ನಗರ ಶೂಟೌಟ್ ಪ್ರಕರಣ : ಅಂಬರೀಶ್ ಕೊಲೆ ಕೇಸನ್ನು ಮುಚ್ಚಿಹಾಕಲು ಗೃಹಸಚಿವ ಆರಗ ಜ್ಞಾನೇಂದ್ರ ಪ್ರಯತ್ನಿಸುತ್ತಿದ್ದಾರೆ – ಬೇಳೂರು ಆರೋಪ !!

ತೀರ್ಥಹಳ್ಳಿ : ನಗರ ಹೋಬಳಿಯ ನೇಗಿಲೋನಿ ಗ್ರಾಮದ ಅಂಬರೀಶ್ ಎನ್ನುವವರ ಗನ್ ಶಾಟ್ ಘಟನೆ ನಡೆದು 26 ದಿನವಾದರೂ ಕುಟುಂಬದವರಿಗೆ  ನ್ಯಾಯ ಸಿಕ್ಕಿಲ್ಲ. ಈ ಕೂಡಲೇ ಸರಿಯಾದ ರೀತಿಯಲ್ಲಿ ತನಿಖೆ ನೆಡೆಸಿ ಕುಟುಂಬದವರಿಗೆ ನ್ಯಾಯ ಕೊಡಿಸದಿದ್ದರೆ ಉಗ್ರ ಹೋರಾಟದ ನಡೆಸಲಾಗುವುದು ಎಂದು ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಎಚ್ಚರಿಕೆ ನೀಡಿದರು.


ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ನೇಗಿಲೋನಿ ಗ್ರಾಮದಲ್ಲಿ ಶೂಟೌಟ್ ಆಗಿದ್ದು ಬಡ ಕುಟುಂಬದ ಅಂಬರೀಶ್ ಎನ್ನುವವನನ್ನು ಕೀರ್ತಿ ಎನ್ನುವ ಯುವಕ ಆಗಸ್ಟ್ 26 ರಾತ್ರಿ ಸಂಜೆ 7 ಗಂಟೆಗೆ ಕರೆದುಕೊಂಡು ಹೋಗುತ್ತಾನೆ. ಮಾರನೇ ದಿನವಾದರೂ ಅಂಬರೀಶ್ ಮನೆಗೆ ಬರದಿದ್ದಾಗ ಎಲ್ಲರೂ ಹುಡುಕಲು ಹೋದಾಗ ಮದ್ಯಾನ್ಹದ ವೇಳೆ ಶವ ಸಿಗುತ್ತದೆ ಎಂದರು.


ವಿಶೇಷವೆಂದರೆ ಕುಟುಂಬದವರು ಪೊಲೀಸರಿಗೆ ಕಂಪ್ಲೇಂಟ್ ಮಾಡದಿದ್ದರೂ ವಿಷಯ ತಿಳಿಸದಿದ್ದರೂ ಆ ಜಾಗಕ್ಕೆ ಪೊಲೀಸರು ಬಂದಿದ್ದಾರೆ. ಕಂಪ್ಲೇಂಟ್ ಆಗದೆ ಏಕಾಏಕಿ ಪೊಲೀಸರು ಆ ಜಾಗಕ್ಕೆ ಹೇಗೆ ಬಂದರು ಪೊಲೀಸರಿಗೆ ಮಾಹಿತಿ ತಿಳಿಸಿದವರ್ಯಾರು ಎನ್ನುವುದೇ ಪ್ರೆಶ್ನೆಯಾಗಿದೆ ಎಂದರು.


