ಹುಂಚ : ಇತ್ತೀಚೆಗೆ ಹುಂಚಾ ವ್ಯವಸಾಯ ಸಹಕಾರ ಸಂಘದ ಅಧ್ಯಕ್ಷರು ಸೇರಿದಂತೆ ಐವರು ನಿರ್ದೇಶಕರು ರಾಜಿನಾಮೆ ಪ್ರಹಸನ ಸುಖಾಂತ್ಯವಾಯಿತು ಎನ್ನುವ ಮೊದಲು ಡಿಸಿಸಿ ಬ್ಯಾಂಕ್ ಈಗ ಸುಸ್ತಿದಾರ ಸೊಸೈಟಿ ಎಂದು ಘೋಷಿಸಿ ಎರಡು ಲಕ್ಷಕ್ಕೂ ಹೆಚ್ಚು ಬಡ್ಡಿ ವಿಧಿಸಿದ್ದಾರೆಂದು ತಿಳಿದು ಬಂದಿದೆ.
ಹುಂಚಾ ವ್ಯವಸಾಯ ಸಹಕಾರಿಯ ಆಡಿಟ್ ವರದಿಯಲ್ಲಿ ಐವತ್ತು ಲಕ್ಷಕ್ಕೂ ಹೆಚ್ಚೂ ವ್ಯತ್ಯಾಸವಾಗಿದೆ ಎಂಬ ಸುದ್ದಿಗೆ ಬೆದರಿ ಅಧ್ಯಕ್ಷರು ಸೇರಿದಂತೆ ಐವರು ನಿರ್ದೇಶಕರು ರಾಜಿನಾಮೆ ನೀಡಿದ್ದರು . ಉಳಿದ ನಿರ್ದೇಶಕರು ಎದ್ದು ಬಿದ್ದು ಆಡಿಟರ್ ರಿಂದ ಸರಿ ಮಾಡಿಸಿ ವರದಿ ಕೊಡಿಸುವ ವಾಗ್ದಾನ ನೀಡಿ ರಾಜಿನಾಮೆ ಪ್ರಹಸನವನ್ನು ತಣ್ಣಗಾಗಿಸಿದ್ದರು
ಆದರೆ ಇದರ ನಡುವೆ ಸಾಲ ಪಡೆದಿದ್ದ ರೈತರು ಹಣವನ್ನು ವಾಪಾಸು ಕಟ್ಟಿದ್ದು ಡಿಸಿಸಿ ಸಾಲದ ಅಕೌಂಟಗೆ ಜಮಾ ಆಗುವ ಬದಲು ಕರೆಂಟ್ ಅಕೌಂಟ್ ಗೆ ಜಮಾ ಆಗಿದ್ದು ಇನ್ನೊಂದು ರಗಳೆ ಸೃಷ್ಟಿಸಿದೆ. ಅಧ್ಯಕ್ಷರು ರಾಜಿನಾಮೆ ನೀಡಿದ್ದರಿಂದ ಸೈನಿಂಗ್ ಅಥಾರಿಟಿ ಇಲ್ಲದೆ ಸುಸ್ತಿಯಾಗಿದ್ದು ಈಗ ಎರಡು ಲಕ್ಷಕ್ಕು ಹೆಚ್ಚು ಬಡ್ದಿಯನ್ನು ಡಿಸಿಸಿ ಬ್ಯಾಂಕ್ ವಿಧಿಸಿದೆ ಎನ್ನಲಾಗುತ್ತಿದೆ.
ಈ ಬಡ್ಡಿ ಹಣಕ್ಕೆ ಅಧ್ಯಕ್ಷರ ರಾಜೀನಾಮೆ ಮತ್ತು ರಾಜೀನಾಮೆ ವಾಪಸಾತಿ ಪ್ರಕರಣದ ಕಾರಣಕ್ಕೆ ಸಂಬಂಧಿಸಿದ್ದರಿಂದ ಅಧ್ಯಕ್ಷರನ್ನು ಹೊಣೆ ಮಾಡುತ್ತಾರೊ??? ಅಥವಾ ನಿರ್ದೇಶಕರ ಮಂಡಳಿ ಹೊಣೆಯಾಗುತ್ತದೊ.?? ಇಲ್ಲಾ ಕೊನೆಗೆ ಕುರಿಯಾಗುವ ಸರದಿ ರೈತರದ್ದಾಗಿ , ಎಲ್ಲಾ ಷೇರುದಾರರಿಂದ ವಸೂಲಿ ಮಾಡಲಾಗುತ್ತದೋ ಕಾದು ನೋಡಬೇಕಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್