ಅಧಿಕಾರದಲ್ಲಿದ್ದಾಗ ಒಂದೂ ಸೇತುವೆಯನ್ನು ಕಟ್ಟದೆ ಇದ್ದವರು ಈಗ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ : ಹರತಾಳು ಹಾಲಪ್ಪ

ಹಸಿರುಮಕ್ಕಿ ಸೇತುವೆ ಕಾಮಗಾರಿ ವಿಳಂಬಕ್ಕೆ ನಾನು ಕಾರಣವಲ್ಲ. ಅನಗತ್ಯವಾಗಿ ನನ್ನ ಮೇಲೆ ಆರೋಪ ಹೊರಿಸುವ ಕೆಲಸವನ್ನು ಕಾಂಗ್ರೆಸ್ ಸೇರಿದಂತೆ ವಿರೋಧಿಗಳು ಮಾಡುತ್ತಿದ್ದಾರೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ತಾಲೂಕಿನ ಹಸಿರುಮಕ್ಕಿ ಸೇತುವೆಯನ್ನು ಭಾನುವಾರ ವೀಕ್ಷಣೆ ಮಾಡಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ತಾವು ಅಧಿಕಾರದಲ್ಲಿದ್ದಾಗ ಒಂದೂ ಸೇತುವೆಯನ್ನು ಕಟ್ಟದೆ ಇದ್ದವರು ಈಗ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿ, ಶೀಘ್ರದಲ್ಲಿ ಎದುರಾಗಲಿರುವ ಚುನಾವಣೆಯಲ್ಲಿ ಲಾಭ ಗಳಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ದೂರಿದರು.

2018 ರಲ್ಲಿ ಕಾಗೋಡು ತಿಮ್ಮಪ್ಪ ಅವರು ಸಚಿವರಾಗಿದ್ದ ಸಂದರ್ಭದಲ್ಲಿ 115.59 ಕೋಟಿ ರೂ. ವೆಚ್ಚದಲ್ಲಿ ಹಸಿರುಮಕ್ಕಿ ಸೇತುವೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಕಾಗೋಡು ಆಲೋಚನೆ ಉತ್ತಮವಾಗಿದೆ. ಆದರೆ ಗುತ್ತಿಗೆದಾರ ಕಂಪನಿ ಅವೈಜ್ಞಾನಿಕವಾಗಿ ತಾಂತ್ರಿಕ ವರದಿ ತಯಾರಿಸಿ ಪ್ರಸ್ತಾವನೆ ಸಲ್ಲಿಸಿದ್ದೇ ಸೇತುವೆ ವಿಳಂಬವಾಗಲು ಕಾರಣವಾಗಿದೆ. 1,155 ಮೀ. ಉದ್ದ, 35 ಮೀ. ಅಗಲದ ಹಸಿರುಮಕ್ಕಿ ಸೇತುವೆ 33 ಫಿಲ್ಲರ್ ಮೇಲೆ ನಿರ್ಮಾಣಗೊಳ್ಳಬೇಕು. ಆದರೆ ಚೀನಾ ಮೂಲದ ಎಸ್‌ಪಿಎಲ್ ಇನ್‌ಫಾಸ್ಟ್ರೆಕ್ಚರ್ ಸಂಸ್ಥೆ ಡಿಪಿಆರ್ ತಯಾರಿಸುವಾಗ ನೀರಿನ ಆಳವನ್ನು ಸರಿಯಾಗಿ ಅಂದಾಜು ಮಾಡಿಲ್ಲ. ಇದೀಗ ಮತ್ತೆ 110 ಕೋಟಿ ರೂ. ಸೇತುವೆ ಕಾಮಗಾರಿ ಪೂರ್ಣಗೊಳ್ಳಲು ಬೇಕು ಎಂದು ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಿದರು.