ಈ ಎಲ್ಲಾ ಘಟನೆ ನಂತರ ಪೊಲೀಸರಿಗೆ , ಡಿ ವೈ ಎಸ್ ಪಿ ಗೆ, ಗೃಹಸಚಿವರಿಗೂ ಈ ಎಲ್ಲಾ ವಿಷಯ ಗೊತ್ತಿದೆ. ಆದರೂ ಈ ವಿಷಯದ ಬಗ್ಗೆ ಗೃಹಸಚಿವರು ಮೌನವಾಗಿರುವುದು ಯಾಕೆ ? ಗೃಹಸಚಿವರು ಏನ್ ಮಾಡ್ತಿದ್ದಾರೆ ? ಹಿಂದೂ ಕಾರ್ಯಕರ್ತರಾದ ಹರ್ಷ, ಪ್ರವೀಣ್ ಹತ್ಯೆಯಾದಾಗ ಆ ವಿಷಯವನ್ನು ದೊಡ್ಡದಾಗಿ ಮಾಡ್ತೀರಿ, ನಿಮ್ಮ ಕ್ಷೇತ್ರದಲ್ಲಿ ಶೂಟೌಟ್ ಆದರೂ ಕಣ್ಣು ಮುಚ್ಚಿ ಕುಳಿತ್ತಿದ್ದೀರಾ ಎಂದು ಬೇಳೂರು ಪ್ರೆಶ್ನಿಸಿದರು.


ಮುಸ್ಲಿಂ ಸಮುದಾಯದವರು ಸಾಯಿಸಿದ್ರೆ ಮಾತ್ರ ಹಿಂದುತ್ವ ಅಂತ ಪ್ರಚಾರ ಕೊಡ್ತೀರಾ, ಇವರು ಹಿಂದೂಗಳಲ್ವಾ, ಸಾಯಿಸಿರುವ ವ್ಯಕ್ತಿ ಬಿಜೆಪಿ ಕಾರ್ಯಕರ್ತನಾಗಿದ್ದು ತಮ್ಮ ಕಾರ್ಯಕರ್ತರನ್ನು ಉಳಿಸಲು ಈ ರೀತಿ ಪ್ರಯತ್ನವನ್ನು ಗೃಹಸಚಿವರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಅಂಗಡಿ ನಾಗರಾಜ್ ಎನ್ನುವವರ ಗನ್ ಎಂದು ಕೀರ್ತಿ ಹೇಳಿದ್ದು ಕೀರ್ತಿನೂ ಹಾಗೂ ನಾಗರಾಜ್ ಇಬ್ಬರು ಕಾಣಿಸುತ್ತಿಲ್ಲ. ಈ ಒಂದು ಕೊಲೆ ಕೇಸನ್ನು  ಮುಚ್ಚಿಹಾಕಲು ಗೃಹಸಚಿವ ಆರಗ ಜ್ಞಾನೇಂದ್ರ  ಪ್ರಯತ್ನಿಸುತ್ತಿದ್ದಾರೆ.


ಇನ್ನು ಕೀರ್ತಿ ಕುಟುಂಬದವರು ಅಂಬರೀಶ್ ಕುಟುಂಬದವರ ಬಳಿ ಕೇಸ್ ಮುಚ್ಚಿ ಹಾಕಲು ಪೊಲೀಸರ ಸಮ್ಮುಖದಲ್ಲೆ ರಾಜೀಯಾಗಲು ಎರಡು ಲಕ್ಷ ಕೊಡಲು ಬಂದಿದ್ದರು. ಡಿ ವೈ ಎಸ್ ಪಿ ಕೂಡ ಇದರಲ್ಲಿ ಶಾಮಿಲಾಗಿದ್ದಾರೆ ಎಂದು ಗೋಪಾಲಕೃಷ್ಣ ಗುಡುಗಿದರು.


ಈ ಸಂದರ್ಭದಲ್ಲಿ ಟಿ ಎಲ್ ಸುಂದರೇಶ್, ಮತ್ತಿನಮನೆ ರಾಮಚಂದ್ರ, ಮಾಸ್ತಿಕಟ್ಟೆ ವಾಸಪ್ಪ, ವಿಕ್ರಂ,ಕುರುವಳ್ಳಿ ನಾಗರಾಜ್, ನಾಗರಾಜ್ ಪೂಜಾರಿ, ತಾರಾಮೂರ್ತಿ, ಸೋಮಣ್ಣ, ಪದ್ಭಾನಾಬ್ ಪೂಜಾರಿ ಸೇರಿ ಹಲವರು ಉಪಸ್ಥಿತರಿದ್ದರು.





ವರದಿ : ಅಕ್ಷಯ್ ಕುಮಾರ್
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 hour ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

2 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

4 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

4 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

7 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

7 hours ago