ಮನೆ ಬಾಡಿಗೆಗೆ ಬೇಕು ಎಂದು ದಂಪತಿಗಳ ಪೋಷಾಕಿನಲ್ಲಿ ಬಂದ ಅಪರಿಚಿತ ಪುರುಷ ಮತ್ತು ಮಹಿಳೆ ಮಾಲೀಕನ ಮನೆಗೆ ನುಗ್ಗಿ ಚಿನ್ನಾಭರಣವನ್ನ ಹೊತ್ತೊಯ್ದ ಘಟನೆ ಶಿವಮೊಗ್ಗದ ಜಯನಗರದಲ್ಲಿ ನಡೆದಿದೆ.ಕಳ್ಳತನಕ್ಕೆ ಬುರ್ಖಾ ಧರಿಸಿ ಬಂದಿದ್ದ ಖತರ್ನಾಕ್ ಲೇಡಿಯನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯ ಹಿನ್ನಲೆ :
ಶಿವಮೊಗ್ಗ ನಗರದ ಜಯನಗರ ಮೊದಲನೇ ತಿರುವಿನಲ್ಲಿರುವ ಸಮರ್ಥ ಅಪಾರ್ಟ್ ಮೆಂಟ್ ನ ಬಳಿ ಬುರ್ಕಾ ಹಾಕಿಕೊಂಡು ಬಂದ ಅಪರಿಚಿತ ಮಹಿಳೆ ಮತ್ತು ಅಪರಿಚಿತ ಪುರುಷ ಮನೆ ಬಾಡಿಗೆ ಇದೆಯಾ ಎಂದು ವಿಚಾರಿಸಿದ್ದಾರೆ..
ಪಕ್ಕದ ಮನೆ ಬಾಡಿಗೆ ಇದೆ ಎಂದು ಚಂದ್ರಕಲಾ ರವರು ತಿಳಿಸಿ ಫೊನ್ ನಂಬರ್ ಇದೆ ಸಂಪರ್ಕಿಸಿ ಎಂದು ಹೇಳಿ ಮನೆಯೊಳಗೆ ಹೋಗಿದ್ದಾರೆ.ಈ ಸಂಧರ್ಭದಲ್ಲಿ ಚಂದ್ರಕಲಾ ರವರ ಪತಿ ಮನೆಯಲ್ಲಿ ಇಲ್ಲದಿರುವುದನ್ನು ಖಾತ್ರಿಪಡೆಸಿಕೊಂಡಿದ್ದಾರೆ.
ನಂತರ ಸಂಜೆ 6 ಗಂಟೆಗೆ ಮನೆ ಬಾಡಿಗೆ ಕೇಳಿಕೊಂಡು ಬಂದ ಇಬ್ವರು ಅಪರಿಚಿತರು ಚಂದ್ರಕಲಾರ ಮನೆಯೊಳಗೆ ನುಗ್ಗಿದ್ದಾರೆ.ಮನೆಯೊಳಗೆ ನುಗ್ಗಿದ ಬುರ್ಕಾ ಧರಿಸಿದ ಮಹಿಳೆ ಚಂದ್ರಕಲಾ ಅವರ ಬಾಯಿಯನ್ನು ಅದುಮಿಟ್ಟಿದ್ದಾರೆ. ಬುರ್ಕಾ ಧರಿಸಿದ ಹೆಂಗಸಿನ ಜೊತೆ ಬಂದ ಗಂಡಸು ಚಂದ್ರಕಲಾರ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರಕ್ಕೆ ಕೈಹಾಕಿದ್ದಾನೆ. ಚಂದ್ರಕಲಾ ಕಿರುಚಿಕೊಂಡಿದ್ದಾರೆ. ಈ ಸಂಧರ್ಭದಲ್ಲಿ ಅಪರಿಚಿತ ಪುರುಷ ಮನೆಯಿಂದ ಓಡಿಹೋಗುವಾಗ ಟಿವಿ ಮೇಲೆ ಇಟ್ಟಿದ್ದ 21 ಗ್ರಾಂ ಚಿನ್ನದ ಸರವನ್ನ ಎತ್ತಿಕೊಂಡು ಹೋಗಿದ್ದಾನೆ.
ಬುರ್ಖಾ ಧರಿಸಿ ಕಳ್ಳತನಕ್ಕೆ ಬಂದಿದ್ದ ಅಪರಿಚಿತ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಚಿಕ್ಕಮಗಳೂರಿನ ಭಾಗ್ಯ ಎಂಬುವಳಿಂದ ಈ ಕೃತ್ಯ ನಡೆದಿದೆ.
ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್