿಕೆ ಕಾಯ್ದೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ : ಶಾಸಕ ಹರತಾಳು ಹಾಲಪ್ಪ ಸಂತಸ

ರಿಪ್ಪನ್‌ಪೇಟೆ : ರಾಜ್ಯದ ಬಹು ಜನರ ಬೇಡಿಕೆಯಾಗಿದ್ದ ಕರ್ನಾಟಕ ಭೂ ಕಬಳಿಕೆ ನಿಷೇದ ಕಾಯ್ದೆಯ 2011 ರ ಕಾಲಂ 2(ಡಿ ) ತಿದ್ದುಪಡಿ ತಂದಿರುವುದು ಬಹಳ ಸಂತಸವಾಗಿದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹೆಚ್ ಹಾಲಪ್ಪ ಹರತಾಳು ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕ ರಾಜ್ಯ ಸಚಿವ ಸಂಪುಟದ ಪರಿಷತ್  ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ. 192ಎ ಕಾಲಂ ಸ್ಥಗಿತಗೊಳಿಸಿರುವಂಥದ್ದು ಬಹಳ ಖುಷಿಯ ವಿಚಾರ. ಕಾರಣ ಒಂದು…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಅಪಘಾತ – ಚಾಲಕ ಸಾವು

ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಅಂಚೆ ಕಚೇರಿ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಅಪಘಾತವಾಗಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ಪಟ್ಟಣದ ಶಬರೀಶನಗರದ ನಿವಾಸಿ ಶ್ರೀನಿವಾಸ್(36) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಸಾಗರ ರಸ್ತೆಯಿಂದ ರಿಪ್ಪನ್ ಪೇಟೆ ಕಡೆಗೆ ಬರುತ್ತಿದ್ದ ಗೂಡ್ಸ್ ಆಟೊ ಅಂಚೆ ಕಚೇರಿ ಮುಂಭಾಗದಲ್ಲಿ ಇರುವ ದೊಡ್ಡ ಗುಂಡಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಅಲ್ಲಿಯೇ ನಿಂತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ.ಈ ಅಪಘಾತದಲ್ಲಿ ಗೂಡ್ಸ್ ಆಟೊ ಸ್ಟೇರಿಂಗ್ ಚಾಲಕನ ಹೊಟ್ಟೆಗೆ…

Read More

ಹಣದ ವಿಚಾರಕ್ಕೆ ಗುತ್ತಿಗೆದಾರನಿಂದ ತಂದೆ ಮತ್ತು ಮಗನಿಗೆ ಚಾಕು ಇರಿತ : ತಂದೆ ಸಾವು

ಹಣದ ವಿಚಾರದಲ್ಲಿ ಅಪ್ಪ ಮತ್ತು ಮಗನಿಗೆ ಕಟ್ಟಡದ ಕಂಟ್ರ್ಯಾಕ್ಟರ್ ಚಾಕುವಿನಿಂದ ಇರಿದ ಘಟನೆ ಶಿರಾಳಕೊಪ್ಪದಲ್ಲಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ತಂದೆ ದಯಾನಂದ್(69) ಮೃತಪಟ್ಟಿದ್ದಾರೆ. ದಯಾನಂದ್ ಮತ್ತು ರಾಘವೇಂದ್ರ ಎಂಬುವರು ಶಿರಾಳಕೊಪ್ಪದಲ್ಲಿ ಹಾರ್ಡ್ ವೇರ್ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದು ಇವರ ನಿವೇಶನದ ಜಾಗದಲ್ಲಿ ಕಟ್ಟಡ ಕಟ್ಟಲು ಕಂಟ್ರ್ಯಾಕ್ಟರ್ ಕೋಟೇಶ್ ಎಂಬುವರಿಗೆ ಗುತ್ತಿಗೆ ನೀಡಲಾಗಿತ್ತು. ಕಟ್ಟಡ ಸರಿ ಕಟ್ಟುತ್ತಿಲ್ಲವೆಂದು ಅಪ್ಪ ದಯಾನಂದ್ ಮತ್ತು ಮಗ ರಾಘವೇಂದ್ರ ಬೇರೆಯವರಿಗೆ ಕಟ್ಟಡದ ಗುತ್ತಿಗೆಯನ್ನ ನೀಡಿದ್ದರು. ಕಟ್ಟಡ ನಿರ್ಮಾಣದ ಬಾಕಿ ಹಾಣ…

Read More

ತೀರ್ಥಹಳ್ಳಿ ಕ್ಷೇತ್ರದ ಘನತೆ ಕಾಪಾಡಲು ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು – ಕಿಮ್ಮನೆ ರತ್ನಾಕರ್