2022 ರ ಮಾರ್ಚ್‌ಗೆ ಕಾಮಗಾರಿ ಮುಗಿಯಬೇಕಾಗಿತ್ತು. ಎರಡು ವರ್ಷ ಕೊರೊನಾ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬವಾಗಿತ್ತು. ಈ ವರ್ಷ ಕಾರ್ಮಿಕರ ಕೊರತೆ ನೆಪ ಹೇಳಲಾಗುತ್ತಿದೆ. ಇದೀಗ ಹಣದ ಕೊರತೆ ಇದೆ ಎಂದು ಹೇಳಿದ್ದರಿಂದ ಬೆಂಗಳೂರಿನಲ್ಲಿ ಕಾಮಗಾರಿ ಉಸ್ತುವಾರಿ ವಹಿಸಿರುವ ಕರ್ನಾಟಕ ರಸ್ತೆ ಅಭಿವೃದ್ದಿ ನಿಗಮದ ಅಧ್ಯಕ್ಷರು ಮತ್ತು ಅಧಿಕಾರಿಗಳ ಸಭೆ ಕರೆದು ಹೆಚ್ಚುವರಿ ಹಣಕ್ಕೆ ಬೇಡಿಕೆ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿ ಶೀಘ್ರದಲ್ಲಿಯೆ ಕಾಮಗಾರಿಗೆ ಹೆಚ್ಚುವರಿ ಹಣ ಬಿಡುಗಡೆ ಮಾಡಲು ಪ್ರಯತ್ನಿಸಲಾಗುತ್ತಿದೆ. ಹಾಲಿ ನಿರ್ವಹಿಸಿರುವ ಕಾಮಗಾರಿಯ ಪೂರ್ಣ ಹಣವನ್ನು ಪಾವತಿ ಮಾಡಲಾಗಿದೆ. ಕಾಮಗಾರಿಗೆ ಸಂಬಂಧಪಟ್ಟ ಹಣವನ್ನು ಹಾಲಪ್ಪ ಕೊಡಿಸಿಲ್ಲ, ಸರ್ಕಾರ ಬಿಡುಗಡೆ ಮಾಡಿಲ್ಲ ಎನ್ನುವುದು ಸುಳ್ಳು ಸುದ್ದಿಯಾಗಿದೆ ಎಂದು ತಿಳಿಸಿದರು.

ಕೆಲವರು ಸೇತುವೆ ಕಾಮಗಾರಿ ವಿಳಂಬವಾಗಿರುವುದಕ್ಕೆ ನಾನೇ ಕಾರಣ ಎಂದು ಹೋರಾಟ ಹಮ್ಮಿಕೊಂಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟಕ್ಕೆ ನಾನು ಬೆಲೆ ಕೊಡುತ್ತೇನೆ. ಆದರೆ ಹಿಂದೆ ಕಾಗೋಡು ತಿಮ್ಮಪ್ಪ ಅವರು ಸರಿಯಾದ ಗುತ್ತಿಗೆದಾರ ಸಂಸ್ಥೆಯನ್ನು ಗುರುತಿಸದೆ ಕಾಮಗಾರಿ ಹೊಣೆ ನೀಡಿದ್ದು ಯಾರ ತಪ್ಪು. ಮುಂದಿನ ಒಂದರಿಂದ ಎರಡು ವರ್ಷದೊಳಗೆ ಹೆಚ್ಚುವರಿ ಹಣ ಕೊಡಿಸಿ ಹಸಿರುಮಕ್ಕಿ ಸೇತುವೆ ಕಾಮಗಾರಿ ಪೂರ್ಣಗೊಳಿಸಲಾಗುತ್ತದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಕೆಆರ್‌ಐಡಿಎಲ್ ಅಧಿಕಾರಿಗಳು, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್, ಪ್ರಮುಖರಾದ ಸುವರ್ಣ ಟೀಕಪ್ಪ, ಸುಬ್ರಹ್ಮಣ್ಯ, ಅಶೋಕ್, ಚೇತನರಾಜ್ ಕಣ್ಣೂರು, ಗಿರೀಶ್ ಗೌಡ, ಸಿದ್ದುಗೌಡ, ಮಂಜಯ್ಯ ಜೈನ್, ಅರುಣ್ ಇನ್ನಿತರರು ಹಾಜರಿದ್ದರು

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

9 hours ago

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

22 hours ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

23 hours ago

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

23 hours ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

24 hours ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

2 days ago