…………………………ಪೋಸ್ಟ್ ಮ್ಯಾನ್ ನ್ಯೂಸ್ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಪಟ್ಟಣದಲ್ಲಿ ಹೆಡ್ ಕಾನ್ಸ್ಟೇಬಲ್ (head constable) ವಿರುದ್ಧ ಮಹಿಳೆಯೊಬ್ಬರು ಭದ್ರಾವತಿಯ ಟೌನ್ ಸರ್ಕಲ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಿದ್ದಾರೆ.
ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ರಾಘವೇಂದ್ರ ವಿರುದ್ಧ ಕೆ.ರೇಖಾ ಎಂಬುವವರು ಆರೋಪ ಮಾಡಿದ್ದಾರೆ.
ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದ ಕೆ.ರೇಖಾ 2019ರ ಫೆಬ್ರವರಿಯಲ್ಲಿ ತನ್ನ ಪತಿ ಆಂಜನೇಯ ಮತ್ತು ಅವರ ತಮ್ಮ ರಮೇಶನ ನಡುವೆ ಆಸ್ತಿಯ ವಿಚಾರವಾಗಿ (matter of property) ವಿವಾದವಾಗಿತ್ತು. ಈ ಹಿನ್ನೆಲೆ ಹೊಳೆಹೊನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಠಾಣೆಯಲ್ಲಿದ್ದ ಹೆಡ್ ಕಾನ್ಸ್ಟೇಬಲ್ ರಾಘವೇಂದ್ರ ದೂರು ವಿಚಾರಣೆ ನಡೆಸಿ, ಸಮಸ್ಯೆ ಬಗೆಹರಿಸಿದ್ದರು. ಅಲ್ಲದೇ ಏನಾದರೂ ತಂಟೆ ತಕರಾರು ತೆಗೆದರೆ ನನ್ನ ನಂಬರ್ಗೆ ಪೋನ್ ಮಾಡಿ ಎಂದು ಹೇಳಿ ಆ ಮಹಿಳೆಯ ಪೋನ್ ನಂಬರ್ ಪಡೆದಿದ್ದರು.
ಆಬಳಿಕ ರಾಘವೇಂದ್ರ ಮಹಿಳೆಗೆ ಪದೇಪದೇ ಪೋನ್ ಮಾಡುತ್ತಿದ್ದರು. ಇದರಿಂದ ಇಬ್ಬರಲ್ಲೂ ಸಲಿಗೆ ಬೆಳೆದಿತ್ತು. ಇನ್ನೂ ಮಹಿಳೆಯನ್ನು ಒತ್ತಾಯ ಪೂರ್ವಕವಾಗಿ ಹತ್ತಿರದ ಕೈಮರಕ್ಕೆ ಕರೆಸಿಕೊಂಡು ತನ್ನದೇ ಕಾರಿನಲ್ಲಿ ಶಿವಮೊಗ್ಗ, ಭದ್ರಾವತಿ ಮತ್ತು ಇತರೆ ಕಡೆಗೆ ಕರೆದುಕೊಂಡು ಹೋಗಿ ದೈಹಿಕವಾಗಿ ದೌರ್ಜನ್ಯ ಎಸಗಿ ಸಂಜೆ ವಾಪಸ್ಸು ಕೈಮರಕ್ಕೆ ಕರೆದುಕೊಂಡು ಬಂದು ಬಿಡುತ್ತಿದ್ದರು.
ಇನ್ನೂ 2020ನೇ ಇಸವಿಯ ಜೂನ್ 11ನೇ ತಾರೀಖು ಆನವೇರಿ ಸರ್ಕಲ್ಗೆ ಮಹಿಳೆಯನ್ನು ಕರೆಸಿಕೊಂಡು ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಪರಿಚಯವಿದ್ದ ಸಲ್ಮಾ ಎಂಬವರ ಮನೆಗೆ ರಾಘವೇಂದ್ರ ಕರೆದುಕೊಂಡು ಹೋಗಿ ರೇಖಾರವರನ್ನು ಪುಸಲಾಯಿಸಿ ಬಲವಂತದಿಂದ ದೈಹಿಕ ಸಂಪರ್ಕ ಹೊಂದಿದ್ದ.
ಈ ವಿಚಾರವನ್ನು ಯಾರಿಗೂ ಹೇಳದಂತೆ ಹೆದರಿಸಿ, ನಿನ್ನ ಗಂಡ, ಸಂಬಂಧಿಕರಿಗೆ ನಾನೇ ವಿಷಯ ತಿಳಿಸಬೇಕಾಗುತ್ತದೆ ಎಂದು ಹೇಳಿ ತಾನು ಬಳಸುತ್ತಿದ್ದ ಪೋನ್ ನಂಬರ್ ಚೇಂಜ್ ಮಾಡಿ ಕೊಟ್ಟು ಪುನಃ ಆನವೇರಿಗೆ ತಂದು ಬಿಟ್ಟಿದ್ದರು. ಇದಾದ ನಂತರ ರಾಘವೇಂದ್ರ ಪದೇಪದೇ (repeatedly) ಕರೆ ಮಾಡಿ, ಮಾನಸಿಕ ಹಿಂಸೆ ನೀಡುತ್ತಿದ್ದಾನೆ. ಇದರಿಂದ ಮನನೊಂದು ತಡವಾಗಿ ದೂರು ನೀಡುತ್ತಿದ್ದೇನೆ ಎಂದು ಸಂತ್ರಸ್ತೆ ಕೆ.ರೇಖಾ ದೂರಿನಲ್ಲಿ ತಿಳಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್