ತೀರ್ಥಹಳ್ಳಿ : ರಾಜ್ಯಾದ್ಯಂತ ಗೃಹಸಚಿವರ ಮೇಲೆ ಬಹುದೊಡ್ಡ ಸೈಟ್ ಹಗರಣದ ಆಪಾದನೆ ಇದೆ. ಆರಗ ಜ್ಞಾನೇಂದ್ರರವರು ಬೆಂಗಳೂರಿನಲ್ಲಿ ಅಕ್ರಮವಾಗಿ 50 ಕೋಟಿ ಸೈಟ್ ತಾವು ತೆಗೆದುಕೊಂಡು ಅಧಿಕಾರಿಗಳನ್ನು ಮನೆಗೆ ಹೋಗುವ ಹಾಗೆ ಮಾಡಿದ್ದಾರೆ. ಹೈಕೋರ್ಟ್ ಕೂಡ ಈ ವಿಚಾರವಾಗಿ ಇವರ ಕಪಾಳಕ್ಕೆ ಹೊಡೆದಿದ್ದಾರೆ. ಹಾಗಾಗಿ ತೀರ್ಥಹಳ್ಳಿ ಕ್ಷೇತ್ರದ ಘನತೆ ಕಾಪಾಡಲು ರಾಜೀನಾಮೆ ಕೊಡಬೇಕು ಎಂದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ಆಗಿನ ಕಾಲದಲ್ಲಿ ಕಡಿದಾಳ್ ಮಂಜಪ್ಪನವರಿಗೆ ಸೈಟ್ ಕೊಡಲು ಹೋದಾಗಲೇ ಅದನ್ನು ತಿರಸ್ಕಾರ…

Read More

ಸ್ಮಶಾನದ ಜಾಗ ಒತ್ತುವರಿ : ಮೃತದೇಹ ಇಟ್ಟು ಗ್ರಾಮಸ್ಥರ ಪ್ರತಿಭಟನೆ

ಸೊರಬ : ಸರ್ಕಾರದಿಂದ ಮಂಜೂರಾದ ರುದ್ರಭೂಮಿಯನ್ನು ಅತಿಕ್ರಮಣಕಾರರಿಂದ ತೆರವುಗೊಳಿಸುವಂತೆ ಒತ್ತಾಯಿಸಿ ಊರಿನ ಗ್ರಾಮಸ್ಥರೆಲ್ಲಾ ಸೇರಿ ಮೃತದೇಹವನ್ನು ಇಟ್ಟು ಸೊರಬ ಮುಖ್ಯ ರಸ್ತೆಯಲ್ಲಿ ಪ್ರತಿಭಟಿಸಿದ ಘಟನೆ ನಡೆದಿದೆ. ತಾಲೂಕಿನ ಹೆಚ್ಚೆ ಗ್ರಾಮದಲ್ಲಿ ಮಂಜೂರಾದ ರುದ್ರಭೂಮಿಯನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿದ್ದು, ಅದನ್ನು ತೆರವುಗೊಳಿಸಿ ಗಡಿ ಗುರುತಿಸುವಂತೆ ಹತ್ತಾರು ಬಾರಿ ಮನವಿ ನೀಡಿದರೂ ಸಂಬಂಧಪಟ್ಟವರು  ಸ್ಪಂದಿಸಿಲ್ಲ ಹಾಗಾಗಿ ಈ ದಿನ ಹೆಚ್ಚೆ ಊರಿನಲ್ಲಿ ನಿಧನರಾದವರ ಮೃತದೇಹವನ್ನು ಸೊರಬ ಪಟ್ಟಣಕ್ಕೆ ತಂದು ಪ್ರತಿಭಟಿಸಿದ್ದಾರೆ. ಸರ್ಕಾರದಿಂದ 4 ಎಕರೆ ಜಾಗ ಮಂಜೂರಾಗಿದೆ ಆದರೆ…

Read More

ಬೆಂಗಳೂರು ಪೊಲೀಸರಿಗೆ ತೀರ್ಥಹಳ್ಳಿಯ ಗಾಂಧಿಚೌಕದಲ್ಲಿ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದ ನಟೋರಿಯಸ್ ಕ್ರಿಮಿನಲ್ ಮೋಹಿತ್ ಬಂಧನ :

ತೀರ್ಥಹಳ್ಳಿ : ಕೆಲವು ದಿನಗಳ ಹಿಂದೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕದಲ್ಲಿ ಬೆಂಗಳೂರು ಪೊಲೀಸರಿಂದ ತಪ್ಪಿಸಿಕೊಂಡಿದ್ದ ಕೈಮರ ಮೋಹಿತ್  ಎಂಬುವ ನಟೋರಿಯಸ್ ನನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದಾರೆ. ತೀರ್ಥಹಳ್ಳಿ ತುಂಗಾ ಕಾಲೇಜು ಸಮೀಪ ಬದನೇ ಹಿತ್ಲು  ನಿವಾಸಿ ಸಕೇಶ್ ಬಿನ್ ಕೃಷ್ಣ ಶೆಟ್ಟಿ ರವರನ್ನು .ಮೋಹಿತ್ ಮತ್ತು ಆತನ ಸಹಚರರಾದ ಉದಯ ಹಾಗೂ ಅನ್ಸರ್ ಎಂಬುವರು ಅಡ್ಡಗಟ್ಟಿ ದರೋಡೆಗೆ ಪ್ರಯತ್ನಿಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ಸಕೇಶ್  ನೀಡಿದ ದೂರಿನ ಮೇರೆಗೆ ತೀರ್ಥಹಳ್ಳಿ ಪೊಲೀಸರು…

Read More